LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ವೇತನ-ಪ್ರೋತ್ಸಾಹ ಧನಕ್ಕೆ ಆಗ್ರಹ: ಜ.7ರಿಂದ ಆಶಾ ಕಾರ್ಯಕರ್ತೆಯರಿಂದ ಅನಿರ್ದಿಷ್ಟಾವಧಿ ಮುಷ್ಕರ

ಬೆಂಗಳೂರು: ನಿಗದಿತ ವೇತನ ಮತ್ತು ಪ್ರೋತ್ಸಾಹ ಧನಕ್ಕೆ ಆಗ್ರಹಿಸಿ ಜನವರಿ 7ರಿಂದ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುವುದಾಗಿ ಆಶಾ ಕಾರ್ಯಕರ್ತೆಯರು ತಿಳಿಸಿದ್ದಾರೆ.

ಆರೋಗ್ಯ ಸೇವೆಗಳ ಜನರಿಗೆ ತಲುಪಿಸಲು ಆಶಾ ಕಾರ್ಯಕರ್ತೆಯರ ಪಾತ್ರ ಮಹತ್ವದ್ದಾಗಿದೆ. 42,000 ಕಾರ್ಯಕರ್ತೆಯರ ಮನವಿಯ ಹೊರತಾಗಯೂ ಹಲವಾರು ವರ್ಷಗಳಿಂದ ಭರವಸೆಗಲು ಈಡೇರಿಲ್ಲ. ಹಲವು ಸುತ್ತಿನ ಸಭೆಗಳಾದರೂ ನಿರ್ದಿಷ್ಟ ವೇತನ ನೀಡುವ ಭರವಸೆಗೆ ಖಚಿತವಾಗಿ ಉತ್ತರ ನೀಡಿಲ್ಲ. ಹಾಗಾಗಿ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

ನಗರ ಪ್ರದೇಶದ ಆಶಾ ಕಾರ್ಯಕರ್ತೆಯರ ಹೆಚ್ಚುವರಿ ಕೆಲಸ ಮತ್ತು ನಗರ ಜೀವನದ ದುಬಾರಿ ವೆಚ್ಚಗಳಿಗೆ ಅನುಗುಣವಾಗಿ ರೂ.20 ಸಾವಿರ ಗೌರವಧನ ಹೆಚ್ಚಿಸಬೇಕು. 8 ವರ್ಷಗಳಿಂದ ಆಶಾನಿಧಿ ಪೋರ್ಟಲ್‌ನಲ್ಲಿ ಆಶಾ ಕಾರ್ಯಕರ್ತೆಯರು ಮಾಡಿದ ಕೆಲಸಗಳು ದಾಖಲಾಗದೇ, ಪ್ರೋತ್ಸಾಹಧನವೂ ಬಂದಿಲ್ಲ. ರಾಜ್ಯದಾದ್ಯಂತ ಬಾಕಿ ಇರುವ 3 ತಿಂಗಳ ಪ್ರೋತ್ಸಾಹಧನ ಕೂಡಲೇ ಬಿಡುಗಡೆಗೊಳಿಸಬೇಕು.

ಮೊಬೈಲ್ ಆಧಾರಿತ ಕೆಲಸಗಳನ್ನು ಒತ್ತಾಯಪೂರ್ವಕವಾಗಿ ಮಾಡಿಸಿಕೊಳ್ಳಬಾರದು. ಇಲ್ಲದಿದ್ದರೆ ಮೊಬೈಲ್‌ ಆಧಾರಿತ ಕೆಲಸಗಳಿಗೆ ಪ್ರೋತ್ಸಾಹಧನ ನಿಗದಿಪಡಿಸಬೇಕು. ಪಶ್ಚಿಮ ಬಂಗಾಳದ ಮಾದರಿಯಲ್ಲಿ ಸೇವಾ ನಿವೃತ್ತಿ ಪಡೆಯುವ ಆಶಾ ಕಾರ್ಯಕರ್ತೆಯರಿಗೆ ವರ್ಷಕ್ಕೆ ರೂ.5 ಲಕ್ಷ ನೀಡಬೇಕು. ಪ್ರತಿವರ್ಷ ಆಶಾ ಕಾರ್ಯಕರ್ತೆಯರಿಗೆ ಸಂಪೂರ್ಣ ಆರೋಗ್ಯ ತಪಾಸಣೆ ಸೌಲಭ್ಯ ಕಲ್ಪಿಸಬೇಕು. ನಮ್ಮನ್ನು ಕಾರ್ಮಿಕರೆಂದು ಪರಿಗಣಿಸಿ ಕನಿಷ್ಠ ವೇತನ, ಗ್ರಾಚ್ಯುಟಿ, ಭವಿಷ್ಯನಿಧಿ, ಕಾರ್ಮಿಕರ ರಾಜ್ಯ ವಿಮೆ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು