LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸಾಮಾನ್ಯ ಮಹಿಳೆಯರು ಮುಂದೆ ಬರಬೇಕು: ಡಿಸಿಎಂ ಡಿ. ಕೆ. ಶಿವಕುಮಾರ್

ಕನಕಪುರ: "ಹೆಣ್ಣು ಪ್ರಗತಿ ಹೊಂದಿದರೆ ಒಂದು ಕುಟುಂಬ ಪ್ರಗತಿ ಹೊಂದಿದಂತೆ. ರಾಜ್ಯ, ಹಳ್ಳಿ ಪ್ರಗತಿಯಾದಂತೆ. ಆದ ಕಾರಣಕ್ಕೆ ನಮ್ಮ ಗ್ಯಾರಂಟಿ ಯೋಜನೆಗಳು ಮಹಿಳೆಯರ ಅಭಿವೃದ್ಧಿಗೆ ಪೂರಕವಾಗಿರುವಂತೆ ರೂಪಿಸಲಾಗಿದೆ" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.

ಕನಕಪುರದಲ್ಲಿ ಭಾನುವಾರ ನಡೆದ ಕನಕಾಂಬರಿ ಮಹಿಳಾ ಒಕ್ಕೂಟದ ಮಹಿಳಾ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿ ಇದ್ದ ಬಿಜೆಪಿ ಮೈತ್ರಿ ಸರ್ಕಾರ ನಮ್ಮ ಗೃಹಲಕ್ಷ್ಮೀ ಯೋಜನೆಯನ್ನೇ ನಕಲು ಮಾಡಿ 'ಮಾಝಿ ಲಡಕಿ ಬಹಿನ್ ಯೋಜನಾ' ಎಂದು ಹೆಸರಿಟ್ಟು 1,500 ರೂಪಾಯಿಯನ್ನು ಕೊಟ್ಟಿದ್ದರು. ನಾವು ಮಹಾಲಕ್ಷ್ಮಿ ಎನ್ನುವ ಹೆಸರಿಟ್ಟು 3,000 ಸಾವಿರ ಕೊಡುವುದಾಗಿ ಭರವಸೆ ನೀಡಿದ್ದೆವು. ಆದರೆ ಅಲ್ಲಿನ ಬಿಜೆಪಿ ಮೈತ್ರಿ ಸರ್ಕಾರ ಚುನಾವಣೆಗೆ ಆರು ತಿಂಗಳು ಮುಂಚಿತವಾಗಿ ಹಣ ನೀಡಿದ ಪರಿಣಾಮ ನಮಗಿಂತ ಅವರಿಗೆ ಹೆಚ್ಚು ಮತಗಳು ಬಂದವು ಎಂದು ಹೇಳಿದ್ದಾರೆ.

ಸಾಮಾನ್ಯ ಮಹಿಳೆಯರು ಮುಂದೆ ಬರಬೇಕು

ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇಕಡ 50ರಷ್ಟು ಮೀಸಲಾತಿ ನೀಡಲಾಗಿದೆ. ಆದರೆ ಮುಖಂಡರುಗಳು ತಮ್ಮ ಹೆಂಡತಿ, ತಂಗಿ, ಅಕ್ಕ ಅಥವಾ ಸಂಬಂಧಿಕರನ್ನು ನಿಲ್ಲಿಸುತ್ತಿದ್ದಾರೆ. ಸಾಮಾನ್ಯ ಮಹಿಳೆಯರು ಅಧಿಕಾರದ ಗದ್ದುಗೆ ಇರಲು ಮುಂದಕ್ಕೆ ಬರಬೇಕು ಎಂದು ಕರೆ ನೀಡಿದ್ದಾರೆ.

ಸಂಸತ್ತಿನಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವ ಮಸೂದೆಗೆ ಒಪ್ಪಿಗೆ ದೊರೆತಿದೆ. ಮುಂದಿನ ವಿಧಾನಸಭಾ ಚುನಾವಣೆ ಹೊತ್ತಿಗೆ ಶೇಕಡ 33ರಷ್ಟು ಮೀಸಲಾತಿಯನ್ನು ಮಹಿಳೆಯರಿಗೆ ನೀಡಬೇಕಾಗಬಹುದು. ಅದಕ್ಕಾಗಿ ಸಾಮಾನ್ಯ ಮಹಿಳೆಯರು ಈಗಿನಿಂದಲೇ ತಮ್ಮಲ್ಲಿರುವ ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಿ.

ಸ್ತ್ರೀಶಕ್ತಿ ಸಂಘಗಳಿಗೆ ಮುನ್ನುಡಿ ಬರೆದಿದ್ದೆ ನಾವು

ಎಸ್ಎಂ. ಕೃಷ್ಣ ಅವರ ಸಂಪುಟದಲ್ಲಿ ನಾನು ಸಹಕಾರ ಸಚಿವನಾಗಿದ್ದೆ. ಆಗ ಈ ಸ್ತ್ರೀ ಶಕ್ತಿ ಸಂಘಗಳಿಗೆ ಮುನ್ನುಡಿ ಬರೆದಿದ್ದೆ ನಾವು. ಸಹಕಾರ ಇಲಾಖೆಯ ಅಡಿಯಲ್ಲಿ ಬರುವ ಡಿಸಿಸಿ ಬ್ಯಾಂಕ್ ನೇತೃತ್ವದಲ್ಲಿ ಸ್ವಸಹಾಯ ಗುಂಪುಗಳಿದ್ದವು, ಇವುಗಳನ್ನೇ ಸ್ತ್ರೀಶಕ್ತಿ ಸಂಘಗಳೆಂದು ಪರಿವರ್ತಿಸಿ, ಸಚಿವರಾಗಿದ್ದ ಮೋಟಮ್ಮ ಅವರಿಗೆ ನೇತೃತ್ವ ನೀಡಲಾಯಿತು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಮಹಿಳೆಯರ ಆರ್ಥಿಕ ಸ್ಥಿತಿ ಆರೋಗ್ಯವಾಗಿರಬೇಕು

ಸ್ತ್ರೀ ಶಕ್ತಿ ಸಂಘಗಳು ಮಾಡಿದ ಪರಿಣಾಮವಾಗಿ ಹೆಣ್ಣು ಮಕ್ಕಳು ಮನೆಯಲ್ಲಿ ಇರುತ್ತಿಲ್ಲ ಇಂದು ಅನೇಕ ನಾಯಕರು ನನಗೆ ಬೈದರು. ಮನೆಯಲ್ಲಿ ಹೆಣ್ಣಿಗೆ ಆರ್ಥಿಕವಾಗಿ ಶಕ್ತಿ ಕೊಡಬೇಕು ಎಂದು ಈ ಕಾರ್ಯಕ್ರಮಕ್ಕೆ ಬೆನ್ನೆಲುಬಾಗಿ ನಿಂತೆ. ಹೆಣ್ಣು ಕುಟುಂಬದ ಕಣ್ಣು. ಕುಟುಂಬದಲ್ಲಿ ಹೆಣ್ಣಿನ ಮನಸ್ಥಿತಿ, ಪರಿಸ್ಥಿತಿ ಆರೋಗ್ಯವಾಗಿ ಇದ್ದರೆ, ನಾವೆಲ್ಲರೂ ಆರೋಗ್ಯವಾಗಿ ಇದ್ದಂತೆ. ಪುರುಷರೂ ಇದಕ್ಕೆ ಕೊಡುಗೆ ಕೊಡಬೇಕು ಎಂದು ಡಿಕೆ ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು