LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಸದ್ಯಕ್ಕೆ ಕೆಪಿಸಿಸಿಯಲ್ಲಿ ಯಾವುದೇ ಹುದ್ದೆ ಖಾಲಿ ಇಲ್ಲ. ಅಧ್ಯಕ್ಷ ಸ್ಥಾನಕ್ಕೆ ಆಸೆ, ದುರಾಸೆ ನನ್ನಲ್ಲಿಲ್ಲ :ಮಾಜಿ ಸಂಸದ ಡಿ.ಕೆ. ಸುರೇಶ್

ಬೆಂಗಳೂರು: ಸದ್ಯಕ್ಕೆ ಕೆಪಿಸಿಸಿಯಲ್ಲಿ ಯಾವುದೇ ಹುದ್ದೆ ಖಾಲಿ ಇಲ್ಲ. ಅಧ್ಯಕ್ಷ ಸ್ಥಾನಕ್ಕೆ ಆಸೆ, ದುರಾಸೆ ನನ್ನಲ್ಲಿಲ್ಲ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಿಮ್ಮ ಹೆಸರು ಕೇಳಿಬರುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಸುರೇಶ್, ಒಂದಷ್ಟು ಜನರು ನನ್ನನ್ನು ಖುಷಿಪಡಿಸಲು, ಮತ್ತೆ ಕೆಲವರು ಇನ್ನೊಬ್ಬರನ್ನು ಖುಷಿ ಪಡಿಸಲು ಹಾಗೂ ತಮ್ಮ ಅನುಕೂಲಕ್ಕಾಗಿ ಈ ರೀತಿ ಹೆಸರುಗಳನ್ನು ಹೇಳುತ್ತಿರುತ್ತಾರೆ. ನಾನು ಪ್ರಸ್ತುತ ವಿಶ್ರಾಂತಿಯಲ್ಲಿದ್ದೇನೆ. ಜನರು ಕೊಟ್ಟ ತೀರ್ಪನ್ನು ಪ್ರಸಾದ ಎಂದು ಸ್ವೀಕರಿಸಿ ಕೆಲಸ ಮಾಡುವವನು ನಾನು. ಯಾವುದೇ ಸ್ಥಾನ ಸಿಗಬೇಕು ಅಂತಾದರೆ ಸಿಕ್ಕೇ ಸಿಗುತ್ತದೆ. ಇಲ್ಲದಿದ್ದರೆ ಸಿಗುವುದಿಲ್ಲ. ಯಾವುದೂ ಇಲ್ಲಿ ಸ್ವಂತ ಸ್ವತ್ತಲ್ಲ. ಸಾರ್ವಜನಿಕವಾದ ಹುದ್ದೆಗಳಿವು” ಎಂದು ತಿಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ ಸಚಿವ ಸ್ಥಾನ ತ್ಯಾಗಕ್ಕೆ ಸಿದ್ಧ ಎನ್ನುವ ಕೆ.ಎನ್.ರಾಜಣ್ಣ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಸರ್ವಪಕ್ಷಗಳ ಹಿರಿಯ ನಾಯಕರಾದ ರಾಜಣ್ಣ ಅವರು ಹೆಚ್ಚು ಶಕ್ತಿ ಇರುವ ನಾಯಕರು. ಅವರ ನೇತೃತ್ವದಲ್ಲಿ ಪಕ್ಷ ಇನ್ನಷ್ಟು ಉತ್ತಮವಾಗಿ ಸಂಘಟನೆಯಾಗುತ್ತದೆ ಎನ್ನುವ ವಿಶ್ವಾಸ ಅವರಿಗಿದೆ. ಅವರಿಗೆ ಜನತಾದಳ, ಬಿಜೆಪಿಯವರ ಜೊತೆ ಒಳ್ಳೆ ಸಖ್ಯವನ್ನಿಟ್ಟುಕೊಂಡಿದ್ದಾರೆ. ಅಲ್ಲಿಂದ ಒಂದಷ್ಟು ಜನರನ್ನು ಕರೆದುಕೊಂಡು ಬರಬಹುದು ಎನಿಸುತ್ತದೆ. ಹೀಗಾಗಿ ಅವರು ಪಕ್ಷದ ನೇತೃತ್ವವಹಿಸಲು ತುಡಿತದಲ್ಲಿದ್ದಾರೆ. ಅವರಿಗೆ ಹೈಕಮಾಂಡ್ ಜವಾಬ್ದಾರಿ ವಹಿಸಿದರೆ ನಾವು ಸಹಕಾರ ನೀಡಲು ಸಿದ್ಧ” ಎಂದು ತಿಳಿಸಿದರು. ಚುನಾವಣೆ ದೃಷ್ಟಿಯಿಂದ ಪೂರ್ಣಪ್ರಮಾಣದ ಅಧ್ಯಕ್ಷರ ಅವಶ್ಯಕತೆಯಿದೆಯೇ ಎಂದು ಕೇಳಿದಾಗ “ಸಂಘಟನೆ ಸೇರಿದಂತೆ ಎಲ್ಲ ರಂಗಗಳಲ್ಲೂ ಕೆಲಸ ಮಾಡುವ ಅವಶ್ಯಕತೆ ಪಕ್ಷಕ್ಕಿದೆ. ಜವಾಬ್ದಾರಿ ಹೊತ್ತುಕೊಳ್ಳಲು ಯಾರೇ ಮುಂದೆ ಬಂದರೂ, ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧವಾಗಿ ಎಲ್ಲಾ ನಾಯಕರು, ಕಾರ್ಯಕರ್ತರು ಒಪ್ಪಿಕೊಳ್ಳುತ್ತೇವೆ, ಇದರಲ್ಲಿ ಯಾವುದೇ ಅಪಸ್ವರವಿಲ್ಲ ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು