LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಶಿಖಂಡಿ ಚಿತ್ರದ ಮೂಹೂರ್ತ

ಬಳ್ಳಾರಿ ಕೆ.ಇ.ಬಿ. ವೃತ್ತದಲ್ಲಿರುವ ಗಣೇಶ್ ದೇವಸ್ಥಾನದಲ್ಲಿ ಶುಕ್ರವಾರ ವಿಶೇಷ ಪೂಜೆ ಮಾಡಿ ಪೊಲಾ ಮೂವೀಸ್ ಬ್ಯಾನರ್ ಅಡಿಯಲ್ಲಿ ಮಾರಕಾಸ್ತ್ರ ಸಿನಿಮಾ ಖ್ಯಾತಿಯ ಬಳ್ಳಾರಿಯ ಗುರುಮೂರ್ತಿ ಸುನಾಮಿ ಅವರ ನಿರ್ದೇಶನದಲ್ಲಿ ಮೂಡಿ ಬರಲಿರುವ ಶಿಖಂಡಿ ಚಿತ್ರದ ಮುಹೂರ್ತ ಕಾರ್ಯಕ್ರಮ ನೆರವೇರಿಸಲಾಯಿತು.
ಶಿಖಂಡಿ ಚಿತ್ರಮೂಲತಃ ಬಳ್ಳಾರಿಯ ಉದ್ಯಮಿ ಪೊಲಾ ಪ್ರವೀಣ್ ಅವರ ಪೊಲಾ ಮೂವೀಸ್ ಬ್ಯಾನರ್ ಅಡಿಯಲ್ಲಿ ಮೂಡಿ ಬರಲಿರುವ ಮೊದಲ ಚಿತ್ರವಾಗಿದೆ.

ಪೊಲಾ ಪ್ರವೀಣ್ ಅವರು ನಿರ್ಮಾಪಕರಾಗಿ ಈ ಚಿತ್ರಕ್ಕೆ ಮೊದಲ ಬಾರಿಗೆ ಬಂಡವಾಳ ಹಾಕಿದ್ದಾರೆ. ಸಹ ನಿರ್ಮಾಪಕರಾಗಿ ಡಿಎಸ್ ಕೆ ಸಿನಿಮಾಸ್ ಖ್ಯಾತಿಯ ಸುನೀಲ್ ಕಂಬಾರ್ ಅವರು ಬಂಡವಾಳ ಹಾಕಿದ್ದಾರೆ.ಮಾರಕಾಸ್ತ್ರ ಸಿನಿಮಾ ಖ್ಯಾತಿಯ ನಿರ್ದೇಶಕ ಬಳ್ಳಾರಿಯ ಗುರುಮೂರ್ತಿ ಸುನಾಮಿ ಅವರ ಕಥೆ ನಿರ್ದೇಶನದಲ್ಲಿ ಶಿಖಂಡಿ ಚಿತ್ರ ಮೂಡಿ ಬರಲಿದ್ದು, ಇವರ ನಿರ್ದೇಶನದಲ್ಲಿ ಮೂಡಿ ಬರಲಿರುವ ಎರಡನೇ ಚಿತ್ರವಾಗಿದೆ.

ರಂಗಭೂಮಿಯ ನಾಟಕಗಳಲ್ಲಿ ಅಭಿನಯಿಸಿದ ಮೈಸೂರಿನ ಯುವರಾಜ ಗೌಡ ಅವರು ಮೊದಲ ಬಾರಿಗೆ ಶಿಖಂಡಿ ಚಿತ್ರದ ನಾಯಕ ನಟನಾಗಿ ನಟಿಸಲಿದ್ದಾರೆ. ವಿಶೇಷ ಕಥಾಹಂದರದ ಶಿಖಂಡಿ ಚಿತ್ರದಲ್ಲಿ ನಟ, ನಿರ್ಮಾಪಕ, ತಾಂತ್ರಿಕ ತಂಡ ಸೇರಿದಂತೆ ಬಹುತೇಕ ಬಳ್ಳಾರಿಯ ಹೊಸ ಪ್ರತಿಭೆಗಳಿಗೆ ಅವಕಾಶ ಕಲ್ಪಿಸಲಾಗಿದ್ದು ತದನಂತರ ದಿನಗಳಲ್ಲಿ ಸ್ಯಾಂಡಲ್ ವುಡ್ ನ ದೊಡ್ಡ ನಟರು ಸಹ ಚಿತ್ರ ತಂಡಕ್ಕೆ ಸೇರಲಿದ್ದಾರೆ ಎಂದುಗುರುಮೂರ್ತಿ ಹೇಳಿದರು.

ಬಳ್ಳಾರಿ, ಬೆಂಗಳೂರಿನ ಸುತ್ತಮುತ್ತ ಪ್ರದೇಶಗಳಲ್ಲಿ ಚಿತ್ರೀಕರಣ ನಡೆಯಲಿದೆ.ಈ ಸಂದರ್ಭದಲ್ಲಿ ನಿರ್ಮಾಪಕ ಪೋಲಾ ಪ್ರವೀಣ್, ಸಹ ನಿರ್ಮಾಪಕ ಸುನೀಲ್ ಕಂಬಾರ್, ನಿರ್ದೇಶಕ ಗುರುಮೂರ್ತಿ ಸುನಾಮಿ, ನಟ ಯುವರಾಜ್ ಗೌಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು