LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ವಿವಿಧ ಸೇವಾ ಚಟುವಟಿಕೆ ಮೂಲಕ ಬಿಎಸ್‍ವೈ ಜನ್ಮ ದಿನಾಚರಣೆ: ಪಿ.ರಾಜೀವ್

ಬೆಂಗಳೂರು: ರೈತನಾಯಕ, ಹೋರಾಟಗಾರ, ಮಾಜಿ ಮುಖ್ಯಮಂತ್ರಿ, ಬಿಜೆಪಿ ಕೇಂದ್ರ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರ 83ನೇ ವರ್ಷದ ಜನ್ಮ ದಿನವನ್ನು ಫೆ.27ರಂದು ವಿವಿಧ ಚಟುವಟಿಕೆಗಳ ಮೂಲಕ ಆಚರಿಸಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ತಿಳಿಸಿದ್ದಾರೆ.ರೈತರಿಗೆ ರಾಜ್ಯದ ವತಿಯಿಂದ ಹೆಚ್ಚುವರಿಯಾಗಿ 4 ಸಾವಿರ ರೂ. ರೈತ ಸಮ್ಮಾನ್ ನಿಧಿ ನೀಡಿದ ಯಡಿಯೂರಪ್ಪ ಅವರ ಸನ್ಮಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ. ಯಡಿಯೂರಪ್ಪ ಅವರ ಅಭಿಮಾನಿಗಳು ಮತ್ತು ಕಾರ್ಯಕರ್ತರು ರಾಜ್ಯದ ಎಲ್ಲ ಮತಕ್ಷೇತ್ರಗಳಲ್ಲಿ ಇಂಥ ಕಾರ್ಯಕ್ರಮಗಳನ್ನು ಆಯೋಜಿಸಲು ಕೋರಿದ್ದಾರೆ.

ಶಿಕ್ಷಣವನ್ನು  ಪ್ರೋತ್ಸಾಹಿಸುವ ದೃಷ್ಟಿಯಿಂದ ಯಡಿಯೂರಪ್ಪ ಅವರು ವಿದ್ಯಾರ್ಥಿಗಳಿಗೆ ಬೈಸಿಕಲ್ ನೀಡಿದ್ದರು. ಇದರ ಪ್ರಯೋಜನ ಪಡೆದು ಉದ್ಯಮಿಗಳಾದವರು, ಸಾಧಕರಾದ ವಿದ್ಯಾರ್ಥಿಗಳಿಗೆ ಸನ್ಮಾನವನ್ನು ಹಮ್ಮಿಕೊಳ್ಳಲು ಅವರು ತಿಳಿಸಿದ್ದಾರೆ. ಯಡಿಯೂರಪ್ಪನವರು ಭಾಗ್ಯಲಕ್ಷ್ಮಿ ಯೋಜನೆಯ ಬಾಂಡ್ ನೀಡಿದ್ದು, ಈ ಬಾಂಡ್ ಪಡೆದವರಿಗೆ ಇದೀಗ ಚೆಕ್ ಲಭಿಸಿದೆ. ಬಾಲಕಿಯರ ಸಂಖ್ಯೆ ಹೆಚ್ಚಳ, ಹೆಣ್ಮಕ್ಕಳಿಗೆ ಶಿಕ್ಷಣದ ಉದ್ದೇಶ ಇದರಡಿ ಇದ್ದು, ಈ ಯೋಜನೆ ಅನುಷ್ಠಾನ ಸಂಬಂಧ ಸನ್ಮಾನ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲು ತಿಳಿಸಿದ್ದಾರೆ.

ರಾಜ್ಯದ ಎಲ್ಲ ದೇವಸ್ಥಾನಗಳಲ್ಲಿ ಯಡಿಯೂರಪ್ಪ ಅವರ ಆಯುರಾರೋಗ್ಯ ವೃದ್ಧಿಗೆ ಪ್ರಾರ್ಥಿಸಿ ಪೂಜೆ ಸಲ್ಲಿಸುವಂತೆ ಅವರು ಮನವಿ ಮಾಡಿದ್ದಾರೆ. ಯುವ ಮೋರ್ಚಾ, ಮಹಿಳಾ ಮೋರ್ಚಾ, ರೈತ ಮೋರ್ಚಾ ಕಾರ್ಯಕರ್ತರು ರಕ್ತದಾನ ಶಿಬಿರ, ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಎಂದು ಅವರು ಸೂಚಿಸಿದ್ದಾರೆ.27ರಂದು ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಯಡಿಯೂರಪ್ಪ ಅವರು ತಮ್ಮ ಡಾಲರ್ಸ್ ಕಾಲೊನಿಯ ನಿವಾಸದಲ್ಲಿ ಲಭ್ಯರಿರುತ್ತಾರೆ. ಬಳಿಕ ಅವರು ಮಂಡ್ಯ ಜಿಲ್ಲೆಯ ಬೂಕನಕೆರೆಗೆ ತೆರಳುವರು ಹಾಗೂ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸುವರೆಂದು ಪಿ.ರಾಜೀವ್ ಅವರು ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು