LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸಿಂಘ್ವಿ ಆಸನದಲ್ಲಿ ನೋಟಿನ ಕಂತೆ ಪತ್ತೆ; ತನಿಖೆಗೆ ಧಂಕರ್ ಆದೇಶ; ಕಾಂಗ್ರೆಸ್ ಸಂಸದ ತಿರುಗೇಟು

ನವದೆಹಲಿ: ಚಳಿಗಾಲದ ಅಧಿವೇಶನದ ಆರಂಭದಲ್ಲೇ ಹಲವು ನಾಟಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಕಾಂಗ್ರೆಸ್ ಸಂಸದನ ಆಸನದಲ್ಲಿ ಹಣದ ಕಂತೆ ಪತ್ತೆಯಾಗಿರುವುದು ಇದೀಗ ಭಾರಿ ಸುದ್ದಿಗೆ ಗ್ರಾಸವಾಗಿದೆ.

ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ ಅವರಿಗೆ ಮೀಸಲಾಗಿದ್ದ ಆಸನದಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿವೆ. ಈ ಕುರಿತು ತನಿಖೆಗೆ ಆದೇಶಿಸಲಾಗಿದೆ' ಎಂದು ರಾಜ್ಯಸಭೆ ಸಭಾಪತಿ ಜಗದೀಪ್ ಧಂಕರ್ ಹೇಳಿದ್ದಾರೆ.

ಗುರುವಾರ ಸದನವನ್ನು ಮುಂದೂಡಿದ ಬಳಿಕ ಪರಿಶೀಲನೆ ವೇಳೆ ಆಸನ ಸಂಖ್ಯೆ 222ರಲ್ಲಿ ಭದ್ರತಾ ಸಿಬ್ಬಂದಿ ಕಂತೆ ಕಂತೆ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಸದನಕ್ಕೆ ತಿಳಿಸುವುದು ನನ್ನ ಕರ್ತವ್ಯವಾಗಿದೆ. ನೋಟುಗಳು ನಕಲಿಯೋ ಅಥವಾ ಅಸಲಿಯೋ ಎಂಬುದು ತಿಳಿದು ಬಂದಿಲ್ಲ. ಸದನದ ಶಿಷ್ಟಾಚಾರದಂತೆ ತನಿಖೆಗೆ ಆದೇಶಿಸಲಾಗಿದೆ ಎಂದು ಜಗದೀರ್ ಧಂಕರ್ ಅವರು ಮಾಹಿತಿ ನೀಡಿದ್ದಾರೆ.

ಯಾರಾದರೂ ಕರೆನ್ಸಿ ನೋಟುಗಳು ತಮ್ಮದು ಎಂದು ಕೇಳುತ್ತಾರೆ ಎಂದು ನಾನು ನಿರೀಕ್ಷಿಸುತ್ತಿದ್ದೆ. ಆದರೆ ಯಾರೂ ಅದನ್ನು ಇಲ್ಲಿಯವರೆಗೆ ತಮ್ಮದೆಂದು ಒಪ್ಪಿಕೊಂಡಿಲ್ಲ. ಜನರು ಅದನ್ನು ಮರೆತುಬಿಡುವ ಆರ್ಥಿಕತೆಯ ಸ್ಥಿತಿಯನ್ನು ಇದು ಪ್ರತಿಬಿಂಬಿಸುತ್ತದೆಯೇ" ಎಂದು ಅವರು ಅಚ್ಚರಿ ವ್ಯಕ್ತಪಡಿಸಿದರು.

ಸಭಾಪತಿಗಳಿಗೆ ಕಾಂಗ್ರೆಸ್ ಸಂಸದ ತಿರುಗೇಟು

ಇನ್ನು ಜಗದೀಪ್ ಧಂಕರ್ ಅವರ ಆರೋಪಕ್ಕೆ ಸಂಸದ ಸಿಂಘ್ವಿ ತಿರುಗೇಟು ನೀಡಿದ್ದು, 'ಇದನ್ನು ಕೇಳಿ "ಆಶ್ಚರ್ಯವಾಯಿತು".. ನಾನು ನಿನ್ನೆ ಮಧ್ಯಾಹ್ನ 12.57 ಕ್ಕೆ ಸದನದ ಒಳಗೆ ಪ್ರವೇಶ ಮಾಡಿದೆ. 1 ಗಂಟೆಗೆ ಸದನ ಆರಂಭವಾಯಿತು. ಮಧ್ಯಾಹ್ನ 1 ರಿಂದ 1:30 ರವರೆಗೆ ನಾನು ಅಯೋಧ್ಯಾ ಪ್ರಸಾದ್ ಅವರೊಂದಿಗೆ ಕುಳಿತುಕೊಂಡೆ.

ಕ್ಯಾಂಟೀನ್ ಮತ್ತು ಮಧ್ಯಾಹ್ನ 1:30 ಕ್ಕೆ ನಾನು ಸಂಸತ್ತನ್ನು ಬಿಟ್ಟೆ, ನಾನು ಸದನದಲ್ಲಿ ಒಟ್ಟು 3 ನಿಮಿಷಗಳು ಮತ್ತು ಕ್ಯಾಂಟೀನ್‌ನಲ್ಲಿ ನನ್ನ ವಾಸ್ತವ್ಯವು 30 ನಿಮಿಷಗಳು ಮಾತ್ರ ಇತ್ತು. ಅಂತಹ ವಿಷಯಗಳಲ್ಲಿಯೂ ರಾಜಕೀಯ ಮಾಡಲಾಗುತ್ತಿದೆ ಎಂದು ಹೇಳಿದರು.

ಅಂತೆಯೇ ಆ ಹಣ ನನ್ನದಲ್ಲ.. ಖಂಡಿತವಾಗಿ ಬೇರಾರೋ ಅದನ್ನು ತಂದು ನನ್ನ ಆಸನದ ಬಳಿ ಇಟ್ಟು ಹೋಗಿರಬಹುದು. ಈ ಬಗ್ಗೆ ವಿಚಾರಣೆ ನಡೆಯಬೇಕು. ನಮ್ಮಲ್ಲಿ ಪ್ರತಿಯೊಬ್ಬರೂ ಆಸನವನ್ನು ಲಾಕ್ ಮಾಡಬಹುದಾದ ಮತ್ತು ಕೀಲಿಯನ್ನು ಸಂಸದರು ಮನೆಗೆ ಒಯ್ಯಬಹುದಾದ ಆಸನವನ್ನು ಹೊಂದಿರಬೇಕು ಎಂದು ಸಿಂಘ್ವಿ ವ್ಯಂಗ್ಯ ಮಾಡಿದರು.

ಇನ್ನು ರಾಜ್ಯಸಭೆಯಲ್ಲಿ ಸಭಾಪತಿ ಹೇಳಿಕೆ ಗದ್ದಲಕ್ಕೆ ಕಾರಣವಾಯಿತು. ತನಿಖೆ ಪೂರ್ಣಗೊಳ್ಳದ ಹೊರತು ಸಭಾಪತಿ ಸದಸ್ಯರ ಹೆಸರು ಹೇಳಬಾರದಿತ್ತು ಎಂದು ರಾಜ್ಯಸಭೆ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಅಂದಹಾಗೆ ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 25 ರಂದು ಪ್ರಾರಂಭವಾಗಿದ್ದು, ಡಿಸೆಂಬರ್ 20ರವರೆಗೆ ನಡೆಯಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು