LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸಂವಿಧಾನ ರಕ್ಷಣೆ, ಗಾಂಧಿ ಪರಂಪರೆ ಉಳಿಸಿ ಬೆಳೆಸಲು ಕರೆ: ಕಾಂಗ್ರೆಸ್ ನಿಂದ ಇಂದು ಅಭಿಯಾನ ಆರಂಭ

ನವದೆಹಲಿ: ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅಂಗೀಕರಿಸಿದ ನಿರ್ಣಯಕ್ಕೆ ಅನುಗುಣವಾಗಿ, 'ಸಂವಿಧಾನವನ್ನು ರಕ್ಷಿಸಲು' ಮತ್ತು ಮಹಾತ್ಮ ಗಾಂಧಿಯವರ ಪರಂಪರೆಯನ್ನು ಉಳಿಸಿ ಬೆಳೆಸಲು ಕಾಂಗ್ರೆಸ್ ತನ್ನ ತಿಂಗಳ ಅವಧಿಯ ಅಭಿಯಾನವನ್ನು ಇಂದು ಶುಕ್ರವಾರದಿಂದ ಪ್ರಾರಂಭಿಸಲಿದೆ.

ಕಳೆದ ಡಿಸೆಂಬರ್ 27 ರಂದು ಅಭಿಯಾನವನ್ನು ಪ್ರಾರಂಭಿಸಬೇಕಾಗಿತ್ತು, ಆದರೆ ಡಿಸೆಂಬರ್ 26 ರಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ಗೌರವಾರ್ಥ ಏಳು ದಿನಗಳ ಶೋಕಾಚರಣೆಯನ್ನು ಘೋಷಿಸಿದ್ದರಿಂದ ಅಭಿಯಾನ ಮುಂದೂಡಲಾಗಿತ್ತು.

1924 ರಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಅಧಿವೇಶನದ ಅಧ್ಯಕ್ಷತೆಯನ್ನು ಮಹಾತ್ಮ ಗಾಂಧಿಯವರು ವಹಿಸಿದ್ದರು. ಅಲ್ಲಿಂದ 100 ನೇ ವಾರ್ಷಿಕೋತ್ಸವದ ನೆನಪಿಗಾಗಿ ಡಿಸೆಂಬರ್ 26 ರಂದು ಬೆಳಗಾವಿಯಲ್ಲಿ ಸಿಡಬ್ಲ್ಯುಸಿಯ ಕೊನೆಯ ಸಭೆಯಲ್ಲಿ ಅಭಿಯಾನವನ್ನು ಆಯೋಜಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಯಿತು.

‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್ ಅಭಿಯಾನ’ ಎಂಬ ಅಭಿಯಾನವನ್ನು ಇಂದು ಎಲ್ಲಾ ಬ್ಲಾಕ್‌ಗಳು, ಜಿಲ್ಲೆಗಳು ಮತ್ತು ರಾಜ್ಯಗಳಲ್ಲಿ ಪ್ರಾರಂಭಿಸಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ. ಜನವರಿ 26 ರಂದು ಮಧ್ಯಪ್ರದೇಶದ ಮೊವ್‌ನಲ್ಲಿರುವ ಅಂಬೇಡ್ಕರ್ ಅವರ ಜನ್ಮಸ್ಥಳದಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಅಭಿಯಾನವು ಮುಕ್ತಾಯಗೊಳ್ಳಲಿದೆ.

"ಜನವರಿ 26 ಭಾರತದ ಗಣರಾಜ್ಯೋತ್ಸವ ಮತ್ತು ಭಾರತದ ಸಂವಿಧಾನದ 75 ನೇ ವಾರ್ಷಿಕೋತ್ಸವ ಆಚರಿಸಲಾಗುತ್ತದೆ. ಸಿಡ್ಬ್ಲುಸಿ ತನ್ನ ನಿರ್ಣಯದಲ್ಲಿ, ಸಂವಿಧಾನ ಮತ್ತು ಸ್ವಾತಂತ್ರ್ಯ ಚಳವಳಿಯ ಆದರ್ಶಗಳನ್ನು ರಕ್ಷಿಸಲು ಕಾಂಗ್ರೆಸ್ ಬದ್ಧವಾಗಿದೆ ಎಂದು ಹೇಳಿದೆ. ಅದರಂತೆ, ಡಿಸೆಂಬರ್ 27 ರಂದು ಬೆಳಗಾವಿಯಲ್ಲಿ ರ್ಯಾಲಿಯಿಂದ ಪ್ರಾರಂಭವಾಗುವ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್ ಅಭಿಯಾನವನ್ನು ಕಾಂಗ್ರೆಸ್ ಪ್ರಾರಂಭಿಸುತ್ತದೆ ಮತ್ತು ಜನವರಿ 26 ರಂದು ರ್ಯಾಲಿಯಲ್ಲಿ ಕೊನೆಗೊಳ್ಳುತ್ತದೆ ಎಂದು ಸಿಡಬ್ಲ್ಯುಸಿ ನಿರ್ಣಯವು ತಿಳಿಸಿದೆ.

ಈ ತಿಂಗಳಲ್ಲಿ ಪ್ರತಿ ಬ್ಲಾಕ್, ಜಿಲ್ಲೆ ಮತ್ತು ರಾಜ್ಯಗಳಲ್ಲಿ ರ್ಯಾಲಿಗಳು ಮತ್ತು ಮೆರವಣಿಗೆಗಳನ್ನು ಆಯೋಜಿಸಲಾಗುವುದು ಎಂದು ಕಾಂಗ್ರೆಸ್ ಹೇಳಿದೆ. ಮಹಾತ್ಮ ಗಾಂಧೀಜಿಯವರ ಹಾಗೂ ಸಂವಿಧಾನದ ಪರಂಪರೆಯನ್ನು ಸಂರಕ್ಷಿಸುವ ಮತ್ತು ಉತ್ತೇಜಿಸುವ ಅಗತ್ಯದ ತುರ್ತನ್ನು ಗಮನದಲ್ಲಿಟ್ಟುಕೊಂಡು, ಈ ಆಂದೋಲನವು ಜನವರಿ 26 ರ ನಂತರವೂ ವಿಸ್ತರಿಸಲಿದೆ ಎಂದು ಅದು ಹೇಳಿದೆ.

ಜನವರಿ 26, 2025 ಮತ್ತು ಜನವರಿ 26, 2026 ರ ನಡುವೆ, ಕಾಂಗ್ರೆಸ್ ರಾಷ್ಟ್ರವ್ಯಾಪಿ ಬೃಹತ್ ಜನಸಂಪರ್ಕ ಅಭಿಯಾನವನ್ನು ಸಂವಿಧಾನ್ ಬಚಾವೋ ರಾಷ್ಟ್ರೀಯ ಪಾದಯಾತ್ರೆಯನ್ನು ಪ್ರಾರಂಭಿಸುತ್ತದೆ, ಇದರಲ್ಲಿ ಎಲ್ಲಾ ನಾಯಕರು ಭಾಗವಹಿಸುತ್ತಾರೆ ಎಂದು ಕಾಂಗ್ರೆಸ್ ಹೇಳಿದೆ. ಏಪ್ರಿಲ್ 2025 ರ ಮೊದಲಾರ್ಧದಲ್ಲಿ ಗುಜರಾತ್‌ನಲ್ಲಿ ಎಐಸಿಸಿ ಅಧಿವೇಶನ ನಡೆಯಲಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಮುಂದಿನ ವರ್ಷ ಪ್ರಮುಖ ಸಂಘಟನೆ ಪುನಶ್ಚೇತನದ ವರ್ಷವಾಗಲಿದೆ. ಎಲ್ಲಾ ಹಂತದ ನಾಯಕರ ಹೊಣೆಗಾರಿಕೆಯ ಪರೀಕ್ಷೆ ಇರುತ್ತದೆ ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು