LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸಾವಿತ್ರಿ ಬಾಯಿ ಫುಲೆ ಶ್ರಮ ಅನನ್ಯ: ಸಚಿವ ಸತೀಶ್ ಜಾರಕಿಹೊಳಿ

ಕೆಲ ವರ್ಗಕ್ಕೆ ಮಾತ್ರ ಸೀಮಿತವಾಗಿದ್ದ ಶಿಕ್ಷಣವನ್ನು ಸರ್ವರಿಗೂ ಸಿಗುವಂತೆ ಮಾಡಿದ ಕೀರ್ತಿ ಸಾವಿತ್ರಿಬಾಯಿ ಫುಲೆ ಅವರಿಗೆ ಸಲ್ಲುತ್ತದೆ ಮತ್ತು ಸಾವಿತ್ರಿ ಬಾಯಿ ಫುಲೆ ಶ್ರಮ ಅನನ್ಯ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.ದಲಿತ ಸಂಘರ್ಷ ಸಮಿತಿ, ಭೀಮವಾದ ಸಂಘಟನೆಯ ರಾಜ್ಯ ಸಂಸ್ಥಾಪಕ ಬಿ ಎಂ ವೆಂಕಟೇಶ್ ನೇತೃತ್ವದಲ್ಲಿ ವಿದ್ಯಾಮಾತೆ ಸಾವಿತ್ರಿ ಬಾಯಿ ಫುಲೆರವರ 193ನೇ ಜಯಂತಿ ಮತ್ತು ರಾಜ್ಯಮಟ್ಟದ ಸಮಾವೇಶ ಸಮಾರಂಭ ನಗರದ ಟೌನ್ ಹಾಲ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು..

ಮಹಿಳಾ ಮೊದಲ ಶಿಕ್ಷಕಿ ಸಾವಿತ್ರಿ ಬಾಯಿ ಫುಲೆ ಜಯಂತಿ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಜ್ಯೋತಿ ಬೆಳಗಿಸಿ ಚಾಲನೆ ನೀಡಿ ಮಾತನಾಡಿದರು.ದೇಶದಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಪ್ರತ್ಯೇಕ ಶಾಲೆ ಆರಂಭಿಸುವ ಮೂಲಕ ಮಹಿಳಾ ಶಿಕ್ಷಣ ಪದ್ಧತಿಗೆ ಸಾವಿತ್ರಿಬಾಯಿ ಫುಲೆ ಮುನ್ನುಡಿ ಬರೆದರು. ಮಹಿಳೆಯರನ್ನು ಅಡುಗೆ ಮನೆಗೆ ಸೀಮಿತ ಮಾಡಿದ ಕಾಲದಲ್ಲಿ ಶಿಕ್ಷಣ ಕ್ರಾಂತಿ ಮಾಡಿದ ಪರಿಣಾಮ ಇಂದು ಮಹಿಳೆಯರು ಎಲ್ಲ ರಂಗಗಳಲ್ಲಿ ಸಾಧನೆ ಮಾಡಲು ಕಾರಣವಾಗಿದೆ ಎಂದು ಬಣ್ಣಿಸಿದರು.

ಕಾರ್ಯಕ್ರಮದಲ್ಲಿ ಕೋರ್ ಕಮಿಟಿ ಅಧ್ಯಕ್ಷರಾದ ಸಿದ್ದಾರ್ಥ ಸಿಂಗೇ, ರಾಜ್ಯ ಸಂಘಟನಾ ಸಂಚಾಲಕರುಗಳಾದ ಸಂಜೀವ್ ಕಾಂಬ್ಳೆ, ಡಿ ಸಿದ್ದರಾಜು, ಯಮನಪ್ಪ ,ಹಳ್ಳದ್ದ ಕೇರಿ, ಶ್ರೀನಿವಾಸಲು, ಸುಭಾಷ್ ಚಂದ್ರಮೂರ್ತಿ ಡಿ.ಎನ್. ಹಾಗೂ ರಾಜ್ಯ ಸಮಿತಿ ಸದಸ್ಯರಾದ ಹನುಮಂತಪ್ಪ, ಕೆಂಪಣ್ಣ ಶಿರಹಟ್ಟಿ, ಚಿದಾನಂದ ತಳಕೇರಿ, ಶಶಿಕಾಂತ್ ಕಾಂಬ್ಳೆ, ಆನಂದ ಅರಬಳ್ಳಿ, ಗುರುಬಾಳಪ್ಪ ನವಲಗೇರಿ, ಆನಂದ, ಸಣ್ಣೇಗೌಡ, ಮಾದೇವ, ವೈ ರಾಮಚಂದ್ರ ಬಾಬು, ರಮೇಶ್ ಹರಿಜನ, ಪರಮಾನಂದ ತಳವಾರ್ ಬೆಳಗಾವಿ ವಿಭಾಗ್ಯ ಸಂಚಾಲಕರು ಮತ್ತು ರಾಜ್ಯ ಮಹಿಳಾ ಒಕ್ಕೂಟ ಹಿಂದೂಮತಿ, ಶಿರಗಾವಿ, ಪವಿತ್ರಮ್ಮ ,ಸಂಗೀತ ಕಾಂಬಳೆ ,ರೇಖಾ ಬಂಗಾರಿ, ಸಾವಿತ್ರಿ ಪ್ರಿಯದರ್ಶಿನಿ, ಅನಿತಾ ಕೂರವಾರ, ನಾಗಮ್ಮ, ನಾಗವೇಣಿ ಹಾಗೂ ಜಿಲ್ಲಾ ಪದಾಧಿಕಾರಿಗಳಾದ ಎಸ್ ಬಾಬು ಬೆಂಗಳೂರು ನಗರ ಜಿಲ್ಲಾ ಮಂಜುನಾಥ್ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು