LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ವಯನಾಡು ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಕೇರಳದ ವಯನಾಡ್‌ನಿಂದ ನಡೆದ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಕಾಂಗ್ರೆಸ್‌‍ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಗುರುವಾರ ಲೋಕಸಭೆಯ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಕೈಯಲ್ಲಿ ಸಂವಿಧಾನದ ಪುಸ್ತಕ ಹಿಡಿದು ಪ್ರಿಯಾಂಕಾ ಅವರು ಪ್ರಮಾಣವಚನ ಸ್ವೀಕಾರ ಮಾಡಿದ್ದು, ಪ್ರಿಯಾಂಕಾ ಅವರಿಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಪ್ರಮಾಣ ವಚನ ಬೋಧಿಸಿದರು.

ಇದೇ ವೇಳೆ ನಾಂದೇಡ್‌ ಉಪಚುನಾವಣೆಯಲ್ಲಿ ಗೆದ್ದಿರುವ ರವೀಂದ್ರ ಚವಾಣ್‌ (ಕಾಂಗ್ರೆಸ್‌) ಕೂಡ ದೇವರ ಹೆಸರಿನಲ್ಲಿ ಮರಾಠಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇತ್ತೀಚೆಗೆ ಅವರ ತಂದೆ ವಸಂತರಾವ್‌ ಚವಾಣ್‌ ಅವರ ನಿಧನದ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆದಿತ್ತು.

ಪ್ರಿಯಾಂಕಾ ಗಾಂಧಿ 2019 ರಲ್ಲಿ ಸಕ್ರಿಯ ರಾಜಕೀಯಕ್ಕೆ ಧುಮುಕಿದರು ಮತ್ತು ನಂತರ ಕಾಂಗ್ರೆಸ್‌‍ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡರು. ಐದು ವರ್ಷಗಳ ನಂತರ, ಪ್ರಿಯಾಂಕಾ ಗಾಂಧಿ ಅವರು ಚುನಾಯಿತ ಜನಪ್ರತಿನಿಧಿಯಾಗಿ ತಮ ಪ್ರಯಾಣವನ್ನು ಪ್ರಾರಂಭಿಸಿದ್ದಾರೆ.

ಪ್ರಮಾಣವಚನ ಸ್ವೀಕಾರದ ವೇಳೆ ಪ್ರಿಯಾಂಕಾ ಅವರು ಕೇರಳದ ಬ್ರೋಕೆಡ್ ಸೀರೆಯನ್ನು ಧರಿಸಿದ್ದರು. ತನ್ನ ತಾಯಿ ಸೋನಿಯಾ ಗಾಂಧಿ, ಸಹೋದರ ರಾಹುಲ್ ಗಾಂಧಿ ಮತ್ತು ಪತಿ ರಾಬರ್ಟ್ ವಾದ್ರಾ ಅವರೊಂದಿಗೆ ಸಂಸತ್ ಭವನಕ್ಕೆ ಆಗಮಿಸಿದ್ದರು. ಅಲ್ಲದೆ, ಪ್ರಿಯಾಂಕಾ ಅವರ ಮಕ್ಕಳಿಬ್ಬರೂ ಸಂಸತ್​ಗೆ ಆಗಮಿಸಿದ್ದರು.

ಇತ್ತೀಚೆಗೆ ಪ್ರಕಟಗೊಂಡ ವಯನಾಡ್ ಲೋಕಸಭಾ ಉಪ ಚುನಾವಣೆಯಲ್ಲಿ 4 ಲಕ್ಷಕ್ಕೂ ಹೆಚ್ಚು ಮತಗಳ ದಾಖಲೆ ಅಂತರದಿಂದ ಗೆಲುವು ಸಾಧಿಸಿರುವ ಪ್ರಿಯಾಂಕಾ ಗಾಂಧಿ, ಆ ಮೂಲಕ ಪ್ರಪ್ರಥಮ ಬಾರಿಗೆ ಚುನಾಯಿತ ಪ್ರತಿನಿಧಿಯಾಗಿದ್ದಾರೆ.

ಇಲ್ಲಿಯವರೆಗೆ ಪಕ್ಷ ಸಂಘಟನೆಯಲ್ಲಿ ತಮ್ಮ ಸಹೋದರ ರಾಹುಲ್ ಗಾಂಧಿಗೆ ನೆರವು ನೀಡುತ್ತಾ ಬಂದಿದ್ದ ಪ್ರಿಯಾಂಕಾ ಗಾಂಧಿ, ಇದೀಗ ಲೋಕಸಭೆಯಲ್ಲೂ ತಮ್ಮ ಸಹೋದರನಿಗೆ ಸಾಥ್ ನೀಡಲಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು