LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಶ್ರೀಲಂಕಾ ವಿರುದ್ಧದ ಸರಣಿ ಹೊತ್ತಿಗೆ ಹೊಸ ಮುಖ್ಯ ಕೋಚ್ ನೇಮಕ: ಜಯ್ ಶಾ

ಬ್ರಿಜ್‍ಟೌನ್: ಈ ತಿಂಗಳ ಅಂತ್ಯದಿಂದ ಆರಂಭವಾಗಲಿರುವ ಶ್ರೀಲಂಕಾ ವಿರುದ್ಧದ ನಿಗದಿತ ಓವರ್‍ಗಳ ಕ್ರಿಕೆಟ್ ಸರಣಿ ಹೊತ್ತಿಗೆ ಭಾರತ ತಂಡಕ್ಕೆ ಹೊಸ ಮುಖ್ಯ ಕೋಚ್ ಸೇರ್ಪಡೆಯಾಗಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಹೇಳಿದ್ದಾರೆ.

ಆದರೆ, ಹೆಡ್ ಕೋಚ್ ಹುದ್ದೆಗೆ ಯಾರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂಬ ಬಗ್ಗೆ ಶಾ ಗುಟ್ಟು ಬಿಟ್ಟುಕೊಟ್ಟಿಲ್ಲ.ಟಿ-20 ವಿಶ್ವಕಪ್ ಟೂರ್ನಿಗೆ ರಾಹುಲ್ ದ್ರಾವಿಡ್ ಅವರ ಅವಧಿ ಅಂತ್ಯಗೊಂಡಿದ್ದು, ಗೌತಮ್ ಗಂಭೀರ್ ಅವರು ದ್ರಾವಿಡ್ ಸ್ಥಾನವನ್ನು ತುಂಬುವ ನಿರೀಕ್ಷೆ ಇದೆ. ಬಿಸಿಸಿಐ ಕ್ರಿಕೆಟ್ ಸಲಹಾ ಸಮಿತಿಯು ಈ ಸಂಬಂಧ ಸಂದರ್ಶನ ನಡೆಸಿದ್ದು, ಗೌತಮ್ ಗಂಭೀರ್ ಮತ್ತು ಮಹಿಳಾ ಕ್ರಿಕೆಟ್ ತಂಡದ ಮಾಜಿ ಕೋಚ್ ಡಬ್ಲ್ಯು.ವಿ. ರಮಣ್ ಹೆಸರುಗಳನ್ನು ಅಂತಿಮಗೊಳಿಸಿದ್ದಾರೆ. ಇವರಿಬ್ಬರಲ್ಲಿ ಒಬ್ಬರು ಹೆಡ್ ಕೋಚ್ ಆಗುವುದು ಬಹುತೇಕ ಖಚಿತವಾಗಿದೆ.

ಆಯ್ಕೆ ಸಮಿತಿ ಅಧ್ಯಕ್ಷರನ್ನೂ ನೇಮಕ ಮಾಡಲಾಗುವುದು ಎಂದು ಶಾ ಹೇಳಿದ್ದಾರೆ.‘ಹೆಡ್ ಕೋಚ್ ಮತ್ತು ಆಯ್ಕೆಗಾರರು ಇಬ್ಬರನ್ನೂ ಶೀಘ್ರ ನೇಮಕ ಮಾಡಲಾಗುವುದು. ಕ್ರಿಕೆಟ್ ಆಯ್ಕೆ ಸಮಿತಿಯು(ಸಿಎಸಿ) ಸಂದರ್ಶನ ನಡೆಸಿ ಎರಡು ಹೆಸರುಗಳನ್ನು ಅಂತಿಮಗೊಳಿಸಿದೆ. ಮುಂಬೈ ತೆರಳಿದ ಬಳಿಕ ಅವರ ನಿರ್ಣಯದಂತೆ ನೇಮಕ ನಡೆಯಲಿದೆ. ಜಿಂಬಾಬ್ವೆ ಸರಣಿಯಲ್ಲಿ ವಿವಿಎಸ್ ಲಕ್ಷ್ಮಣ್ ತಂಡದ ಜೊತೆ ತೆರಳಲಿದ್ದು, ಶ್ರೀಲಂಕಾ ಸರಣಿ ಹೊತ್ತಿಗೆ ಹೊಸ ಕೋಚ್ ನೇಮಕವಾಗಲಿದ್ದಾರೆ’ಎಂದು ಶಾ ಹೇಳಿದ್ದಾರೆ.ಜುಲೈ 6 ರಿಂದ ಜಿಂಬಾಬ್ವೆ ಸರಣಿ ಆರಂಭವಾಗಲಿದ್ದು, ಜುಲೈ 27ರಿಂದ ಶ್ರೀಲಂಕಾ ಸರಣಿ ನಡೆಯಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು