LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ವಿಪಕ್ಷ ಸಂಸದರ ನಡುವೆ ವಾಗ್ಯುದ್ಧ: ಡಿ. 9ರವರೆಗೆ ಲೋಕಸಭೆ ಕಲಾಪ ಮುಂದೂಡಿಕೆ

ನವದೆಹಲಿ: ಲೋಕಸಭೆಯಲ್ಲಿ ಶುಕ್ರವಾರ ಬೆಳಗ್ಗೆ ಬಿಜೆಪಿ ಹಾಗೂ ಪ್ರತಿಪಕ್ಷ ಸದಸ್ಯರ ನಡುವೆ ಮಾತಿನ ಚಕಮಕಿ ಉಂಟಾದ ಹಿನ್ನೆಲೆಯಲ್ಲಿ ಮಧ್ಯಾಹ್ನದವರೆಗೂ ಮುಂದೂಡಲಾಗಿತ್ತು.

ಬಳಿಕ ಸದನ ಸಮಾವೇಶಗೊಂಡಾಗಲೂ ಅಮೆರಿಕ ಮೂಲದ ಬಿಲಿಯನರ್ ಹೂಡಿಕೆದಾರ ಜಾರ್ಜ್ ಸೊರೊಸ್ ಜೊತೆಗೆ ಕಾಂಗ್ರೆಸ್ ನಂಟು ಹೊಂದಿದೆ ಎಂದು ಬಿಜೆಪಿ ಆರೋಪದೊಂದಿಗೆ ಸದನದಲ್ಲಿ ಗದ್ದಲ, ಕೋಲಾಹಲವೇರ್ಪಟ್ಟು, ಸ್ಪೀಕರ್ ಓಂ ಬಿರ್ಲಾ ಸೋಮವಾರದವರೆಗೂ ಕಲಾಪವನ್ನು ಮುಂದೂಡಿದರು.

ಪ್ರಶ್ನೋತ್ತರ ವೇಳೆಯಲ್ಲಿ ವಿರೋಧ ಪಕ್ಷದ ಸಂಸದರು ತಮ್ಮ ವಿಷಯಗಳನ್ನು ಪ್ರಸ್ತಾಪಿಸಲು ಪ್ರಯತ್ನಿಸಿದ ನಂತರ ಸದನದ ಘಟನೆ ಕುಗ್ಗಿಸಲು ಅವಕಾಶ ನೀಡುವುದಿಲ್ಲ ಎಂದು ಸ್ಪೀಕರ್ ಹೇಳುವುದರೊಂದಿಗೆ ಲೋಕಸಭೆಯ ಕಲಾಪವನ್ನು ಮಧ್ಯಾಹ್ನ 12 ಕ್ಕೆ ಮುಂದೂಡಲಾಯಿತು.

ಬಹುತೇಕ ಕಾಂಗ್ರೆಸ್ ಸದಸ್ಯರು ಕೆಲವು ವಿಷಯಗಳನ್ನು ಪ್ರಸ್ತಾಪಿಸಲು ಪ್ರಯತ್ನಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸ್ಪೀಕರ್ ಇದು ಪ್ರಶ್ನೋತ್ತರ ಸಮಯವಾಗಿರುವುದರಿಂದ ಇತರ ವಿಷಯಗಳ ಚರ್ಚೆಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿ ಸದನವನ್ನು ಮುಂದೂಡಿದರು.

ಅದಾನಿ ಸಮೂಹ ಮತ್ತು ಸಂಭಾಲ್ ಹಿಂಸಾಚಾರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಲು ಒತ್ತಾಯಿಸಿ ಪ್ರತಿಪಕ್ಷಗಳ ಪ್ರತಿಭಟನೆಯಿಂದಾಗಿ ಚಳಿಗಾಲದ ಅಧಿವೇಶನದ ಮೊದಲ ವಾರ ಸದನ ಸರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗಲಿಲ್ಲ. ಆದರೂ ಮಂಗಳವಾರ ಮತ್ತು ಬುಧವಾರ ಸರಿಯಾಗಿ ಕಾರ್ಯನಿರ್ವಹಿಸಿತು.

ಬಿಜೆಪಿ ಸದಸ್ಯ ನಿಶಿಕಾಂತ್ ದುಬೆ ವಿದೇಶಿ ಹೂಡಿಕೆದಾರ ಜಾರ್ಜ್ ಸೊರೊಸ್ ಮತ್ತು ವಿರೋಧ ಪಕ್ಷದ ನಾಯಕರ ನಡುವೆ ಸಂಬಂಧವಿದೆ. ಪ್ರಧಾನಿ ನರೇಂದ್ರ ಮೋದಿ ನಾಯಕತ್ವದ ಭಾರತದ ಯಶಸ್ಸನ್ನು ಹಾಳು ಮಾಡಲು ಅಂತರರಾಷ್ಟ್ರೀಯ ಪಿತೂರಿ ನಡೆಯುತ್ತಿದೆ ಎಂದು ಹೇಳಿದ ನಂತರ ಸದನದಲ್ಲಿ ತೀವ್ರ ಗದ್ದಲ ಉಂಟಾಗಿತ್ತು.

ಕಾಂಗ್ರೆಸ್ ನಾಯಕ ಗೌರವ್ ಗೊಗೊಯ್ ಮತ್ತಿತರರು ದುಬೆ ಮಾಡಿದ ಆರೋಪಗಳನ್ನು ಎದುರಿಸಲು ಪ್ರಯತ್ನಿಸಿದರು, ಇದು ಕೋಲಾಹಲಕ್ಕೆ ಕಾರಣವಾಯಿತು ಮತ್ತು ಸದನವನ್ನು ಮುಂದೂಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು