LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

 ಸಚಿವ ಜಮೀರ್ ವಜಾಗೆ JDS ಆಗ್ರಹ, ಪ್ರತಿಭಟನೆ

ಬೆಂಗಳೂರು: ಕೇಂದ್ರದ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ವರ್ಣ ನಿಂದನೆ ಮಾಡಿರುವ ಸಚಿವ ಬಿಝಡ್ ಜಮೀರ್ ಅಹಮದ್ ಖಾನ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಜೆಡಿಎಸ್ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಜೆಡಿಎಸ್ ಪಕ್ಷದ ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಅವರ ನೇತೃತ್ವದಲ್ಲಿ ಜೆಡಿಎಸ್‌ ಮುಖಂಡರು, ಕಾರ್ಯಕರ್ತರು ನಗರದ ಸ್ವಾತಂತ್ರ್ಯ ಉದ್ಯಾನವನದ ಬಳಿ ಪ್ರತಿಭಟನೆ ನಡೆಸಿ, ಜಮೀರ್ ವಿರುದ್ಧ ಘೋಷಣೆ ಕೂಗಿ, ಜಮೀರ್ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು, ಅಲ್ಲದೆ, ಬೆಂಗಳೂರಿನಲ್ಲಿರುವ ಜಮೀರ್ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಹಲವು ಪ್ರತಿಭಟನಾಕಾರರನ್ನು ಪೊಲೀಸರು ಬಂಧನಕ್ಕೊಳಪಡಿಸಿದರು.

ಜೆಡಿಎಸ್ ಬೆಂಗಳೂರು ಘಟಕದ ಅಧ್ಯಕ್ಷ ರಮೇಶ್ ಗೌಡ ಮಾತನಾಡಿ, ಕುಮಾರಸ್ವಾಮಿ ವಿರುದ್ಧ ಅಸಂಸದೀಯ ಭಾಷೆಯ ಬಳಕೆ ಸ್ವೀಕಾರಾರ್ಹವಲ್ಲ. ಈ ಹೇಳಿಕೆ ಜಮೀರ್‌ನ ಕೆಟ್ಟ ಮನಸ್ಥಿತಿಯನ್ನು ಬಹಿರಂಗಪಡಿಸುತ್ತವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಜಮೀರ್ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದರು.

ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಲಿದೆ ಎಂದು ಹೇಳಿದರು.

ಜಮೀರ್‌ ಹೇಳಿಕೆ ನಾಚಿಕೆಗೇಡಿನ ಸಂಗತಿಯಾಗಿದ್ದು, ಅವರ ಹೇಳಿಕೆಗಳಿಂದ ಒಕ್ಕಲಿಗ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ. ಜಮೀರ್ ಇಂತಹ ಆಕ್ಷೇಪಾರ್ಹ ಹೇಳಿಕೆ ನೀಡಿರುವುದು ಇದೇ ಮೊದಲೇನಲ್ಲ. ಸಾಕಷ್ಟು ಬಾರಿ ನೀಡಿದ್ದಾರೆ. ಇದೇ ರೀತಿ ಹೇಳಿಕೆ ನೀಡುವುದನ್ನು ಮುಂದುವರಿಸಿದರೆ ರಾಜ್ಯದ ಜನತೆ ಸಹಿಸುವುದಿಲ್ಲ. ಅವರನ್ನು ಸಂಪುಟದಿಂದ ಕೈಬಿಡದಿದ್ದರೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸುತ್ತೇವೆಂದು ಇದೇ ವೇಳೆ ಎಚ್ಚರಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು