LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಸಮಾಜಕ್ಕೆ ಉತ್ತಮ "ಉದಾಹರಣೆ"!!

ಕಳೆದ ಕೆಲವು ವರ್ಷಗಳಿಂದ ಪ್ರಸಾದನ ಕಲಾವಿದರಾಗಿ ಗುರುತಿಸಿಕೊಂಡಿರುವ ದಿನೇಶಾಚಾರ್ ಅವರು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿರುವವರು. ಪ್ರಸ್ತುತ ಅವರು "ಉದಾಹರಣೆ" ಎಂಬ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಭೂಮಿಕ ಮೂವೀಸ್ ಲಾಂಛನದಲ್ಲಿ ಹೇಮಾವತಿ ದಿನೇಶಾಚಾರ್ ನಿರ್ಮಾಣ ಮಾಡಿದ್ದಾರೆ.

ಈ ಚಿತ್ರ ಅಕ್ಟೋಬರ್ 18 ರಂದು ತೆರೆಗೆ ಬರಲಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಲಾಯಿತು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.ನಾನು ವಸ್ತ್ರಾಲಂಕಾರ ಕಲಾವಿದನಾಗಿ, ಪ್ರಸಾದನ ಕಲಾವಿದನಾಗಿ ಹಾಗು ಸಹ ನಿರ್ದೇಶಕನಾಗಿ ಹಲವು ಚಿತ್ರಗಳಿಗೆ ಕೆಲಸ ಮಾಡಿದ್ದೇನೆ. ನಿರ್ದೇಶಕನಾಗಿ ಇದು ಮೊದಲ ಚಿತ್ರ. ಮೂರು ಮತ ಬಾಂಧವರ ಮೂರು ಕುಟುಂಬಗಳಲ್ಲಿ ನಡೆಯುವ ಕಥೆಯೇ "ಉದಾಹರಣೆ". ಮಕ್ಕಳಿಗೆ ಹಾಗೂ ಹಿರಿಯರಿಗೆ ಉತ್ತಮ ಸಂದೇಶ ನೀಡುವ ಕಥಾಹಂದರ ನಮ್ಮ ಚಿತ್ರದಲ್ಲಿದೆ. ಅಕ್ಟೋಬರ್ 18 ರಂದು ಚಿತ್ರ ತೆರೆಗೆ ಬರಲಿದೆ.

ಶ್ರೀಗುರು ಸಂಗೀತ ನಿರ್ದೇಶನ, ಅಣಜಿ ಪ್ರಕಾಶ್ ಛಾಯಾಗ್ರಹಣ ಹಾಗೂ ಸಂಜೀವ ರೆಡ್ಡಿ ಸಂಕಲನ ಈ ಚಿತ್ರಕ್ಕಿದೆ. ಸುಧಾ ಬೆಳವಾಡಿ, ರಾಧಾ ರಾಮಚಂದ್ರ, ನೆ ಲ ನರೇಂದ್ರಬಾಬು, ನೆ ಲ ಮಹೇಶ್ ಬಾಬು, ಅಪ್ಪು ವೆಂಕಟೇಶ್, ಖುಷಿ, ನಂದಿನಿ, ಪ್ರಿನ್ಸ್ ಶರತ್, ಅನುಷ ಜೈನ್, ಶ್ರೀಮತಿ, ಸುರೇಶ್, ಮಂಜು, ಶ್ರೀನಿವಾಸ್ ಸೇರಿದಂತೆ ನಲವತ್ತೆಂಟಕ್ಕೂ ಅಧಿಕ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ನಾನೇ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು, ಗೀತರಚನೆ ಮಾಡಿದ್ದೇನೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಬೆಂಬಲವಿರಲಿ ಎಂದರು ನಿರ್ದೇಶಕ ದಿನೇಶಾಚಾರ್.

ಹಲವು ವರ್ಷಗಳಿಂದ ದಿನೇಶಾಚಾರ್ ನನಗೆ ಪರಿಚಯ. ಚಿತ್ರ ಮಾಡುತ್ತೇನೆ ಎಂದಾಗ ಮೊದಲು ಬೇಡ ಅಂದೆ. ಆನಂತರ ಈ ಚಿತ್ರ ಕಥೆ ಹೇಳಿದರು. ಇಷ್ಟವಾಯಿತು. ಅವರ ಪ್ರಯತ್ನಕ್ಕೆ ನಿಮ್ಮ  ಪ್ರೋತ್ಸಾಹವಿರಲಿ ಎಂದು ಕಾರ್ಯಕಾರಿ ನಿರ್ಮಾಪಕ ರವಿಶಂಕರ್ ತಿಳಿಸಿದರು.ಚಿತ್ರದಲ್ಲಿ ಅಭಿನಯಿಸಿರುವ ಅಪ್ಪು ವೆಂಕಟೇಶ್, ನೆ ಲ ಮಹೇಶ್ ಬಾಬು, ಖುಷಿ, ಪ್ರಿನ್ಸ್ ಶರತ್ ಮುಂತಾದ ಕಲಾವಿದರು ಹಾಗೂ ತಂತ್ರಜ್ಞರು ಚಿತ್ರದ ಕುರಿತು ಮಾತನಾಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು