LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ವಿಶ್ವ ಕನ್ನಡ ಹಬ್ಬದಲ್ಲಿ ಬುಡಕಟ್ಟು ಜನಾಂಗದವರಿಗೆ ಮೊದಲ ಆದ್ಯತೆ

ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ರವರು ಕನ್ನಡ ಸಂಘ ಸಿಂಗಪುರ ರವರ ಸಹಯೋಗದೊಂದಿಗೆ ಸಿಂಗಪುರದಲ್ಲಿ ಆಯೋಜಿಸಿದ್ದ ಎರಡನೇ ವಿಶ್ವಕನ್ನಡ ಹಬ್ಬವು ಅದ್ದೂರಿಯಾಗಿ ನೆರವೇರಿತು. ಸಿದ್ದಿ ಜನಾಂಗದ ಬುಡಕಟ್ಟು ಕಲಾವಿದರನ್ನು ಗುರುತಿಸಿ ವಿದೇಶದಲ್ಲಿ ನಡೆದ ವಿಶ್ವ ಕನ್ನಡ ಹಬ್ಬದ ಕಾರ್ಯಕ್ರಮದಲ್ಲಿ ಮೊದಲ ಬಾರಿಗೆ ಅವರಿಗೆ ಅವಕಾಶ ಕಲ್ಪಿಸಿಕೊಟ್ಟದ್ದು ವಿಶೇಷವಾಗಿತ್ತು.

ಸಿಂಗಪುರದ ಪೊಂಗಲ್ ನಗರದಲ್ಲಿರುವ ಗ್ಲೋಬಲ್ ಇಂಟರ್ ನ್ಯಾಷನಲ್ ಸ್ಕೂಲ್ ನ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮ ಅದ್ಭುತವಾಗಿ ಮೂಡಿಬಂತು. ಸಿಂಗಪುರದ ಸಂಸದರಾದವಿಕ್ರಮ್ ನಾಯರ್, ಮಹರ್ಷಿ ಆನಂದ್ ಗುರೂಜಿ, ಇಸ್ರೋ ವಿಜ್ಞಾನಿಗಳಾದಕಿರಣ್ ಕುಮಾರ್ಕಾ, ರ್ಯಕ್ರಮದ ಸರ್ವಾಧ್ಯಕ್ಷರಾದ ಸಿ ಸೋಮಶೇಖರ್, ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಅಧ್ಯಕ್ಷರಾದ ಟಿ ಶಿವಕುಮಾರ್ ನಾಗರ ನವಿಲೆ, ಸಿಂಗಪುರದ ಕನ್ನಡ ಸಂಘದ ಅಧ್ಯಕ್ಷರಾದ ವೆಂಕಟ ರತ್ನಯ್ಯ, ಶ್ರೀ ಪ್ರಸಾದ್ ಗುರೂಜಿ, ಶ್ರೀ ಬಸವ ರಮಾನಂದ ಸ್ವಾಮೀಜಿ, ದಿನೇಶ್ ಜೋಶಿ, ಚಲನಚಿತ್ರ ನಟರಾದ ವಸಿಷ್ಟ ಸಿಂಹ ಹರಿಪ್ರಿಯ ಈ ಗಣ್ಯರನ್ನು ಹುಲಿ ವೇಷದಾರಿಗಳು, ಭರತನಾಟ್ಯ ಕಲಾವಿದರು, ಯಕ್ಷಗಾನ ಕಲಾವಿದರು, ಸಿದ್ದಿ ಕಲಾವಿದರು, ಸಿಂಗಾಪುರದ ಸಾಂಸ್ಕೃತಿಕ ಕಲಾವಿದರು ಮತ್ತು ಮಹಿಳೆಯರು ಕುಂಭಮೇಳದೊಂದಿಗೆ ಹಾಗೂ ಸಕಲ ಗೌರವಗಳೊಂದಿಗೆ ವೇದಿಕೆಯ ಬಳಿ ಕರೆತಂದರು. ಕಾವ್ಯ ರವರು ರಾಷ್ಟ್ರಧ್ವಜವನ್ನು ವೇದಿಕೆಗೆ ತಂದರು.

ಕಿಕ್ಕೇರಿ ಕೃಷ್ಣಮೂರ್ತಿ ಮತ್ತು ತಂಡದವರು ನಾಡಗೀತೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು.ಕಾರ್ಯಕ್ರಮದಲ್ಲಿ ಇಸ್ರೋ ವಿಜ್ಞಾನಿಗಳಾದ ಕಿರಣ್ ಕುಮಾರ್ ರವರಿಗೆ ವಿಶ್ವಮಾನವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಸಾಧಕರಿಗೆ ವಿಶ್ವಚೇತನ ಮತ್ತು ವಿಶ್ವಮಾನ್ಯ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರ್ವಾಧ್ಯಕ್ಷರಾದ ಸಿ ಸೋಮಶೇಖರ್ ರವರು ನೆರವೇರಿಸಿದರು.

ಈ ಕಾರ್ಯಕ್ರಮದಲ್ಲಿ ಕವಿಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ, ಜಾನಪದ ಗಾಯನ, ನಾಟಕ, ವಿಶ್ವ ಕನ್ನಡ ಹಬ್ಬಕ್ಕೆ ದುಡಿದ ರೂವಾರಿಗಳಿಗೆ ಗೌರವ ಸನ್ಮಾನ ನೆರವೇರಿತು. ಈ ಕಾರ್ಯಕ್ರಮದಲ್ಲಿ ಬೆಂಗಳೂರಿನ ಸುಮಾರು 150 ಜನ ಕಲಾವಿದರು ಭಾಗವಹಿಸಿದ್ದರು. ಮೂಲ ಕನ್ನಡಿಗರು ಮತ್ತು ಅನಿವಾಸಿ ಕನ್ನಡಿಗರೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು. ಸಭಾಂಗಣ ತುಂಬಿದ ಕಾರ್ಯಕ್ರಮವನ್ನು ಎಲ್ಲರೂ ಕಣ್ತುಂಬಿಸಿಕೊಂಡರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು