LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಸಿಎಂ ವಿರುದ್ಧ ಪಿತೂರಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಆಕ್ರೋಶ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ಬಿಜೆಪಿಯವರು ಪಿತೂರಿ ನಡೆಸಿಅವರನ್ನು ಅಧಿಕಾರದಿಂದ ಕೆಳಗಿಳಿಸಲು ಸಂಚು ನಡೆಸುತ್ತಿವೆ ಎಂದು ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಆರೋಪಿಸಿದೆ.ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಪ್ರಧಾನ ಸಂಚಾಲಕ ಕೆ.ಎಂ. ರಾಮಚಂದ್ರಪ್ಪ, ಬಿಜೆಪಿ ಮತ್ತು ಜೆಡಿಎಸ್ ಎರಡೂ ಪಕ್ಷದ ನಾಯಕರು ಅಧಿಕಾರ ಕಳೆದುಕೊಂಡು ವಿಲಿವಿಲಿ ಒದ್ದಾಡ್ತಿದ್ದಾರೆ.

ಹೇಗಾದ್ರೂ ಮಾಡಿ ಸಿದ್ದರಾಮಯ್ಯ ಅಧಿಕಾರದಲ್ಲಿ ಮುಂದುವರಿಬಾರದು ಅಂತ ಕೇಂದ್ರ ಸರ್ಕಾರದ ಸಹಯೋಗದಲ್ಲಿ ಹೀಗೆ ಮಾಡ್ತಿದ್ದಾರೆ ಎಂದು ಆರೋಪಿಸಿದ್ದಾರೆ.ಇವರ ಹಿನ್ನೆಲೆ ನೋಡಿದರೆ ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಸಿಎಂ ಜೈಲಿಗೆ ಹೋಗಿ ಬಂದಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಪ್ರಚಾರದ ಗೀಳಿಗಾಗಿ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಆಡಳಿತಕ್ಕೆ ಕಳಂಕ ಬರುವ ರೀತಿ ನಡೆದುಕೊಳ್ಳುತ್ತಿದ್ದಾರೆ.

ನಿಮಗಿಂತ ಮುಂಚಿತವಾಗಿಯೇ ನಾವು ಪಾದಯಾತ್ರೆಗೆ ಪ್ರತಿರೋಧ ಮಾಡುತ್ತೇವೆ. ಶೋಷಿತ ಸಮುದಾಯದ ಒಬ್ಬ ಮುಖ್ಯಮಂತ್ರಿ ಕೆಳಗಿಳಿಸಲು ಯತ್ನ ನಡೆಸಿದ್ದಾರೆ ಎಂದು ದೂರಿದರು.ಈ ಹಿಂದೆ ಇದೇ ಜನ ದೇವರಾಜ ಅರಸುಗೂ ಕಾಟ ಕೊಟ್ಟಿದ್ದರು. ಬಂಗಾರಪ್ಪರನ್ನು ಬಿಟ್ಟಿಲ್ಲ, ಮೇಲ್ಜಾತಿಯವರು ವೀರಪ್ಪ ಮೊಯ್ಲಿಗೂ ಬಿಟ್ಟಿಲ್ಲ ಮ್ಯಾನ್ ಹ್ಯಾಂಡಲಿಂಗ್ ಮಾಡಿದ್ದಾರೆ ಎಂದು ಕಿಡಿಕಾರಿದ ಅವರು, ಶಾಸಕ ರನ್ನು ಹೈಜಾಕ್ ಮಾಡಿಯೇ ಕುಮಾರಸ್ವಾಮಿ ಅಧಿಕಾರಕ್ಕೆ ಬಂದಿದ್ದು ಎಂದು ಗುಡುಗಿದ್ದಾರೆ.

ಜೆಡಿಎಸ್ ಅಧಿಕಾರದ ಹತ್ರಕ್ಕೇ ಹೋಗಿಲ್ಲ ಎಂದ ಅವರು, ಇದೇ ರೀತಿ ಮುಂದುವರಿದರೆ ರಾಜ್ಯದಲ್ಲಿ ದಂಗೆ ಏಳಬೇಕಾಗುತ್ತದೆಕಳಂಕ ತರುವ ಹುನ್ನಾರ ಆದರೆ ರಾಜ್ಯದಲ್ಲಿ ದಂಗೆ ಏಳುತ್ತದೆ ಎಂಬ ಎಚ್ಚರಿಕೆ ನೀಡಿದರು.ಕೇಂದ್ರ ಸರ್ಕಾರದ ವಿರುದ್ದವೂ ದಂಗೆ ಏಳಬೇಕಾಗುತ್ತದೆ ಎಂಬ ಖಡಕ್ ಸೂಚನೆ ನೀಡಿದ ರಾಮಚಂದ್ರಪ್ಪ, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗ್ತಾರೆ ಎಂಬ ಕಾರಣಕ್ಕೆ ಶೋಷಿತ ವರ್ಗ ಕಾಂಗ್ರೆಸ್ ಬೆಂಬಲಿಸಿದೆ. ಸಿದ್ದರಾಮಯ್ಯಗೆ ಕಳಂಕ ತರುವ ಪ್ರಯತ್ನ ನಡೆದರೆ ನಾವು ಸುಮ್ಮನೆ ಇರುವುದಿಲ್ಲ ಎಂದಿದ್ದಾರೆ.

ಒಕ್ಕೂಟದ ಮಾವಳ್ಳಿ ಶಂಕರ್ ಮಾತನಾಡಿ, ಉದ್ದೇಶಪೂರ್ವಕವಾಗಿ ಸಿದ್ದರಾಮಯ್ಯ ಹೆಸರಿಗೆ ಕಳಂಕ ತರುವ ಕೆಲಸ ಬಿಜೆಪಿ ಮಾಡುತ್ತಿದೆ. ಸಿದ್ದರಾಮಯ್ಯ ಕಳಂಕ ರಹಿತರು. ಆದರೆ ರಾಜಕೀಯ ದುರುದ್ದೇಶದಿಂದ ಆರೋಪ ಮಾಡಲಾಗುತ್ತಿದೆ. ಮೂಡಾತ್ಮರು ಬಿಜೆಪಿಯವರು ರಾಜಕೀಯ ಹಿತಾಸಕ್ತಿ ಕಾಪಾಡಿಕೊಳ್ಳಲು ಹೀಗೆ ಆರೋಪ ಮಾಡ್ತಿದ್ದಾರೆ.ಬಿಜೆಪಿ ಯನ್ನು ಜನರು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ. ತಳ ಸಮುದಾಯದ ನಾಯಕತ್ವ ಇದ್ದಾಗ ಬಲಿಷ್ಟ ಜಾತಿಗಳು ಇಂಥ ಕೆಲಸ ಮಾಡ್ತಾರೆ. ಶೋಷಿತ ಸಮುದಾಯ ಇದನ್ನು ತೀವ್ರವಾಗಿ ಖಂಡಿಸುತ್ತದೆ.

ಇವರ ಮೇಲಿನ ಆರೋಪ ಗಳನ್ನೂ ಕೂಡ ನಾವು ಬಯಲಿಗೆ ಎಳೆಯುತ್ತೇವೆ. ಕೇತಗಾನಹಳ್ಳಿ ಜಮೀನು ವಂಚನೆಗೆ ಸಂಬಂಧಿಸಿ ನಾವು ಕುಮಾರಸ್ವಾಮಿ ಯವರ ದಾಖಲೆ ಬಿಡುಗಡೆ ಮಾಡ್ತೇವೆ.ಎಲ್ಲಿ ಜಾತಿ ಜನಗಣತಿ ಹೊರಗಡೆ ಬರುತ್ತದೆ ತಮ್ಮ ಅಧಿಕಾರಕ್ಕೆ ಕುತ್ತು ಬರುತ್ತದೆ ಎಂಬ ಕಾರಣಕ್ಕೆ ತಳ ಸಮುದಾಯದ ನಾಯಕನಿಗೆ ಕಪ್ಪು ಚುಕ್ಕೆ ಬರುವಂತೆ ಮಾಡಲಾಗುತ್ತಿದೆ. ನಾವೂ ಕೂಡ ರಾಜಕೀಯವಾಗಿ ಉತ್ತರ ಕೊಡಬೇಕಾಗುತ್ತದೆ. ನಾವೂ ಕೂಡ ಬೀದಿ ಹೋರಾಟ ಮಾಡುವುದಕ್ಕೆ ಸಿದ್ದರಿದ್ದೇವೆ ಎಂದ ಅವರು, ಕುಮಾರಸ್ವಾಮಿ ಗೆ ನೈತಿಕತೆ ಇದ್ದರೆ ಕೇತಗಾನಹಳ್ಳಿ ಯಲ್ಲಿ ದಲಿತರ ಜಮೀನು ವಂಚಿಸಿ ಪಡೆದುಕೊಂಡಿದ್ದಾರೆ ಅದನ್ನು ಹಿಂತಿರುಗಿಸಲಿ ಎಂದು ಆಗ್ರಹಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು