LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸಿಎಂ ನಿವಾಸದ ಕೆಳಗೂ ಶಿವಲಿಂಗವಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಲಖನೌ: ಸಂಭಾಲ್ ನಲ್ಲಿ ನಡೆಯುತ್ತಿರುವ ಉತ್ಖನನದ ಬಗ್ಗೆ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದು, ಸಿಎಂ ಅಧಿಕೃತ ನಿವಾಸದ ಕೆಳಭಾಗದಲ್ಲಿಯೂ ಶಿವಲಿಂಗವಿದೆ ಎಂದು ಹೇಳಿದ್ದಾರೆ.

ಸಂಭಾಲ್ ನಲ್ಲಿ ಮುಘಲ್ ಕಾಲದ ಮಸೀದಿಯ ಆವರಣ, ಸುತ್ತಮುತ್ತಲ ಪ್ರದೇಶಗಳಲ್ಲಿ ಉತ್ಖನನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಕಳೆದ ತಿಂಗಳು ಘರ್ಷಣೆ ಉಂಟಾಗಿತ್ತು.

ಈ ಬೆಳವಣಿಗೆಗಳ ಬಗ್ಗೆ ಲಖನೌನಲ್ಲಿ ಮಾತನಾಡಿರುವ ಅಖಿಲೇಶ್ ಯಾದವ್, ಬಿಜೆಪಿ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಿಕೊಳ್ಳುವುದಕ್ಕಾಗಿ ಬೇರೆ ಬೇರೆ ಪ್ರದೇಶಗಳಲ್ಲಿ ಉತ್ಖನನ ನಡೆಸುತ್ತಿದೆ. ಇದು ಸಾರ್ವಜನಿಕರ ಗಮನವನ್ನು ಬೇರೆಡೆ ಸೆಳೆಯುವುದಕ್ಕಾಗಿ ಮಾಡಲಾಗಿರುವ ಉಪಾಯ ಎಂದು ವ್ಯಂಗ್ಯವಾಡಿದ್ದಾರೆ.

"ಮುಖ್ಯಮಂತ್ರಿಯವರ ನಿವಾಸದ ಕೆಳಗೆ ಶಿವಲಿಂಗವಿದೆ ಎಂದು ನಾವು ನಂಬುತ್ತೇವೆ. ಅಲ್ಲಿಯೂ ಉತ್ಖನನ ನಡೆಸಬೇಕು" ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

"ಬುಲ್ಡೋಜರ್‌ಗಳಿಂದ ಅಮಾಯಕರ ಮನೆಗಳನ್ನು ಅಕ್ರಮವಾಗಿ ಕೆಡವಲಾಗುತ್ತಿದೆ" ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಆರೋಪಿಸಿದ್ದಾರೆ.

"ಇದು ಅಭಿವೃದ್ಧಿಯಲ್ಲ ಆದರೆ ವಿನಾಶ. ಮುಖ್ಯಮಂತ್ರಿಯ ಕೈಯಲ್ಲಿ ಅಭಿವೃದ್ಧಿಯ ರೇಖೆಯಿಲ್ಲ, ವಿನಾಶದ ಗೆರೆ ಇದೆ" ಎಂದು ಯಾದವ್ ಟೀಕಾ ಪ್ರಹಾರ ನಡೆಸಿದ್ದಾರೆ.

ಅಖಿಲೇಶ್ ಯಾದವ್ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ವಕ್ತಾರ ರಾಕೇಶ್ ತ್ರಿಪಾಠಿ, ಸಂಭಾಲ್‌ನಲ್ಲಿ ಉತ್ಖನನ ನಡೆದರೆ ಅವರಿಗೇನು ಸಮಸ್ಯೆ? ಎಂದು ಪ್ರಶ್ನಿಸಿದ್ದಾರೆ.

"2013 ರಲ್ಲಿ, ಅಖಿಲೇಶ್ ಯಾದವ್ 1,000 ಟನ್ ಚಿನ್ನವನ್ನು ಅಗೆಯಲು ಇಡೀ ರಾಜ್ಯದ ಆಡಳಿತ ಯಂತ್ರವನ್ನು ಬಳಸಿದರು, ಅವರು ಚಿನ್ನವನ್ನು ಉತ್ಖನನ ಮಾಡಲು ಸಿದ್ಧರಾಗಿದ್ದಾರೆ, ಆದರೆ 'ಶಿವಲಿಂಗ'ದ ಉತ್ಖನನದ ಬಗ್ಗೆ ಅವರಿಗೆ ಸಮಸ್ಯೆ ಇದೆ. ಅದಕ್ಕಾಗಿಯೇ ಅವರು ಮುಖ್ಯಮಂತ್ರಿ ನಿವಾಸವನ್ನು ಉತ್ಖನನದ ಬಗ್ಗೆ ಮಾತನಾಡುತ್ತಿದ್ದಾರೆ."ತ್ರಿಪಾಠಿ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದರು.

ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ ಸಮಾಜವಾದಿ ಪಕ್ಷಕ್ಕೆ "ನಾಚಿಕೆಯಿಲ್ಲ" ಎಂದು ಕಟುವಾಗಿ ಟೀಕಿಸಿದ್ದಾರೆ. "ವೋಟ್ ಬ್ಯಾಂಕ್‌ ಗಾಗಿ 'ಶಿವಲಿಂಗವನ್ನು ಅಪಹಾಸ್ಯ ಮಾಡುತ್ತಿದ್ದಾರೆ"ಎಂದು ಅವರು ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು