LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Ramanagara

ಸಹಕಾರ ಸಂಘದ ಚುನಾವಣೆ ಮುಂದೂಡಿಕೆ ಖಂಡಿಸಿ ಜೆಡಿಎಸ್ ಪ್ರತಿಭಟನೆ

ರಾಮನಗರ: ಹಳ್ಳಿಮಾಳ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆಯಬೇಕಿದ್ದ ಚುನಾವಣೆ ಮುಂದೂಡಿರುವುದನ್ನು ಖಂಡಿಸಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ನಗರದ ಕಂದಾಯ ಭವನದಲ್ಲಿರುವ ಸಹಕಾರ ಸಂಘಗಳ ಉಪನಿಬಂಧಕರು ಹಾಗೂ ಸಂಘಗಳನೋಂದಣಾಧಿಕಾರಿಗಳ ಕಚೇರಿ ಮುಂಭಾಗ ಜೆಡಿಎಸ್ - ಬಿಜೆಪಿ ಕಾರ್ಯಕರ್ತರು ಡಿಆರ್ ಹಾಗೂ ಚುನಾವಣಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ನಿಖಿಲ್ ಕುಮಾಸ್ವಾಮಿ ಮಾತನಾಡಿ ಸೊಸೈಟಿ ಚುನಾವಣೆ ವಿಚಾರವಾಗಿ ಕಾಂಗ್ರೆಸ್ ತನ್ನ ಅಧಿಕಾರ ದುರುಪಯೋಗ ಪಡಿಸಿಕೊಂಡು ಅಧಿಕಾರಿಗಳ ಮೇಲೆ ಒತ್ತಡ ಹೇರಿ ಚುನಾವಣೆ ಮುಂದೂಡುತ್ತಿರುವುದು ಸರಿ ಅಲ್ಲ ಎಂದ ಅವರು ಕಾಂಗ್ರೆಸ್ ನ ದೌರ್ಜನ್ಯ ದಬ್ಬಾಳಿಕೆ ಅಧಿಕಾರ ಜಾಸ್ತಿ ದಿನ ಉಳಿಯುವುದಿಲ್ಲ ದೇವೇಗೌಡರ ಕಾಲದಿಂದ ರಾಜಕೀಯ ಮಾಡುತ್ತಾ ಬಂದಿರುವ ನಮ್ಮ ಪಕ್ಷ ಯಾವತ್ತೂ ಸಹ ಈ ರೀತಿ ಸಣ್ಣತನದ ರಾಜಕೀಯ ಮಾಡಿಲ್ಲ ಎಂದು ಕಾಂಗ್ರೆಸ್ ಸರಕಾರದ ವಿರುದ್ಧ ಹರಿಹಾಯ್ದರು.

ಶೀಘ್ರದಲ್ಲಿ ಚುನಾವಣೆಯ ದಿನಾಂಕ ನಿಗಧಿ ಪಡಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.ಈ ಸಂದರ್ಭದಲ್ಲಿ ರೈತ ಮುಖಂಡರು, ಸಹಕಾರ ಸಂಘದ ನಿರ್ದೇಶಕರು, ಜೆಡಿಎಸ್ ಬಿಜೆಪಿ ಕಾರ್ಯಕರ್ತರು, ಮುಖಂಡರು ಪ್ರತಿಭಟನೆಯಲ್ಲಿ ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು