LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಸಿಂಧಿ ಕಾಲೇಜಿನಲ್ಲಿ ಅಂತರ್-ಕಾಲೇಜು ಸಾಂಸ್ಕೃತಿಕ ಉತ್ಸವ ಕ್ರೆಸಿಂಡೋ-2024ಕ್ಕೆ ಚಾಲನೆ

ಬೆಂಗಳೂರು: ಬೆಂಗಳೂರಿನ ಜನಪ್ರಿಯ ಶಿಕ್ಷಣ ಸಂಸ್ಥೆಯಾಗಿರುವ ಸಿಂಧಿ ಮಹಾವಿದ್ಯಾಲಯದಲ್ಲಿ ಅಂತರ್-ಕಾಲೇಜು ಸಾಂಸ್ಕೃತಿಕ ಉತ್ಸವ `ಕ್ರೆಸಿಂಡೋ 2024’ಕ್ಕೆ ನವೆಂಬರ್ 22ರ ಶುಕ್ರವಾರ ಅದ್ಧೂರಿ ಚಾಲನೆ ದೊರೆಯಿತು. 22ರಿಂದ 2 ದಿನಗಳ ಕಾಲ `ಕಲಾ ಸಂಗ್ರಾಮ’ ಎಂಬ ಥೀಮ್ ನೊಂದಿಗೆ ಈ ಸೃಜನಶೀಲ ಮತ್ತು ಪ್ರತಿಭಾನ್ವೇಷಣೆಯ ಉತ್ಸವ ನಡೆಯಲಿದೆ.

ಈ ಅಂತರ್ ಕಾಲೇಜು ಸಾಂಸ್ಕೃತಿಕ ಮತ್ತು ಮ್ಯಾನೇಜ್ಮೆಂಟ್ ಉತ್ಸವವು ಬೆಂಗಳೂರಿನಾದ್ಯಂತದ ವಿದ್ಯಾರ್ಥಿಗಳನ್ನು ಒಂದೇ ಸೂರಿನಡಿ ತಂದು, ಅವರೊಳಗಿನ ಅದ್ಭುತ ಪ್ರತಿಭೆಗಳನ್ನು ಬೆಳಕಿಗೆ ತರಲಿದೆ.ಗಂಧದಗುಡಿಯಂಥ ಜನಪ್ರಿಯ ಸಾಕ್ಷ್ಯಚಿತ್ರದ ನಿರ್ದೇಶಕರೂ ಆಗಿರುವ ಖ್ಯಾತ ಕಥೆಗಾರ, ಸಿನಿಮಾ ನಿರ್ಮಾಪಕ,
ವನ್ಯಜೀವಿ ಛಾಯಾಚಿತ್ರಗ್ರಾಹಕ ಶ್ರೀ. ಅಮೋಘವರ್ಷ ಅವರು `ಕ್ರೆಸಿಂಡೋ 2024’ರ ಉದ್ಘಾಟನಾ ಸಮಾರಂಭದಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಈ ವೇಳೆ ಅವರುಪರಿಸರ ಹಾಗೂ ವನ್ಯಜೀವಿ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳೊಂದಿಗೆ ಹಲವು ವಿಚಾರಗಳನ್ನು ಹಂಚಿಕೊಂಡರು. ಹುಲಿ ಮತ್ತು ಆನೆಗಳಂಥ ವನ್ಯಜೀವಿಗಳಿಗೆ ಕರ್ನಾಟಕವು ತವರಾಗಿದ್ದು, ಇಂಥ ವನ್ಯಸಂಪತ್ತು ಹೊಂದಿರುವುದು ಕನ್ನಡಿಗರಾದ ನಮಗೆಲ್ಲರಿಗೂ ಹೆಮ್ಮೆಯ ಸಂಗತಿ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಿಂಧಿ ಮಹಾವಿದ್ಯಾಲಯದ ಅಧ್ಯಕ್ಷರಾದ ಆಶಿμï ಅಮರ್ ಲಾಲ್, ಕಾರ್ಯದರ್ಶಿಗಳಾದ ಕಿರಣ್ ಎಸ್. ಚಾವ್ಲಾ, ಪ್ರಾಂಶುಪಾಲರಾದ ಡಾ.ಎನ್. ಆಶಾ ಮತ್ತಿತರ ಗಣ್ಯರು ಉಪಸ್ಥಿತರಿದ್ದು, ಸ್ಪರ್ಧಿಗಳಿಗೆ ಶುಭ ಹಾರೈಸಿದರು.

ಉದ್ಘಾಟನಾ ಸಮಾರಂಭದಲ್ಲಿ ಕಲಾಸಂಗ್ರಾಮ್ ತಂಡವು ಭರತನಾಟ್ಯ. ಕೂಚಿಪುಡಿ, ಯಕ್ಷಗಾನ ಸೇರಿದಂತೆ ವಿವಿಧ ನೃತ್ಯ ಪ್ರಕಾರಗಳನ್ನು ಪ್ರದರ್ಶಿಸಿತು.
ಕಳೆದ 20 ವರ್ಷಗಳಿಂದಲೂ ಸಿಂಧಿ ಮಹಾ ವಿದ್ಯಾ ಲಯವು ವಾರ್ಷಿಕ ಕಲಾ ಉತ್ಸವವನ್ನು ನಡೆಸಿಕೊಂಡು ಬರುತ್ತಿದ್ದು, ಪ್ರತಿ ವರ್ಷವೂ ಬೆಂಗಳೂರಿನ ಮೂಲೆ ಮೂಲೆಗಳ ಸಾವಿರಾರು ವಿದ್ಯಾರ್ಥಿಗಳು ಇದರಲ್ಲಿ ಪಾಲ್ಗೊಳ್ಳುತ್ತಾರೆ. ಈ ವರ್ಷವೂ ಎರಡು ದಿನಗಳ ಕಾಲ ಕಲಾಸಂಗ್ರಾಮ ಥೀಮ್ ನಡಿ ಕ್ರೆಸಿಂಡೋ ಉತ್ಸವ ನಡೆಯುತ್ತಿದ್ದು, ನಗರದ 150ಕ್ಕೂ ಹೆಚ್ಚು ಕಾಲೇಜುಗಳ ಸುಮಾರು 1500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಳ್ಳುತ್ತಿದ್ದಾರೆ. ನವೆಂಬರ್ 23ರ ಶನಿವಾರ ಕ್ರೆಸಿಂಡೋ 2024ರ ಸಮಾರೋಪ ಸಮಾರಂಭ ನಡೆಯಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು