LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಸಾರಿಗೆ ನೌಕರರ ಕನಸು ನನಸು: ನಗದು ರಹಿತ ವೈದ್ಯಕೀಯ ಚಿಕಿತ್ಸೆ ಆರಂಭ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಬಹುದಿನಗಳ ಕನಸು ನನಸಾಗಿದೆ. ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಈ ವೇಳೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಉಪಸ್ಥಿತರಿದ್ದರು. ಸರ್ಕಾರಿ ಒಡೆತನದ ಸಾರಿಗೆ ಸಂಸ್ಥೆಗಳ ಪೈಕಿ ಮೊದಲನೆಯ ರಾಜ್ಯ ಎನ್ನುವ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ.

ಕರ್ನಾಟಕ ಸರ್ಕಾರ ರಾಜ್ಯದ ಖಾಸಗಿ ಮತ್ತು ಆಯುರ್ವೇದಿಕ್ ಸೇರಿದಂತೆ 250ಕ್ಕೂ ಹೆಚ್ಚು ಆಸ್ಪತ್ರೆಗಳೊಂದಿಗೆ ಒಡಬಂಡಿಕೆ ಮಾಡಿಕೊಂಡಿದೆ. ಈ ಒಡಂಬಡಿಕೆಯಂತೆ ಕೆಎಸ್​ಆರ್​ಟಿಸಿ ನೌಕರರು, ಕಾರ್ಮಿಕರು ಈ ಆಸ್ಪತ್ರೆಗಳಲ್ಲಿ ನಗದು ಇಲ್ಲದೆ ಚಿಕಿತ್ಸೆ ಪಡೆಯಬಹುದಾಗಿದೆ. ಸೂಪರ್ ಸ್ಪೆಷಾಲಿಟಿ, ಮಲ್ಟಿ ಸ್ಪೆಷಾಲಿಟಿ ಸೇರಿದಂತೆ ಸಾಮಾನ್ಯ ಆಸ್ಪತ್ರೆಯಲ್ಲೂ ಕೆಎಸ್​ಆರ್​ಟಿಸಿ ನೌಕರರು, ಸಿಬ್ಬಂದಿಗೆ ನಗದು ರಹಿತ ಚಿಕಿತ್ಸೆ ದೊರೆಯಲಿದೆ.

ಆರೋಗ್ಯ ಕಾರ್ಡ್​ ಮೂಲಕ ಸಿಬ್ಬಂದಿಯ ಕುಟುಂಬದ ಸದಸ್ಯರು (ಪತಿ, ಪತ್ನಿ, ಮಕ್ಕಳು, ತಂದೆ, ತಾಯಿ) ಈ ಸೌಲಭ್ಯವನ್ನು ಪಡೆಯಬಹುದು. ಒಟ್ಟಾರೆಯಾಗಿ, ಕುಟುಂಬದ ಆರು ಸದಸ್ಯರಿಗೆ ನಗದು ರಹಿತ ಆರೋಗ್ಯ ಸೇವೆ ಲಭ್ಯವಾಗಲಿದೆ. ನೌಕರರು ನಿವೃತ್ತಿಯಾಗುವವರೆಗೂ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು.

ಕೆಎಸ್ಆರ್ಟಿಸಿ ಆರೋಗ್ಯ ಕಾರ್ಡ್​ಗಾಗಿ ನೌಕರರು ಪ್ರತಿ ತಿಂಗಳು 650 ರೂಪಾಯಿ ಪಾವತಿ ಮಾಡಬೇಕು. ಕೆಎಸ್ಆರ್​​ಟಿಸಿ ನಿಗಮ 600 ರೂಪಾಯಿ ಪಾವತಿ ಮಾಡುತ್ತದೆ. ಇದರಿಂದ ವರ್ಷಕ್ಕೆ ಒಟ್ಟು 46 ಕೋಟಿ ರೂಪಾಯಿ ಸಂಗ್ರಹವಾಗುತ್ತದೆ ಎಂದು ಕೆಎಸ್ಆರ್​ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬು ಕುಮಾರ್ ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು