LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Belagavi

ಸಭೆ ಕರೆದ ಸಿಎಂ: ಪಂಚಮಸಾಲಿ ಲಿಂಗಾಯತ ಪ್ರತಿಭಟನೆ ತಾತ್ಕಾಲಿಕ ಅಂತ್ಯ

ಬೆಳಗಾವಿ: ‘ಪಂಚಮಸಾಲಿ ಸಮಾಜಕ್ಕೆ ಪ್ರವರ್ಗ ‘2ಎ’ ಮೀಸಲಾತಿ ನೀಡಬೇಕು ಮತ್ತು ಹೋರಾಟಗಾರರ ಮೇಲೆ ಲಾಠಿಚಾರ್ಜ್‌ ಮಾಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ಷಮೆ ಕೇಳಬೇಕು’ ಎಂದು ಆಗ್ರಹಿಸಿ ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಆರಂಭಿಸಲಾಗಿದ್ದ ಧರಣಿಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ.

ಬೆಳಗಾವಿಯ ಅಂಬೇಡ್ಕರ್ ಗಾರ್ಡನ್‌ನಲ್ಲಿ ಈ ಪ್ರತಿಭಟನೆ ನಡೆಯುತ್ತಿತ್ತು. ಸ್ಥಳಕ್ಕೆ ತೆರಳಿದ ಮಾಜಿ ಸಚಿವ ಸಿ.ಸಿ.ಪಾಟೀಲ್, ಶಾಸಕರಾದ ಡಾ.ವಿ‌.ಐ.ಪಾಟೀಲ್, ಹೆಚ್.ಎಸ್.ಶಿವಶಂಕರ್‌ ಅವರು, ಪ್ರತಿಭಟನಾನಿರತ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಶಾಸಕ ವಿಜಯಾನಂದ ಕಾಶಪ್ಪನವರ್ ಮಾತನಾಡಿ, ಪ್ರತಿಭಟನೆ ಆರಂಭವಾದ ದಿನ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗಿದ್ದೆ. ಪ್ರತಿಭಟನಾಕಾರರು ತಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವಂತೆ ಮನವೊಲಿಸಲು ಮೂವರು ಮಂತ್ರಿಗಳನ್ನು ಕಳುಹಿಸಿದರೂ, ಸ್ವಾಮೀಜಿಗಳು ಮತ್ತು ಅವರ ಬೆಂಬಲಿಗರು ನಿರಾಕರಿಸಿದ್ದರು. ಇದು ಸರ್ಕಾರ ಲಿಂಗಾಯತ ವಿರೋಧಿ ಎಂಬ ಸಂದೇಶವನ್ನು ರವಾನಿಸಿತ್ತು. ಇದೀಗ ಸಿದ್ದರಾಮಯ್ಯ ಅವರು ಡಿಸೆಂಬರ್ 21 ಸಂದು ಸರ್ವಪಕ್ಷಗಳ ಪಂಚಮಸಾಲಿ ಲಿಂಗಾಯತ ಶಾಸಕರ ಸಭೆ ಕರೆದಿದ್ದಾರೆಂದು ಹೇಳಿದರು.

ಮೀಸಲಾತಿ ಬೇಡಿಕೆಯನ್ನು ಇದ್ದಕ್ಕಿದಂತೆಯೇ ಬಗೆಹರಿಸಲು ಸಾಧ್ಯವಿಲ್ಲ. ಪ್ರಕರಣ ಇನ್ನೂ ನ್ಯಾಯಾಲಯದ ಅಂಗಳದಲ್ಲಿದೆ. ಈ ಹಂತದಲ್ಲಿ ಸಮುದಾಯದ ಬೇಡಿಕೆಯನ್ನು ಈಡೇರಿಸಲು ಸರ್ಕಾರಕ್ಕೆ ಅಸಾಧ್ಯ ಎಂದು ತಿಳಿಸಿದರು.

ಬಸವಜಯ ಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ಮೀಸಲಾತಿ ವಿಷಯದಲ್ಲಿ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 21ರಂದು ಬೆಂಗಳೂರಿನಲ್ಲಿ ಸಭೆ ಕರೆದಿದ್ದಾರೆ. ಹೀಗಾಗಿ ನಮ್ಮ ಹೋರಾಟವನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದೇವೆ. ಸಭೆಯಲ್ಲಿ ಕೈಗೊಳ್ಳುವ ನಿರ್ಣಯ ಆಧರಿಸಿ ಮುಂದಿನ ಹೆಜ್ಜೆ ಇರಿಸುತ್ತೇವೆಂದು ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು