LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸಿದ್ಧಿ ಸಾಧನೆಗಳ ಕೂಡಲಸಂಗಮ: ಡಾ.ಎಂ.ರುಕ್ಮಾಂಗದ ನಾಯ್ಡು

ಬೆಂಗಳೂರು: ಯೋಗ ಯೂನಿವರ್ಸಿಟಿ ಆಫ್ ದಿ ಅಮೆರಿಕಾಸ್ ಮತ್ತು ಸ್ನೇಹಕೂಟ ಸಾಂಸ್ಕೃತಿಕ ವೇದಿಕೆ ನಗರದ ಜೆಸಿ ರಸ್ತೆಯ ನಯನ ಸಭಾಂಗಣದಲ್ಲಿ ಆಯೋಜಿಸಿದ್ದ ಶ್ರೀಕೃಷ್ಣ ಸಮೂಹ ವಿದ್ಯಾಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷರಾದ ಡಾ. ಎಂ.ರುಕ್ಮಾಂಗದ ನಾಯ್ಡು ಅಭಿನಂದನ ಸಮಾರಂಭದಲ್ಲಿ ಅಭಿನಂದನಾ ನುಡಿಗಳನ್ನಾಡಿದ ಖ್ಯಾತ ಹರಿದಾಸ ವಿದ್ವಾಂಸ ವಿದ್ಯಾವಾಚಸ್ಪತಿ ಡಾ. ಅರಳುಮಲ್ಲಿಗೆ ಪಾರ್ಥಸಾರಥಿ ರವರು ಶಿಕ್ಷಣ ತಜ್ಞ,

ಸಾಹಿತ್ಯ ಸಂಸ್ಕೃತಿ ಪ್ರೇಮಿ ಡಾ.ರುಕ್ಮಾಂಗದ ನಾಯ್ಡು ರವರು ನೆರೆಯ ಆಂಧ್ರ ಮೂಲದವರಾದರೂ ಕೂಡ ಬೆಂಗಳೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಶ್ರೀ ಕೃಷ್ಣ ಸಮೂಹ ವಿದ್ಯಾ ಸಂಸ್ಥೆಗಳನ್ನು ನಿರ್ಮಿಸುವುದರ ಮೂಲಕ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕ ವಾತಾವರಣವನ್ನು ನಿರ್ಮಿಸಿ ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ತರ ಕ್ರಾಂತಿಯನ್ನೇ ಮಾಡಿದ್ದಾರೆ.

75 ವಸಂತಗಳನ್ನು ಪೂರೈಸಿದ ಈ ಶುಭ ಸಂದರ್ಭದಲ್ಲಿ ಐದು ದಶಕಗಳಿಂದ ಶಿಕ್ಷಣ ರಂಗಕ್ಕೆ ಸಲ್ಲಿಸಿದ ಅಪೂರ್ವ ಕೊಡುಗೆ ಮುಂದಿನ ಪೀಳಿಗೆಯವರಿಗೆ ಮಾದರಿ ಎನಿಸಿದೆ. ಧಾರ್ಮಿಕ ಶ್ರದ್ಧಾಳುವಾಗಿ ಶ್ರೀ ಕೃಷ್ಣನ ಅನನ್ಯ ಭಕ್ತರಾಗಿ, ಸಂಸ್ಕೃತಿ -ಸಾಹಿತ್ಯಗಳ ಪೋಷಕರಾಗಿ ಸೇವೆ ಸಲ್ಲಿಸುತ್ತಿರುವ ಶ್ರೀಯುತರು ಸಿದ್ದಿ ಸಾಧನೆಗಳ ಕೂಡಲಸಂಗಮವಾಗಿದ್ದಾರೆ ಎಂದು ಅಭಿಪ್ರಾಯ ಪಟ್ಟರು .

ಸಮಾರಂಭದಲ್ಲಿ ಸ್ನೇಹಕೂಟ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷ ಡಾ. ಆರ್ ವಾದಿರಾಜರವರು ಆಶಯ ನುಡಿಯಲ್ಲಿ ನಾಯ್ಡು ರವರ ಅಸೀಮ ಕನ್ನಡ ಪ್ರೇಮ,ನಾಡು ನುಡಿಯ ಸೇವೆಗೆ ಕಂಕಣಬದ್ಧರಾಗಿ ಹಲವಾರು ಸಾಮಾಜಿಕ ಸೇವಾ ಕೈoಕರ್ಯ ಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಅಪರೂಪದ ಸಾಧಕ ಎಂದು ಹೇಳಿದರು.

ಡಾ.ಎಂ. ಆರ್.ನಾಯ್ಡು ಹಾಗೂ ಧರ್ಮಪತ್ನಿ ಶ್ರೀಮತಿ ಜಲಜಮ್ಮದಂಪತಿಗಳನ್ನು ಪೇಟ, ಸ್ಮರಣಿಕೆ, ಶಾಲು, ಫಲ- ತಾಂಬೂಲಗಳಿಂದ ಆತ್ಮೀಯವಾಗಿ ಸತ್ಕರಿಸಲಾಯಿತು.ವೇದಿಕೆಯಲ್ಲಿ ಶ್ರೀಕೃಷ್ಣ ಸಮೂಹ ವಿದ್ಯಾಸಂಸ್ಥೆಗಳ ನಿರ್ದೇಶಕ ಪ್ರೊ.ಮನೋಹರ್ ಎಸ್ ಪಿ, ಯೋಗ ಯೂನಿವರ್ಸಿಟಿ ಆಫ್ ದಿ ಅಮೆರಿಕಾಸ್ ಕುಲಸಚಿವ ರವಿ ಪಿ.ಎಸ್, ಡಾ.ಚೌಡಯ್ಯ,ಶ್ರೀಮತಿ ಜಯಶೀಲ ,ಡಿ ಮುರಳಿದರ,ಡಾ. ಗುರುರಾಜ ಪೋಶೆಟ್ಟಿಹಳ್ಳಿ ಉಪಸ್ಥಿತರಿದ್ದರು.ಕಾರ್ಯಕ್ರಮದ ಆರಂಭದಲ್ಲಿ ಕವಿಗೋಷ್ಠಿಯನ್ನು ಆಯೋಜಿಸಲಾಗಿತ್ತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು