LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಸರ್ಕಾರಿ ಗೋಮಾಳದಲ್ಲಿ ವಾಸವಿರುವ ಗ್ರಾಮಸ್ಥರಿಗೆ ಮೂಲಸೌಕರ್ಯ ಒದಗಿಸಿಲ್ಲ: ಎಂ.ಡಿ ರಾಮಾಂಜಿ ಬೇಸರ

ವಿಜಯಪುರ: ಮೂವತ್ತು ವರ್ಷಗಳಿಂದ ಸರ್ಕಾರಿ ಗೋಮಾಳದಲ್ಲಿ ಮನೆಗಳು ಕಟ್ಟಿಕೊಂಡು ಜೀವನ ಮಾಡುತ್ತಿದ್ದು, ಸರ್ಕಾರಕ್ಕೆ ನಮೂನೆ 57, ಹಾಗೂ ಮನೆಗಳು ಕಟ್ಟಿಕೊಂಡಿರುವ ಜಾಗಗಳಿಗೆ 94 ಸಿ ಅರ್ಜಿ ಹಾಕಿಕೊಂಡಿದ್ದರೂ ಇದುವರೆಗೂ ಯಾರಿಗೂ ದಾಖಲೆಗಳು ಮಾಡಿಕೊಟ್ಟಿಲ್ಲ. ಕೆಲವರಿಗೆ ಮಾತ್ರ 9- 10ಮಾಡಿಕೊಟ್ಟು ಸೌಲಭ್ಯಗಳು ಕಲ್ಪಿಸಿಕೊಟ್ಟಿದ್ದಾರೆ. ಉಳಿದವರಿಗೆ ಗ್ರಾಮ ಪಂಚಾಯಿತಿಯಿಂದ ಅಗತ್ಯ ಮೂಲ ಸೌಕರ್ಯವನ್ನೂ ಒದಗಿಸಿಕೊಟ್ಟಿಲ್ಲ ಎಂದು ಬಿ.ಎಸ್.ಪಿ ಪಕ್ಷದ ತಾಲ್ಲೂಕುಅಧ್ಯಕ್ಷ ಮಲ್ಲೇಪುರ ಎಂ.ಡಿ.ರಾಮಾಂಜಿ ಬೇಸರ ವ್ಯಕ್ತಪಡಿಸಿದರು.

ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿ ಮಲ್ಲೇಪುರ ಗ್ರಾಮದಲ್ಲಿ ಸರ್ಕಾರಿ ಗೋಮಾಳ ಸರ್ವೆ ನಂಬರ್ 50 ಪಿ.1ರಲ್ಲಿ 16 ಎಕರೆ 34 ಗುಂಟೆ ಗೋಮಾಳವಿದ್ದು, ಮನೆಗಳು ನಿರ್ಮಾಣಮಾಡಿಕೊಂಡು ಮೂವತ್ತು ವರ್ಷಗಳಿಂದ 107 ಕುಟುಂಬಗಳವರು ಇಲ್ಲಿ ವಾಸವಾಗಿದ್ದಾರೆ. ಆದರೆ, ಕುಡಿಯುವ ನೀರು, ಬೀದಿದೀಪಗಳು, ಚರಂಡಿ ವ್ಯವಸ್ಥೆಯಾಗಲಿ, ರಸ್ತೆಯಾ
ಗಲಿ ಯಾವುದೂ ಮಾಡಿಕೊಟ್ಟಿಲ್ಲ. ಇಲ್ಲಿನ ಬಹುತೇಕರು ಭೂರಹಿತರೇ ಆಗಿದ್ದಾರೆ.

ಎಲ್ಲರೂ ಕೂಲಿ ಕೆಲಸಮಾಡಿಕೊಂಡು ಜೀವನ ಮಾಡುವವರಾಗಿದ್ದಾರೆ.ನಾವು ಹಲವಾರು ಬಾರಿ ಹೋರಾಟಗಳು ಮಾಡಿಕೊಂಡು ಬಂದಿದ್ದೇವೆ. ಜಿಲ್ಲಾಧಿಕಾರಿ ಉಪವಿಭಾಗಾಧಿಕಾರಿ ತಹಶೀಲ್ದಾರ್ ಅವರಿಗೂ ಮನವಿಗಳು ಕೊಟ್ಟದ್ದೇವೆ. ಅವರು ಇದುವರೆಗೂ ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ, ಇಲ್ಲಿರುವ ಎಲ್ಲರಿಗೂ ಹಕ್ಕುಪತ್ರಗಳನ್ನು ವಿತರಣೆ ಮಾಡಬೇಕು, ಅಗತ್ಯವಾಗಿರುವ ಮೂಲ ಸೌಕರ್ಯಗಳನ್ನು ಒದಗಿಸಿಕೊಡಬೇಕು.

ಅವರು ನಿರ್ಲಕ್ಷ್ಯವಹಿಸಿದರೆ ಉಗ್ರ ಹೋರಾಟಮಾಡುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ಮಲ್ಲೇಪುರ ಗ್ರಾಮಸ್ಥರಾದ ಚಿಕ್ಕರಂಗಪ್ಪ, ಮುನಿರಾಜು, ಮಂಜುನಾಥ್, ರಾಜೇಶ್, ಮುನಿಆಂಜಿನಪ್ಪ, ಕೃಷ್ಣಪ್ಪ, ಮಂಜಮ್ಮ, ಮದ್ದೂರಪ್ಪ, ಸುಧಾಕರ್, ಸಂತೋಷ್, ತೇಜಸ್, ಮುಂತಾದವರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು