LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸಿಎಂಆರ್ ಐಟಿಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಆವಿಷ್ಕಾ ರ ಪ್ರದರ್ಶನ

ಬೆಂಗಳೂರು: ಇಂದಿನ ವಿಜ್ಞಾನ ಯುಗದಲ್ಲಿ ತಂತ್ರಜ್ಞಾನದ ಆವಿಷ್ಕಾರ, ಸಂಶೋಧನೆಗಳು ದೇಶದ ಅಭಿವೃದ್ಧಿ ಮತ್ತು ಮಾನವನ ವಿಕಾಸಕ್ಕೆ ಪ್ರಮುಖ ಕಾರಣವಾಗಿವೆ. ಇದಕ್ಕೆ ಪೂರಕವಾಗಿ ನಗರದ ಐಟಿಪಿಲ್ ರಸ್ತೆಯಲ್ಲಿರುವ ಸಿಎಂಆರ್ ತಾಂತ್ರಿಕ ಮಹಾವಿದ್ಯಾಲಯ(ಸಿಎಂಆರ್ ಐಟಿ) “ಟೆಕ್ನೋ ಮೀಟ್ ಫಾರ್ ಸೊಸೈಟಿ” ಹೆಸರಿನ “ವಿಜ್ಞಾನ ಮತ್ತು ತಂತ್ರಜ್ಞಾನ ವಸ್ತು ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆ ಆಯೋಜಿಸಿತ್ತು.

ಸಿಎಂಆರ್ ವಿಶ್ವವಿದ್ಯಾಲಯ, ಸಿಎಂಆರ್ ತಾಂತ್ರಿಕ ಮಹಾವಿದ್ಯಾಲಯ, ಏಕ್ಯಾ ಸಮೂಹ ಶಾಲೆಗಳು ಸೇರಿದಂತೆ ಅನೇಕ ಕಾಲೇಜುಗಳ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಆಯೋಜನೆಗೊಂಡಿದ್ದ ಈ ವಿಜ್ಞಾನ ಮತ್ತು ತಂತ್ರಜ್ಞಾನ ವಸ್ತು ಪ್ರದರ್ಶನ, ಪ್ರಾತ್ಯಕ್ಷಿಕೆ ಎಲ್ಲರ ಗಮನ ಸೆಳೆಯಿತು.ಸಿಎಂಆರ್ ಸಮೂಹ ಶಿಕ್ಷಣ ಸಂಸ್ಥೆಗಳ ಸಿಇಓ ಮತ್ತು ಸಿಎಂಆರ್ ವಿವಿ ಪ್ರೊಚಾನ್ಸಲರ್ ಶ್ರೀ ಜಯದೀಪ್ ಕೆ.ಆರ್ ರೆಡ್ಡಿ ಅವರು ವಿಜ್ಞಾನ ಮತ್ತು ತಂತ್ರಜ್ಞಾನ ವಸ್ತು ಪ್ರದರ್ಶನವನ್ನು ಉದ್ಘಾಟಿಸಿದರು.

ಅನುಭವಿ ಪ್ರಾಧ್ಯಾಪಕರುಗಳು, ಸಂಶೋಧಕರುಗಳ ನೆರವಿನೊಂದಿಗೆ ವಿವಿಧ ವಿಭಾಗಗಳ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಂಶೋಧಿಸಿ ಆವಿಷ್ಕರಿಸಿದ ವಿಜ್ಞಾನ ಮತ್ತು ತಂತ್ರಜ್ಞಾನ ವಸ್ತು ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆಯಲ್ಲಿ ಕೃತಕ ಬುದ್ಧಿಮತ್ತೆ, ರೊಬೊಟಿಕ್ಸ್, ದತ್ತಾಂಶ ವಿಜ್ಞಾನ, ಯಂತ್ರ ಕಲಿಕೆ, ಸಂಯೋಜಕ ಉತ್ಪಾದನೆ, ಎಲೆಕ್ಟ್ರಾನಿಕ್ಸ್ ಮತ್ತು ಮೂಲ ವಿಜ್ಞಾನಗಳಂತಹ ಕ್ಷೇತ್ರಗಳಲ್ಲಿನ ವೈವಿಧ್ಯಮಯ 18 ತಂತ್ರಾಂಶ ಮತ್ತು 16 ಯಂತ್ರಾಂಶ ಸೇರಿದಂತೆ ಒಟ್ಟು 34 ತಂತ್ರಜ್ಞಾನ ಆವಿಷ್ಕಾರಗಳು ಪ್ರದರ್ಶನಗೊಂಡವು.

ಕಾರ್ಯಕ್ರಮದಲ್ಲಿ ಸಿಎಂಆರ್ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಸಂಜಯ್ ಜೈನ್, ಉಪ ಪ್ರಾಂಶುಪಾಲ ಡಾ.ಬಿ.ನರಸಿಂಹ ಮೂರ್ತಿ, ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು