LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ವಿಜಯೇಂದ್ರ ಒಪ್ಪಿಗೆ ಇಲ್ಲದೆ ವಕ್ಫ್ ಹೋರಾಟ: ಸ್ವಕ್ಷೇತ್ರದಲ್ಲೇ ಯತ್ನಾಳ್'ಗೆ ವಿರೋಧ

ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಒಪ್ಪಿಗೆ ಇಲ್ಲದೆ ವಕ್ಫ್ ವಿವಾದ ಸಂಬಂಧ ಪ್ರತ್ಯೇಕ ಪ್ರತಿಭಟನೆ ಆರಂಭಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸ್ವಕ್ಷೇತ್ರ ವಿಜಯಪುರದಲ್ಲೇ ವಿರೋಧಗಳು ವ್ಯಕ್ತವಾಗುತ್ತಿವೆ.

ಬಿಜೆಪಿ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಸುರೇಶ ಬಿರಾದಾರ್, ಪಕ್ಷದ ರಾಜ್ಯ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗೋಪಾಲ ಘಟಕಾಂಬ್ಳೆ ಸುದ್ದಿಗೋಷ್ಠಿ ನಡೆಸಿ ಯತ್ನಾಳ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ, ಯತ್ನಾಳ್ ಅವರನ್ನು ಬಿಜೆಪಿ ಹೈಕಮಾಂಡ್ ಪಕ್ಷದಿಂದ ಉಚ್ಚಾಟಿಸಬೇಕು ಎಂದು ಒತ್ತಾಯಿಸಿದರು.

ಯತ್ನಾಳ್ ಅವರು ವಕ್ಫ್ ವಿಚಾರಕ್ಕಿಂತ ಬಿಜೆಪಿ ವಿರುದ್ಧವೇ ದನಿಯೆತ್ತಿದ್ದಾರೆ. ಯತ್ನಾಳ್ ಅವರ ಎಲ್ಲಾ ಕಾರ್ಯಗಳು ಪಕ್ಷವನ್ನು ಹಾಳು ಮಾಡುತ್ತಿವೆ. ಪಕ್ಷದ ಕಾರ್ಯಕರ್ತರ ಆತ್ಮಸ್ಥೈರ್ಯವನ್ನೂ ಕುಗ್ಗಿಸುತ್ತಿವೆ, ಇಷ್ಟೆಲ್ಲಾ ಆಗುತ್ತಿದ್ದರೂ ಕಾಂಗ್ರೆಸ್ ವಿರುದ್ಧ ಹೋರಾಡಲು ಪಕ್ಷವನ್ನು ಒಗ್ಗೂಡಿಸಲಾಗುತ್ತಿದೆ ಎಂದು ಹೇಳುತ್ತಿದ್ದಾರೆ. ಇದೀಗ ಕೇಂದ್ರ ನಾಯಕತ್ವ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂದು ಹೇಳಿದರು.

ರಾಜ್ಯಾಧ್ಯಕ್ಷರು, ಕೇಂದ್ರ ನಾಯಕರ ಬೆಂಬಲ ಮತ್ತು ಒಪ್ಪಿಗೆಯೊಂದಿಗೆ ಯತ್ನಾಳ್ ಅವರು ರ್ಯಾಲಿಯನ್ನು ಆಯೋಜಿಸಿದ್ದರೆ ನಮಗೆ ಯಾವುದೇ ಸಮಸ್ಯೆ ಇರಲಿಲ್ಲ. ಆದರೆ, ಅವರು ಪ್ರತ್ಯೇಕ ಪ್ರತಿಭಟನೆ ನಡೆಸಿದರು. ಇದು ಕರ್ನಾಟಕ ಬಿಜೆಪಿಯಲ್ಲಿ ಒಗ್ಗಟ್ಟು ಇಲ್ಲ ಎಂಬ ಸ್ಪಷ್ಟ ಸಂದೇಶವನ್ನು ಪ್ರತಿಪಕ್ಷಗಳಲ್ಲಿ ನೀಡುತ್ತಿದೆ. ಯತ್ನಾಳ್ ಪಕ್ಷಕ್ಕೆ ಅಪಾಯಕಾರಿಯಾಗಿದ್ದಾರೆ. ಹೀಗಾಗಿ ಯತ್ನಾಳ್ ಮತ್ತು ಅವರ ತಂಡದ ವಿರುದ್ಧ ಅಸಮಾಧಾನಗೊಂಡಿರುವ ಪಕ್ಷದ ನೂರಾರು ಕಾರ್ಯಕರ್ತರ ಪರವಾಗಿ ನಾವು ಮಾತನಾಡುತ್ತಿದ್ದೇವೆಂದು ತಿಳಿಸಿದ್ದಾರೆ.

ಕಾಂಗ್ರೆಸ್‌ನಿಂದ ಸುಪಾರಿ ಪಡೆದು ಬಿಜೆಪಿ ಮುಗಿಸಲು ನಡೆಸುತ್ತಿರುವ ಪಕ್ಷ ವಿರೋಧಿ ಜಾಥಾ ವಿಜಯಪುರ ಜಿಲ್ಲೆ ಪ್ರವೇಶ ಮಾಡಿದರೆ ತಡೆವೊಡ್ಡುತ್ತೇವೆಂದು ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು