LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಸರ್ಕಾರಿ ಶಾಲೆ ಮಕ್ಕಳಿಗೆ ಟ್ರ್ಯಾಕ್ ಸೂಟ್, ಟೀ ಶರ್ಟ್ ವಿತರಣೆ

ಬೆಂಗಳೂರು ಗ್ರಾಮಾಂತರ: ವಿಜಯ್ ಫೌಂಡೇಷನ್ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಕಸಾಘಟ್ಟ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಟ್ರ್ಯಾಕ್ ಸೂಟ್, ಸ್ವೇಟರ್, ಟೀ ಶರ್ಟ್ ಗಳನ್ನು ವಿತರಿಸಲಾಯಿತು.ಬೆಂಗಳೂರಿನ ವಿಜಯ್ ಫೌಂಡೇಷನ್ ಸಂಸ್ಥಾಪಕ ಅಧ್ಯಕ್ಷರಾದ ವಿಜಯಕುಮಾರ್ ಹಾಗೂ ಸಮಾಜ ಸೇವಕ ಹಾಗೂ ವಿಜಯ್ ಫೌಂಡೇಷನ್ ನ ಕಾರ್ಯದರ್ಶಿ ತಿರುಮಲೇಗೌಡ ಅವರು, ಸೌಹಾರ್ದ ಕರ್ನಾಟಕ ಸಂಘಟನೆಯ ರಾಜ್ಯ ಕಾರ್ಯದರ್ಶಿ, ಕನ್ನಡ ಜಾನಪದ ಪರಿಷತ್ತಿನ ಗೋವಿಂದರಾಜನಗರ ಘಟಕದ ಅಧ್ಯಕ್ಷ ರ. ನರಸಿಂಹಮೂರ್ತಿ ಮತ್ತು ವಿಜಯ್ ಫೌಂಡೇಷನ್ ನ ಪದಾಧಿಕಾರಿಗಳು ಶಾಲಾ ಮಕ್ಕಳಿಗೆ ಟ್ರ್ಯಾಕ್ ಸೂಟ್ ಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ತಿರುಮಲೇ ಗೌಡರು ವಿಜಯ್ ಫೌಂಡೇಷನ್ ಮೂಲಕ ಕಳೆದ ವರ್ಷ ಆರಂಭದಲ್ಲಿ ಈ ಶಾಲೆ ಮತ್ತು ಅಕ್ಕಪಕ್ಕ ಗ್ರಾಮದ ಹಲವು ಶಾಲೆಗಳ ಮಕ್ಕಳಿಗೆ ಉಚಿತವಾಗಿ ನೋಟ್ ಪುಸ್ತಕಗಳನ್ನು ಮತ್ತು ಬ್ಯಾಗ್‍ಗಳನ್ನು ನೀಡಿದ್ದೆವು ಈಗ ಶಾಲಾ ಮಕ್ಕಳಿಗೆ ಟ್ರ್ಯಾಕ್ ಶೂಟ್, ಟೀ ಶರ್ಟ್, ಸ್ವೇಟರ್ ಗಳನ್ನು ನೀಡಿದ್ದೇವೆ ಎಂದು ತಿಳಿಸಿದರು.
ವಿಜಯ್ ಫೌಂಡೇಷನ್ ನ ಸಂಸ್ಥಾಪಕ ಅಧ್ಯಕ್ಷರಾದ ವಿಜಯಕುಮಾರ್ ಮಾತನಾಡಿ ಇದೇ ಊರಿನ ತಿರುಮಲೇಗೌಡರ ಆಶಯದಂತೆ ಕಸಾಘಟ್ಟ ಸರ್ಕಾರಿ ಶಾಲೆಯ ಮಕ್ಕಳಿಗೆ ಟ್ರ್ಯಾಕ್ ಸೂಟ್ ನೀಡಲಾಗುತ್ತಿದೆ,

ವಿಜಯ್ ಫೌಂಡೇಷನ್ ಮೂಲಕ ರಾಜ್ಯದ ಅನೇಕ ಜಿಲ್ಲೆಗಳಲ್ಲಿನ ಸರ್ಕಾರಿ ಶಾಲಾ ಮಕ್ಕಳಿಗೆ ಸಹಾಯಸ್ತ ನೀಡುವ ಮೂಲಕ ಸರ್ಕಾರಿ ಶಾಲಾ ಮಕ್ಕಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ ಶಾಲಾ ಮಕ್ಕಳ ಕ್ರೀಡಾ ಚಟುವಟಿಕೆಗಳಿಗೆ ಬೇಕಾಗುವ ಸಾಮಗ್ರಿಗಳನ್ನು ಮುಂದಿನ ದಿನಗಳಲ್ಲಿ ನೀಡಲಾಗುವುದು ಎಂದು ತಿಳಿಸಿದರು.
ಸೌಹಾರ್ದ ಕರ್ನಾಟಕ ರಾಜ್ಯ ಕಾರ್ಯದರ್ಶಿ,

ಕನ್ನಡ ಜಾನಪದ ಪರಿಷತ್ತಿನ ಗೋವಿಂದರಾಜನಗರ ಘಟಕದ ಅಧ್ಯಕ್ಷ ರ. ನರಸಿಂಹಮೂರ್ತಿ ಮಾತನಾಡಿ ಶಿಕ್ಷಣ ಕ್ಷೇತ್ರ ಖಾಸಗೀಕರಣಗೊಂಡಿದ್ದು ಗ್ರಾಮೀಣ ಪ್ರದೇಶದ ಮಕ್ಕಳು ಸೌಲಭ್ಯ ವಂಚಿತರಾಗುತ್ತಿದ್ದಾರೆ. ಸರ್ಕಾರಿ ಶಾಲೆಗಳನ್ನು ಉಳಿಸಬೇಕಾದರೆ ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಉತ್ತೇಜನ ನೀಡುವ ಕೆಲಸ ಮಾಡಬೇಕು. ಸರ್ಕಾರಿ ಶಾಲೆಗಳ ಮಕ್ಕಳ ಕಲಿಕೆಯನ್ನು ಉತ್ತೇಜಿಸುವ ಸಲುವಾಗಿ ಫೌಂಡೇಷನ್ ಅಧ್ಯಕ್ಷರಾದ ವಿಜಯಕುಮಾರ್ ಅವರ ನೇತೃತ್ವದಲ್ಲಿ ಗ್ರಾಮೀಣ ಪ್ರದೇಶದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯ ಉಳಿವಿಗೆ ವಿಜಯ್ ಫೌಂಡೇಷನ್ ಫೌಂಡೇಷನ್ ಸ್ಪಂಧಿಸುತ್ತಿದೆ ಎಂದು ತಿಳಿಸಿದರು.ಈ ವೇಳೆ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು, ಶಾಲಾ ಮಕ್ಕಳು, ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷರು, ಸದಸ್ಯರು, ಗ್ರಾ.ಪಂ.ಸದಸ್ಯರು, ಗ್ರಾಮಸ್ಥರು ವಿಜಯ್ ಫೌಂಡೇಷನ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು