LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ವೀರ ಸೇನಾನಿ ಮ.ರಾಮಮೂರ್ತಿ ಪುಣ್ಯ ಸ್ಮರಣೆ ಆಚರಣೆ

ಕನ್ನಡ ಹೋರಾಟಕ್ಕೆ ಹೊಸ ಆಯಾಮ ನೀಡಿ, ಕನ್ನಡಿಗರ ಅಸ್ದಿತ್ವ ಮತ್ತು ಅಸ್ಮಿತಿಯನ್ನು ಎತ್ತಿ ಹಿಡಿಯಲು ಅವರನ್ನು ಒಗ್ಗೂಡಿಸಲು, ಹಳದಿ ಮತ್ತು ಕೆಂಪು ಬಣ್ಣದ ಬಾವುಟವನ್ನು ಕನ್ನಡಿಗರಿಗೆ ನೀಡಿದ ಕನ್ನಡ ವೀರ ಸೇನಾನಿ ಮ. ರಾಮಮೂರ್ತಿ ಅವರ ನೆನಪು ಸದಾ ಅಮರ ಎಂದು ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟದ ಅಧ್ಯಕ್ಷ ಎಂ.ತಿಮ್ಮಯ್ಯ ತಿಳಿಸಿದರು.

ವೀರಸೇನಾನಿ ಮ.ರಾಮಮೂರ್ತಿ ಯವರ ಪುಣ್ಯಸ್ಮರಣೆಯ ಅಂಗವಾಗಿ ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟ ಮಕ್ಕಳಕೂಟದ ಸಮೀಪ ಇರುವ ವೀರಸೇನಾನಿ ಮ.ರಾಮಮೂರ್ತಿ ಪುತ್ಥಳಿಗೆ ಎಂ. ತಿಮ್ಮಯ್ಯ ಅವರು ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿ ಮಾತನಾಡಿದರು.ಇದೇ ವೇಳೆ ವಿಜಯನಗರ ಕಸಾಪ ಅಧ್ಯಕ್ಷ ಉಮೇಶ್ ಚಂದ್ರ ಮಾತನಾಡಿ ಕನ್ನಡ ನಾಡಿನ ಅಭಿಮಾನ ಸ್ವಾಭಿಮಾನ ಮತ್ತು ಅಸ್ಮಿತೆಯಾಗಿ ಕನ್ನಡಿಗರ ಉಸಿರಲ್ಲಿ ಬೆರೆತು ಹೋಗಿರುವ ಕೆಂಪು-ಹಳದಿ ಕನ್ನಡ ಬಾವುಟಕ್ಕೆ ಕಾನೂನಿನ ಮಾನ್ಯತೆ ಅಥವಾ ಅಧಿಕೃತ ಬಾವುಟದ ಮಾನ್ಯತೆ ಸಿಕ್ಕಿಲ್ಲ ಆದರೆ ಮ. ರಾಮಮೂರ್ತಿ ಅವರು ಎತ್ತಿ ಹಿಡಿದ ಬಾವುಟ ಇಂದಿಗೂ ಎಲ್ಲೆಡೆ ರಾರಾಜಿಸುತ್ತಿದೆ.

ಕನ್ನಡ ನಾಡು-ನುಡಿಗಾಗಿ ಶ್ರಮಿಸಿ, ಹೋರಾಟ ನಡೆಸಿದ್ದ ಮದ್ದೂರು ರಾಮಮೂರ್ತಿ ಅವರಿಗೆ ಸಮಸ್ತ ಕನ್ನಡಿಗರ ಪರವಾಗಿ ಕೋಟಿ ಕೋಟಿ ನಮನಗಳು ಎಂದು ತಿಳಿಸಿದರು.
ಒಕ್ಕೂಟದ ಕಾರ್ಯಾಧ್ಯಕ್ಷ ಸಿದ್ಧಯ್ಯ, ಪ್ರಧಾನ ಕಾರ್ಯದರ್ಶಿ ಸು.ಜಗದೀಶ, ಹೇಮಂತಕುಮಾರ್, ಜಯರಾಜು, ಕೃಷ್ಣಪ್ಪ, ನೋಣವಿನಕೆರೆ ರಾಮಕೃಷ್ಣ ಹಾಗೂ ಗಣ್ಯರು, ಪದಾಧಿಕಾರಿಗಳು ಇನ್ನಿತರರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು