LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಸಂಜು ಸ್ಯಾಮ್ಸನ್ ಭರ್ಜರಿ ಶತಕ: ದ.ಆಫ್ರಿಕಾ ವಿರುದ್ಧ ಭಾರತ ಬೃಹತ್ ಮೊತ್ತ

ಡರ್ಬನ್: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಬ್ಯಾಟಿಂಗ್ ನಡೆಸಿದ್ದು, ಸಂಜು ಸ್ಯಾಮ್ಸನ್ ಭರ್ಜರಿ ಶತಕದ ನೆರವಿನಿಂದ ಬೃಹತ್ ಮೊತ್ತ ಪೇರಿಸಿದೆ.

ಡರ್ಬನ್ ನ ಕಿಂಗ್ಸ್ ಮೇಡ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಭಾರತ ತಂಡ ಸಂಜು ಸ್ಯಾಮ್ಸನ್ (107 ರನ್) ಭರ್ಜರಿ ಬ್ಯಾಟಿಂಗ್ ನೆರವಿನಿಂದ 202 ರನ್ ಕಲೆಹಾಕಿತು.

ಇನ್ನಿಂಗ್ಸ್ ಆರಂಭದಲ್ಲೇ ಭಾರತ ಆಘಾತ ಎದುರಿಸಿತು. ತಂಡದ ಮೊತ್ತ 24 ರನ್ ಗಳಾಗಿದ್ದಾಗ ಕೇವಲ 7 ರನ್ ಗಳಿಸಿದ್ದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಕೊಯಿಟ್ಜಿ ಬೌಲಿಂಗ್ ನಲ್ಲಿ ಔಟಾದರು. ಬಳಿಕ ಸೂರ್ಯ ಕುಮಾರ್ ಯಾದವ್ ಜೊತೆಗೂಡಿದ ಸಂಜು ಸ್ಯಾಮ್ಸನ್ ಕೇವಲ 50 ಎಸೆತಗಳಲ್ಲಿ 10 ಸಿಕ್ಸರ್ ಮತ್ತು 7 ಬೌಂಡರಿಗಳ ನೆರವಿನಿಂದ 107 ರನ್ ಕಲೆ ಹಾಕಿದರು.

ಸಂಜುಗೆ ಉತ್ತಮ ಸಾಥ್ ನೀಡಿದ ನಾಯಕ ಸೂರ್ಯ ಕುಮಾರ್ ಯಾದವ್ 27 ರನ್ ಗಳಿಸಿದರೆ, ತಿಲಕ್ ವರ್ಮಾ 33 ರನ್ ಗಳಿಸಿ ಕೇಶವ್ ಮಹಾರಾಜ್ ಬೌಲಿಂಗ್ ನಲ್ಲಿ ಔಟಾದರು. ಈ ಹಂತದಲ್ಲಿ 107 ರನ್ ಗಳಿಸಿದ್ದ ಸಂಜು ಕೂಡ ಪೀಟರ್ ಬೌಲಿಂಗ್ ನಲ್ಲಿ ಔಟಾದರು.

ಬಳಿಕ ಬಂದ ಹಾರ್ದಿಕ್ ಪಾಂಡ್ಯ 2 ರನ್ ಮತ್ತು ರಿಂಕು ಸಿಂಗ್ 11 ಗಳಿಸಿ ಕೊಯಿಟ್ಜಿಗೆ ವಿಕೆಟ್ ಒಪ್ಪಿಸಿ ನಿರಾಶೆ ಮೂಡಿಸಿದರು. ಅಕ್ಸರ್ ಪಟೇಲ್ ಶೂನ್ಯ 7 ರನ್ ಗಳಿಸಿ ಔಟಾದರು. ಅಂತಿಮವಾಗಿ ಭಾರತ ತಂಡ ನಿಗಧಿತ 20 ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 202 ರನ್ ಕಲೆಹಾಕಿದ್ದು, ದಕ್ಷಿಣ ಆಫ್ರಿಕಾಗೆ ಗೆಲ್ಲಲು 203 ರನ್ ಗಳ ಬೃಹತ್ ಗುರಿ ನೀಡಿದೆ.

ದಕ್ಷಿಣ ಆಫ್ರಿಕಾ ಪರ ಕೋಯಿಟ್ಜಿ 3 ವಿಕೆಟ್ ಕಬಳಿಸಿದರೆ, ಮಾರ್ಕಾ ಜೇನ್ಸನ್, ಕೇಶವ್ ಮಹಾರಾಜ್, ಎನ್ ಪೀಟರ್ ಮತ್ತು ಕ್ರುಗರ್ ತಲಾ ಒಂದು ವಿಕೆಟ್ ಪಡೆದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು