LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ವೃದ್ಧರೇ ಇವರ ಟಾರ್ಗೆಟ್: ಅಪಘಾತ ಕಥೆ ಕಟ್ಟಿ-ಬೆದರಿಸಿ ಹಣ ಸುಲಿಗೆ, ಖದೀಮರಿಗಾಗಿ ಪೊಲೀಸರ ಹುಡುಕಾಟ!

ಬೆಂಗಳೂರು: ಒಂಟಿಯಾಗಿ ಕಾರಿನಲ್ಲಿ ತೆರಳುವ ವೃದ್ಧ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು, ಅಡ್ಡಗಟ್ಟಿ ಅಪಘಾತದ ನೆಪವೊಡ್ಡಿ ಹಣ ಸುಲಿಗೆ ಮಾಡುತ್ತಿರುವ ಘಟನೆಗಳು ನಗರದ ದಕ್ಷಿಣ ವಲಯದಲ್ಲಿ ಇತ್ತೀಚೆಗೆ ವರದಿಯಾಗುತ್ತಿದ್ದು, ಈ ಬೆಳವಣಿಗೆ ಆತಂಕವನ್ನು ಸೃಷ್ಟಿಸಿದೆ.

ಜಯನಗರ, ಬನಶಂಕರಿ, ಜೆಪಿ ನಗರ ಸೇರಿದಂತೆ ನಗದರ ದಕ್ಷಿಣ ವಲಯಗಳಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ಇತ್ತೀಚೆಗೆ 54 ವರ್ಷದ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಸುಲಿಗೆ ಮಾಡಿದ್ದಾರೆ. ಈ ಸಂಬಂಧ ಜಯನಗರದ ಬೈರಪ್ಪ ಗಾರ್ಡನ್ ನಿವಾಸಿ ಎಎಸ್ ಶ್ರೀನಾಥ್ ಎಂಬುವರು ಶುಕ್ರವಾರ ದೂರು ದಾಖಲಿಸಿದ್ದಾರೆ.

ಜಯನಗರ 7ನೇ ಬ್ಲಾಕ್‌ನ ಕನಕಪುರ ರಸ್ತೆಯಲ್ಲಿರುವ ಜೆಎಸ್‌ಎಸ್ ವೃತ್ತದಲ್ಲಿ ಕೆಲ ದಿನಗಳ ಹಿಂದೆ ಸಂಜೆ 4.45ರಿಂದ 6 ಗಂಟೆಯ ನಡುವೆ ಈ ಘಟನೆ ನಡೆದಿದೆ.

ನನ್ನ ಪತ್ನಿ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದು, ಅನಾರೋಗ್ಯ ಹಿನ್ನೆಲೆಯಲ್ಲಿ ಆಕೆಯನ್ನು ಕರೆದುಕೊಂಡು ಬರುವ ಆತುರದಲ್ಲಿದ್ದೆ. ಅನಂತಕುಮಾರ್ ಸರ್ಕಲ್ ಬಳಿ ನನ್ನ ಕಾರು ಡಿಕ್ಕಿ ಹೊಡೆದಿದ್ದರಿಂದ ತನ್ನ ಸಹೋದರ ಅಪಘಾತಕ್ಕೆ ಒಳಗಾಗಿದ್ದಾನೆ ಎಂದು ಆರೋಪಿಗಳು ನನ್ನ ಕಾರನ್ನು ನಿಲ್ಲಿಸಿದರು. ನಂತರ ನನ್ನ ಕಾರಿನೊಳಗೆ ಕುಳಿತು ಹಣ ನೀಡದಿದ್ದರೆ ಇನ್ನೂ ಕೆಲವರು ಬಂದು ತೊಂದರೆ ಕೊಡುತ್ತಾರೆ ಎಂದು ಹೆದರಿಸಿದರು. ಆತ ನನ್ನನ್ನು ಹೋಗಲು ಬಿಡಲಿಲ್ಲ ಬಳಿಕ UPI ಖಾತೆಗೆ 60,000 ರೂ. ಹಾಕಿಸಿಕೊಂಡ. ಘಟೆ ಬಳಿಕ ನಾನು ಬನಶಂಕರಿ ಠಾಣೆಗೆ ಹೋದೆ, ಅಲ್ಲಿ ಪೊಲೀಸರು ನನಗೆ ಆರೋಪಿಯ ಚಿತ್ರವನ್ನು ತೋರಿಸಿದರು. ಆತನನ್ನು ನಾನು ಗುರುತಿಸಿದೆ. ಬಳಿಕ ಪೊಲೀಸರು ಆತನ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೆಲವು ಪ್ರಕರಣಗಳು ದಾಖಲಾಗಿರುವುದಾಗಿ ತಿಳಿಸಿದರು. ನಂತರ ನಾನು ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ ಎಂದು ಶ್ರೀನಾಥ್ ಅವರು ಹೇಳಿದ್ದಾರೆ.

ಪೊಲೀಸರು ಬಿಎನ್‌ಎಸ್‌ನ ಸೆಕ್ಷನ್ 308(2) ಅಡಿಯಲ್ಲಿ ಸುಲಿಗೆ ಪ್ರಕರಣ ದಾಖಲಿಸಿದ್ದು, ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.

ಆರೋಪಿ ಕಳ್ಳತನವನ್ನೇ ವೃತ್ತಿಯಾಗಿಸಿಕೊಂಡಿದ್ದು, ವೃದ್ಧ ವ್ಯಕ್ತಿಗಳನ್ನು ಗುರಿಯಾಗಿಸಿಕೊಳ್ಳುತ್ತಿದ್ದಾನೆ ಕೆಲ ದಿನಗಳ ಕಾಲ ಅವರ ಚಲನವಲನಗಳನ್ನು ಗಮನಿಸಿ, ನಕಲಿ ಅಪಘಾತ ಕಥೆ ಕಟ್ಟಿ, ಬೆದರಿಸುತ್ತಾನೆ. ಇದಕ್ಕೆ ಬಗ್ಗದಿದ್ದರೆ ನಂತರ ಹಿಂಸಾತ್ಮಕವಾಗಿ ವರ್ತಿಸಿ, ಆತನ ಮಾತುಗಳನ್ನು ನಂಬುವಂತೆ ಮಾಡುತ್ತಾನೆ. ನಂತರ ಕಾರಿಗೆ ಬಡಿದು, ಹೆದರಿಸಿ ಹಣ ಸುಲಿಗೆ ಮಾಡುತ್ತಿದ್ದಾನೆಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು