LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Belagavi

ಸಿದ್ದರಾಮಯ್ಯ ಹೃದಯಹೀನರಾಗಿ ವರ್ತಿಸಿದ್ದಾರೆ: ಮುಂದಿನ ಚುನಾವಣೆಯಲ್ಲಿ ತಕ್ಕ ಶಿಕ್ಷೆ ಆಗಲಿದೆ; ಜಯ ಮೃತ್ಯುಂಜಯ ಸ್ವಾಮೀಜಿ

ಬೆಳಗಾವಿ: ನಮ್ಮ ಬೇಡಿಕೆ ಸಂವಿಧಾನ ಬದ್ಧವಾಗಿದೆ. ಹೋರಾಟದ ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ‌. ಇದನ್ನು ನಾವು ಸಹಿಸುವುದಿಲ್ಲ. ಮೀಸಲಾತಿ ಪಡೆದೇ ತೀರುತ್ತೇವೆ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠಾಧಿಪತಿ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ನಡೆದ ಲಾಠಿಚಾರ್ಜ್‌ ಖಂಡಿಸಿ, ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಮೇಲೆ ಗುರುವಾರ ಧರಣಿ ನಡೆಸಿದ ಬಳಿಕ ಅವರು ಮಾತನಾಡಿದ ಅವರು, ಈಗ ಇವರು ಕೊಡದಿದ್ದರೇನಂತೆ ಮುಂದೆ ಇನ್ನೊಬ್ಬ ಸಿಎಂ ಬರ್ತಾರೆ. ಅವರಿಂದಾನೇ ನಾವು ಮೀಸಲಾತಿ ಪಡೆಯುತ್ತೇವೆ. ಸಂವಿಧಾನಬದ್ಧವಾಗಿ ನಮ್ಮ ಬೇಡಿಕೆ ಇದೆ. ಅಂಬೇಡ್ಕರ್​ ಇವರದಷ್ಟೇ ಸ್ವತ್ತಲ್ಲ. ಅಂಬೇಡ್ಕರ್​ ನಮಗೂ ಅನ್ವಯ ಆಗುತ್ತಾರೆ. ನಮ್ಮ ಹೋರಾಟ ನಿಲ್ಲದು ಎಂದು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಲಿಂಗಾಯತರ ವಿರುದ್ಧ ಸಿದ್ದರಾಮಯ್ಯ ಹೃದಯಹೀನರಾಗಿ ನಡೆದುಕೊಂಡಿದ್ದಾರೆ. ನೀವು ಅಧಿಕಾರಕ್ಕೆ ಬರಲು ನಾವು ಆಶೀರ್ವಾದ ಮಾಡಿದ್ದೇವು. ಅದಕ್ಕೆ ಪ್ರತಿಯಾಗಿ ನಮ್ಮನ್ನೇ ಹೊಡೆದಿದ್ದೀರಿ. ಮುಂದಿನ ಚುನಾವಣೆಯಲ್ಲಿ ಇದರ ಪರಿಣಾಮ ಎದುರಿಸುತ್ತೀರಿ ಎಂದು ಎಚ್ಚರಿಸಿದರು. ಲಾಠಿಚಾರ್ಜ್‌ ನಡೆಸಿದಾಗ ನಮ್ಮ ಸಮಾಜದ ಒಬ್ಬ ಶಾಸಕರು ಮುಖ್ಯಮಂತ್ರಿ ಬಳಿ ಹೋಗಿ ಪರಿಪರಿಯಾಗಿ ಬೇಡಿಕೊಂಡಿದ್ದಾರೆ. ಲಾಠಿಚಾರ್ಜ್‌ ನಿಲ್ಲಿಸಿ ಎಂದು ಕೇಳಿದ್ದಾರೆ. ಏಯ್‌ ಹೊಡೀಲಿ ಬಿಡರಿ ಅವರನ್ನು. ಅವರು ನಮ್ಮನ್ನೇ ಹೆದರಿಸುತ್ತಾರೆಯೇ? ನಮ್ಮ ಬಳಿಯೂ ಲಾಠಿ ಇದೆ ಎಂದು ಸಿದ್ದರಾಮಯ್ಯ ಮಾರುತ್ತರ ನೀಡಿದ್ದಾರೆ. ಈ ವಿಷಯವನ್ನು ಶಾಸಕರೇ ಬಂದು ನನಗೆ ಹೇಳಿದ್ದಾರೆ. ಸುವರ್ಣ ವಿಧಾನಸೌಧದ ಸಿಸಿಟಿವಿ ಕ್ಯಾಮೆರಾಗಳನ್ನು ತಪಾಸಣೆ ಮಾಡಿ ಖಾತ್ರಿ ಮಾಡಿಕೊಳ್ಳಬಹುದು ಎಂದರು.

ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದಾಗ ನಾವೆಲ್ಲ ನಿಮ್ಮ ತಲೆ ಮೇಲೆ ಹೂವು ಹಾಕಿ ಆಶೀರ್ವಾದ ಮಾಡಿದ್ದೇವು. ಆದರೆ, ಲಿಂಗಾಯತರ ಬಗ್ಗೆ ನಿಜವಾಗಿಯೂ ನಿಮ್ಮ ಧೋರಣೆ ಏನು ಎಂಬುದನ್ನು ಈಗ ತೋರಿಸಿದ್ದೀರಿ. 2028ಕ್ಕೆ ನಮ್ಮ ಸಮಾಜಕ್ಕೆ ಗೌರವ ಕೊಡುವ ಮುಖ್ಯಮಂತ್ರಿಯನ್ನೇ ನಾವು ಆರಿಸುತ್ತೇವೆ ಎಂದೂ ಸ್ವಾಮೀಜಿ ಎಚ್ಚರಿಸಿದರು. ನಿಮ್ಮ ಸರ್ಕಾರ ಇರುವವರೆಗೂ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೊಡುವುದೇ ಇಲ್ಲ ಎಂಬುದನ್ನಾದರೂ ಸ್ಪಷ್ಟಪಡಿಸಬೇಕು. ನಂತರ ನಮ್ಮ ದಾರಿ ನಾವು ಕಂಡುಕೊಳ್ಳುತ್ತೇವೆ. ತಕ್ಷಣವೇ ಎಲ್ಲರ ಮೇಲಿನ ಪ್ರಕರಣ ಹಿಂಪಡೆಯಬೇಕು. ಬಹಿರಂಗವಾಗಿ ಸಮಾಜದ ಕ್ಷಮೆ ಕೇಳಬೇಕು. ಅಲ್ಲಿಯವರೆಗೂ ರಾಜ್ಯದಾದ್ಯಂತ ಹೋರಾಟ ನಿಲ್ಲುವುದಿಲ್ಲ ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು