LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ವಯನಾಡು ಲೋಕಸಭಾ ಉಪ ಚುನಾವಣೆ: ಪ್ರಿಯಾಂಕಾ ಗಾಂಧಿ ಭವಿಷ್ಯ ಇಂದು ನಿರ್ಧಾರ

ನವದೆಹಲಿ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ರಾಜೀನಾಮೆಯಿಂದ ತೆರವಾದ ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆ ಮತದಾನ ಮುಂಜಾನೆ 7ಕ್ಕೆ ಆರಂಭವಾಗಿದ್ದು, ಕ್ಷೇತ್ರದಲ್ಲಿ ಸ್ಪರ್ಧೆಗಿಳಿದಿರುವ ಪ್ರಿಯಾಂಕಾ ಗಾಂಧಿ ಅವರ ಭವಿಷ್ಯ ಇಂದು ನಿರ್ಧಾರವಾಗಲಿದೆ.

ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾಗಾಂಧಿ ವದ್ರಾ ಮೊಟ್ಟಮೊದಲ ಬಾರಿಗೆ ಚುನಾವಣಾ ಕಣಕ್ಕೆ ಧುಮುಕಿದ್ದಾರೆ. ಪ್ರಿಯಾಂಕಾ ಅವರ ಸಹೋದರ ರಾಹುಲ್ ಗಾಂಧಿಯವರು ರಾಯಬರೇಲಿ ಕ್ಷೇತ್ರದಿಂದಲೂ ಆಯ್ಕೆಯಾದ ಹಿನ್ನೆಲೆಯಲ್ಲಿ ವಯನಾಡ್ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದೆ.

ಪ್ರಿಯಾಂಕಾ ವಿರುದ್ಧ ಎಲ್ಡಿಎಫ್ನ ಸತ್ಯನ್ ಮೊಕೇರಿ ಮತ್ತು ಎನ್ಡಿಎಯ ನವ್ಯ ಹರಿದಾಸ್ ಹಾಗೂ ಇತರ 13 ಮಂದಿ ಅಭ್ಯರ್ಥಿಗಳಿದ್ದಾರೆ. 2019ರ ಚುನಾವಣೆಯಲ್ಲಿ ರಾಹುಲ್ 4.3 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರೆ, ಕಳೆದ ಬಾರಿ ವಿಜಯದ ಅಂತರ 3.5 ಲಕ್ಷಕ್ಕೆ ಕುಸಿದಿತ್ತು.

ಮತದಾನ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕಾ ಗಾಂಧಿಯವರ, ನನ್ನ ಪ್ರೀತಿಯ ಸಹೋದರಿ, ಸಹೋದರರೇ, ದಯವಿಟ್ಟು ಇಂದು ಮತ ಚಲಾಯಿಸಿ, ಇದು ನಿಮ್ಮ ದಿನವಾಗಿದೆ. ನಮ್ಮ ಸಂವಿಧಾನವು ನಿಮಗೆ ನೀಡಿದ ಮಹಾನ್ ಅಧಿಕಾರವನ್ನು ಚಲಾಯಿಸುವ ದಿನ. ನಾವು ಒಟ್ಟಾಗಿ ಉತ್ತಮ ಭವಿಷ್ಯವನ್ನು ನಿರ್ಮಿಸೋಣ ಎಂದು ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು