LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ವಿದ್ಯಾರ್ಥಿಗಳಿಂದ ಕಲಾ ಮತ್ತು ವಿಜ್ಞಾನ ವಸ್ತು ಪ್ರದರ್ಶನ

ನೆಲಮಂಗಲ: ಮಕ್ಕಳಲ್ಲಿ ತಂತ್ರಜ್ಞಾನ, ಪರಿಸರ ಕಾಳಜಿ ಹಾಗೂ ಚರಿತ್ರೆಯ ಬಗ್ಗೆ ಆಸಕ್ತಿ ಬೆಳೆಯುಲು ಅವರಲ್ಲಿರುವ ಸೃಜನಶೀಲತೆಗೆ ಉತ್ತೇಜನ ಸಿಗಲು ಜ್ಞಾನ ವೃದ್ಧಿಗೆ ಪ್ರದರ್ಶನಗಳು ಪೂರಕವಾಗಿವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಬೈಲಾಂಜನಪ್ಪ ಅಭಿಪ್ರಾಯಪಟ್ಟರು.

ನಗರದ ವಾಜರಹಳ್ಳಿ ಮಾರುತಿನಗರದ ಥಾಮಸ್ ಮೆಮೋರಿಯಲ್ ಆಂಗ್ಲ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ವಿಜ್ಞಾನ ಮತ್ತು ಕಲಾ ವಸ್ತು ಪ್ರದರ್ಶನದಲ್ಲಿ ಮಾತನಾಡಿದ ಅವರು, ಜೀವನದ ಪ್ರತಿ ಸಮಯದಲ್ಲಿಯೂ ವಿಜ್ಞಾನದ ಭಾಗವಾಗಿಯೇ ಬದುಕಬೇಕಾಗಿದೆ ಎಂದರು.ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆ, ಸೃಜನಶೀಲತೆ ಬೆಳೆಸುವ ಒಂದು ಮಾರ್ಗ. ವಿಜ್ಞಾನದ ಹೊರೆತು ಯಾವುದು ಇಲ್ಲ.

ವಿಜ್ಞಾನ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದ್ದು, ವೈಜ್ಞಾನಿಕ ಚಿಂತೆನ ಹೊಂದುವುದರ ಮೂಲಕ ಮೂಢನಂಬಿಕೆ ಹೊಗಲಾಡಿಸಬೇಕು ವಿದ್ಯಾರ್ಥಿಗಳು ವಿಜ್ಞಾನ ಮಹತ್ವ ಹಾಗೂ ಅದರಿಂದ ಬದಲಾವಣೆಗಳನ್ನು ಅರಿಯಬೇಕು ಎಂದು ಹೇಳಿದರು.ಥಾಮಸ್ ಶಾಲೆಯ ವಿದ್ಯಾರ್ಥಿಗಳು ವಿಜ್ಞಾನ ವಿಷಯದ ಅನೇಕ ಮಾದರಿಗಳನ್ನು ಸಿದ್ಧಪಡಿಸಿ, ಪ್ರದರ್ಶಿಸಿದರು. ಪ್ರದರ್ಶನದಲ್ಲಿ 488 ವಿದ್ಯಾರ್ಥಿಗಳು ಮತ್ತು 400 ಪೋಷಕರು ಭಾಗವಹಿಸಿದ್ದರು. ಸಂದರ್ಭದಲ್ಲಿ ಥಾಮಸ್ ಮೆಮೋರಿಯಲ್ ಶಾಲೆಯ ಸಂಸ್ಥಾಪಕ ಅಧ್ಯಕ್ಷೆ ಸಿಸ್ಟರ್ ಜೋಶ್ನಾ ಫ್ರಾನ್ಸಿಸ್ ಆಂಟೊನಿ, ಪುರಸಭೆ ಮಾಜಿ ಅಧ್ಯಕ್ಷರವಿ, ಶಿಕ್ಷಕರಾದ ಹರ್ಷವರ್ಧನ್, ಪ್ರಜ್ವಲ, ಶ್ರೀದೇವಿ, ಪ್ರಭಾವತಿ, ಮೋಹನ್, ಹರ್ಷಿತ್ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು