LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವಿಲೀನವಿಲ್ಲ: ಕಾಶಪ್ಪನವರ್

ಬೆಂಗಳೂರು: ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮವನ್ನು ದೇವರಾಜು ಅರಸು ಹಿಂದುಳಿದ ಅಭಿವೃದ್ಧಿ ನಿಗಮಕ್ಕೆ ವಿಲೀನಗೊಳಿಸುವ ವಿಚಾರಕ್ಕೆ ನಿಗಮದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮಾಜ ಸುಮಾರು ಶೇಕಡ 23ರಷ್ಟು ಜನಸಂಖ್ಯೆ ಇದೆ, ಈ ಸಮುದಾಯದಲ್ಲೂ ಬಡವರಿದ್ದಾರೆ, ಅಂತವರ ಆರ್ಥಿಕ, ಸಾಮಾಜಿಕ ಹೇಳಿಕೆಗಾಗಿ ನಿಗಮವನ್ನು ಪ್ರೇರೇಪವಾಗಿ ಸ್ಥಾಪಿಸಲಾಗಿದೆ. ಆದರೆ, ಇದನ್ನು ಬೆರಳು ನಿಗಮದ ಜೊತೆಗೆ ಹುಲಿನಗೊಳಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು. ಅಲ್ಲದೆ ಈ ಬಾರಿ ವಿವಿಧ ಯೋಜನೆಗಳಿಗಾಗಿ ಫಲಾನುಭವಿಗಳಿಂದ ಸುಮಾರು 55 ಸಾವಿರಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿದ್ದೇವೆ.

ಆದರೆ, ಇವರೆಲ್ಲರಿಗೂ ಯೋಜನೆಯನ್ನು ತಲುಪಿಸಲು ಈಗ ನೀಡುತ್ತಿರುವ ಅನುದಾನ ಸಾಕಾಗುತ್ತಿಲ್ಲ. ಹೀಗಾಗಿ ನಮ್ಮ ನಿಗಮಕ್ಕೆ 500 ಕೋಟಿ ರೂ. ಅನುದಾನ ನೀಡಲು ಮುಖ್ಯಮಂತ್ರಿಗಳ ಜೊತೆಗೆ ಚರ್ಚಿಸಿದ್ದೇನೆ. ಸಿಎಂ ಕೂಡ ಅನುದಾನ ನೀಡುವ ವಿಚಾರದಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಹೆಚ್ಚಿನ ಅನುದಾನ ನೀಡಿದರೆ, ಈ ಸಮುದಾಯದಲ್ಲಿರುವ ಬಡವರಿಗೆ ಯೋಜನೆಗಳನ್ನು ನೀಡಲು, ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಪಂಚಮಸಾಲಿ ಹೋರಾಟ ವಿಚಾರ ಸಿಎಂ ಜೊತೆಗೆ ಚರ್ಚೆ: ಈ ಹಿಂದೆ ಪಂಚಮಸಾಲೆ ಸಮುದಾಯಕ್ಕೆ 2ಂ ಮೀಸಲಾತಿ ನೀಡಬೇಕು ಎಂದು ರಾಜ್ಯಾದ್ಯಂತ ಹೋರಾಟ ಮಾಡಿದ್ದೆವು. ಇದರ ಫಲವಾಗಿ ಇಂದಿನ ಬಿಜೆಪಿ ಸರ್ಕಾರ ಶೇಕಡ 2ರಷ್ಟು ಮೀಸಲಾತಿಯನ್ನು 2ಸಿ ಹಾಗೂ 2ಡಿ ಯ್ಲಲಿ ನೀಡಿದರು. ಇದನ್ನು ಪ್ರಶ್ನಿಸಿ ಕೆಲವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ಅಲ್ಲೇ ಮೀಸಲಾತಿಗೆ ತಡೆಯಾಗಲಿ ಸಿಕ್ಕಿದೆ. ಈ ಕುರಿತು ಸಿಎಂ ಅವರೊಂದಿಗೆ ಸಮಾಜದ ಮುಖಂಡರು ಚರ್ಚಿಸಿದ್ದು, ತಡರಾತ್ರಿ ತೆಲುಗು ಬಳಿಕ ಮೀಸಲಾತಿ ಬಗ್ಗೆ ನಿರ್ಧಾರ ಮಾಡುದಾಗಿ ತಿಳಿಸಿದ್ದಾರೆ ಎಂದು ವಿಜಯಾನಂದ ಹೇಳಿದರು.

ಶೀಘ್ರದಲ್ಲಿಯೇ ಸಿಹಿ ಸುದ್ದಿ ನೀಡುವೆ : ನಾನು ಈಗ ನಿಗಮದ ಅಧ್ಯಕ್ಷನಾಗಿರಬಹುದು, ಆದರೆ, ಇದೇ ಅವಧಿಯಲ್ಲಿ ಇನ್ನೊಂದು ಮೆಟ್ಟಿಲು ಮೇಲೆ ಹೋಗಿ ಸಚಿವ ಆಗುತ್ತೇನೆ. ಆಕಲವೂ ಕೂಡ ಶೀಘ್ರದಲ್ಲಿ ಬರಲಿದೆ ಎಂದು ಮಾರ್ವಿಕವಾಗಿ ನುಡಿದರು.ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ ಪ್ರತಿ ಜಿಲ್ಲಾ ಕೇಂದ್ರದಲ್ಲಿ ವೀರಶೈವ ಭವನ ಹಾಗೂ ವಿದ್ಯಾರ್ಥಿ ನಿಲಯವನ್ನು ಸ್ಥಾಪಿಸುವ ಚಿಂತನೆ ನಡೆಸಲಾಗಿದೆ ಎಂದು ಇದೇ ವೇಳೆ ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು