LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Ramanagara

ಸಂವಿಧಾನದ ಪ್ರತಿ ಎಸೆದ ಜಿಲ್ಲಾಧಿಕಾರಿ: ಆರೋಪ ಡಿಸಿ ವಿರುದ್ಧ ರಾಮನಗರ ಪುರ ಪೊಲೀಸ್ ಠಾಣೆಗೆ ದೂರು ಸಲ್ಲಿಕೆ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಹೊಸದುರ್ಗ ಎಂಬುವರಿಂದ ದೂರು

ರಾಮನಗರ: ಭಾರತದ ಸಂವಿಧಾನದ ಪ್ರತಿಯನ್ನು ನಿರ್ಲಕ್ಷ್ಯದಿಂದ ಎಸೆದು ಸಂವಿಧಾನಕ್ಕೆ ಅಪಚಾರ , ಅಗೌರವ ಸಲ್ಲಿಸಿರುವ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ವಿರುದ್ಧ ರಾಷ್ಟ್ರೀಯ ಗೌರವಕ್ಕೆ ಅಪಮಾನಗಳ ತಡೆ ಕಾಯ್ದೆ 1971ರ ಅನ್ವಯ ಪ್ರಕರಣ ದಾಖಲಿಸುವಂತೆ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಹೊಸದುರ್ಗ ರಾಮನಗರ ಪುರಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

ದೂರಿನಲ್ಲಿ ಏನಿದೆ?: ರಾಮನಗರ ಜಿಲ್ಲಾ ಕಚೇರಿಗಳ ಸಂಕೀರ್ಣದ ಎದುರು ಪ್ರತಿಭಟನೆಗಳಿಗೆ ಹೇರಿರುವ ನಿಷೇಧಾಜ್ಞೆ ಹಿಂಪಡೆಯುವಂತೆ ಆಗ್ರಹಿಸಿ ರೈತಸಂಘ, ದಲಿತ, ಕನ್ನಡ ಪರ ಸಂಘಟನೆಗಳ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಜಿಲ್ಲಾ ಉನ್ನತ ಪೊಲೀಸ್ ಅಧಿಕಾರಿಗಳ ಮುಖೇನ ಜಿಲ್ಲಾಧಿಕಾರಿಗಳು ಹೋರಾಟಗಾರರನ್ನು ಮಾತುಕತೆಗಾಗಿ ತಮ್ಮ ಕಚೇರಿಗೆ ಆಹ್ವಾನಿಸಿದರು. ಅದರಂತೆ ಮಧ್ಯಾಹ್ನ 3 ರಿಂದ 3.15ರ ಸಮಯದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ನಾನು ಹಾಗೂ ರೈತಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ನೇತ್ರಾವತಿ, ರಮ್ಯಾ ರಾಮಣ್ಣ, ವಿಭಾಗೀಯ ಅಧ್ಯಕ್ಷ ಕೆ.ಮಲ್ಲಯ್ಯ, ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ್ , ಜಯ ಕರ್ನಾಟಕ ಜನಪರ ವೇದಿಕೆ ರಾಜ್ಯ ಸಲಹೆಗಾರ ಕುಮಾರಸ್ವಾಮಿರವರ ಜೊತೆ ತೆರಳಿದ್ದೇವು.

ನಮ್ಮೊಂದಿಗೆ ಮಾತನಾಡುತ್ತಿದ್ದ ವೇಳೆ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ರವರು ಸಂವಿಧಾನದ ಪ್ರತಿಯನ್ನು ದರ್ಪದಿಂದ ತಮ್ಮ ಟೇಬಲಿನ ಅಂಚಿನವರೆಗೆ ಎಸೆದು ಓದಿದ್ದೀರಾ ಎಂದು ಕೇಳಿದರು. ಸಂವಿಧಾನದ ಪ್ರತಿಯನ್ನು ಗೌರವಿಸದೆ ಎಸೆದಿರುವುದು ಸಂವಿಧಾನಕ್ಕೆ ಎಸಗಿರುವ ಅಗೌರವವಾಗಿದೆ. ಯಾವುದೇ ಮಾತಿನ ಮೂಲಕ , ಬರಹಗಳ ಮೂಲಕ ಹಾಗೂ ಚಟುವಟಿಕೆಗಳ ಮೂಲಕ ಅಗೌರವ ಸೂಚಿಸಿದಲ್ಲಿ ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ಕಾಯ್ದೆ 1971ರ ಅಡಿಯಲ್ಲಿ ದೂರು ದಾಖಲಿಸಿಕೊಳ್ಳಬೇಕು. ಆ ಮೂಲಕ ಕ್ರಮ ತೆಗೆದುಕೊಳ್ಳಬೇಕೆಂದು ಪ್ರಶಾಂತ್ ಹೊಸದುರ್ಗ ದೂರು ನೀಡಿದ್ದಾರೆ.

ದೂರನ್ನು ಸ್ವೀಕರಿಸಿದ್ದು, ಅದನ್ನು ಪರಿಶೀಲನೆ ನಡೆಸುವುದಾಗಿ ಹೋರಾಟಗಾರರಿಗೆ ಭರವಸೆ ನೀಡಿದ್ದಾಗಿ ಠಾಣೆಯ ವೃತ್ತ ನಿರೀಕ್ಷಕ ಕೃಷ್ಣರವರು ಇಂದು ಸಂಜೆ ಪತ್ರಿಕೆಕ್ಕೆ ಪ್ರತಿಕ್ರಿಯೆ ನೀಡಿದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು