LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ವಾಯು ವಜ್ರ ಬಸ್‌ನಲ್ಲಿನ ಪ್ರಯಾಣಿಕರ ಸಂಖ್ಯೆ ಹೆಚ್ಚಳ

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರ ಸಂಖ್ಯೆಯಲ್ಲಿ ನಿರಂತರ ಏರಿಕೆಯಿಂದಾಗಿ, ನಗರ ಮತ್ತು ವಿಮಾನ ನಿಲ್ದಾಣದ ನಡುವೆ ಬಿಎಂಟಿಸಿ ನಿರ್ವಹಿಸುವ ವಾಯು ವಜ್ರ ಬಸ್‌ನಲ್ಲಿನ ಪ್ರಯಾಣಿಕರ ಸಂಖ್ಯೆಯಲ್ಲೂ ಕೂಡ ಏರಿಕೆಯಾಗಿದೆ.

ವಾಯುವಜ್ರ ಬಸ್ ಸೇವೆ 2008ರ ಆರಂಭದಲ್ಲಿ ಕಾರ್ಯಾಚರಣೆ ಆರಂಭಿಸಿತ್ತು. ಆದರೆ, ಸೇವೆ ಆರಂಭವಾದ ಬಳಿಕ ಇದೇ ಮೊದಲ ಬಾರಿಗೆ ಒಂದು ತಿಂಗಳಿನಲ್ಲಿ ವಾಯು ವಜ್ರ ಬಸ್ ಬಳಸಿದ ಪ್ರಯಾಣಿಕರ ಸಂಖ್ಯೆ 4 ಲಕ್ಷ ದಾಟಿದೆ.

ಒಟ್ಟು 144 ಬಸ್‌ಗಳು 17 ಮಾರ್ಗಗಳಲ್ಲಿ ವಿಮಾನ ನಿಲ್ದಾಣಕ್ಕೆ ಎರಡೂ ದಿಕ್ಕುಗಳಲ್ಲಿ ಪ್ರತಿದಿನ 990 ಟ್ರಿಪ್‌ಗಳಂತೆ ಕಾರ್ಯ ನಿರ್ವಹಿಸುತ್ತಿವೆ.

ಬಿಎಂಟಿಸಿ ಮುಖ್ಯ ಟ್ರಾಫಿಕ್ ಮ್ಯಾನೇಜರ್ ಜಿಟಿ ಪ್ರಭಾಕರ ರೆಡ್ಡಿ ಅವರು ಮಾತನಾಡಿ, ನವೆಂಬರ್ ತಿಂಗಳಿನಲ್ಲಿ 4,07,531 ಪ್ರಯಾಣಿಕರು ವಾಯು ವಜ್ರದ ಸೇವೆಗಳನ್ನು ಬಳಿಸಿದ್ದಾರೆಂದು ಹೇಳಿದ್ದಾರೆ.

4 ಲಕ್ಷದ ಗಡಿ ದಾಟುತ್ತಿರುವುದು ಇದೇ ಮೊದಲು. ದಿನಕ್ಕೆ ಸರಾಸರಿ 13,584 ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಆದರೆ, ನವೆಂಬರ್ ತಿಂಗಳಿನಲ್ಲಿ 4 ಲಕ್ಷಕ್ಕೂ ಹೆಚ್ಚು ಜನರು ಪ್ರಯಾಣ ಮಾಡಿದ್ದಾರೆ. ಇದರೊಂದಿಗೆ 11,13,71,983 ರೂ ಆದಾಯ ಬಂದಿದೆ. ಇದೇ ಮೊದಲ ಬಾರಿಗೆ ವಾಯು ವಜ್ರ ಬಸ್ ಗಳಿಂದ ಬಂದ ಆದಾಯ ಒಂದೇ ತಿಂಗಳಲ್ಲಿ 11 ಕೋಟಿ ರೂಪಾಯಿ ದಾಟಿದೆ ಎಂದು ತಿಳಿಸಿದ್ದಾರೆ.

ಇದಕ್ಕೆ ಯಾವುದೇ ನಿರ್ದಿಷ್ಟ ಕಾರಣ ಹೇಳಲು ಸಾಧ್ಯವಿಲ್ಲ. ವಿಮಾನ ನಿಲ್ದಾಣಕ್ಕೆ ಆಗಮಿಸುವ ಅಥವಾ ನಿರ್ಗಮಿಸುವ ಫ್ಲೈಯರ್‌ಗಳ ಸಂಖ್ಯೆ ಹೆಚ್ಚಳವಾಗಿದೆ. ಇತರ ಸಾರಿಗೆ ವಿಧಾನಗಳಿಗೆ ಹೋಲಿಸಿದರೆ ನಮ್ಮ ಟಿಕೆಟ್ ಬೆಲೆ, ಪ್ರಯಾಣದ ಸೌಕರ್ಯ ಮತ್ತು ಹೆಚ್ಚುವರಿ ಮಾರ್ಗಗಳು ಮತ್ತು ಬೇಡಿಕೆಯ ಆಧಾರದ ಮೇಲೆ ನಾವು ಕಾರ್ಯನಿರ್ವಹಿಸುತ್ತಿರುವುದು ಇದಕ್ಕೆ ಕಾರಣವಾಗಿವೆ ಎಂದು ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು