LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಸಿಪಿವೈ ಕೈ ಸೇರ್ಪಡೆ ಮಾಹಿತಿಯಿಲ್ಲ; ಪರಂ

ಬೆಂಗಳೂರು: ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿಜೆಪಿಯ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಬಗ್ಗೆ ತಮಗೆ ಮಾಹಿತಿಯಿಲ್ಲ ಎಂದು ಗೃಹಸಚಿವ ಕಾಂಗ್ರೆಸ್ ಹಿರಿಯ ಮುಖಂಡ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿ ನಡೆಯಲಿರುವ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆಲ್ಲೋದಕ್ಕೆ ರಣನೀತಿ ರೂಪಿಸುತ್ತಿದ್ದೇವೆ. ವಿಶೇಷವಾಗಿ ಸಿಪಿ ಯೋಗೇಶ್ವರ್ ಬಗ್ಗೆ ನನಗೇನೂ ಗೊತ್ತಿಲ್ಲ. ಯೋಗೇಶ್ವರ್ ಕಾಂಗ್ರೆಸ್ ಗೆ ಬರೋ ವಿಚಾರ ಏನಿದ್ರೂ ಹೈಕಮಾಂಡ್ ನೋಡಿಕೊಳ್ಳುತ್ತೆ. ಸಿಪಿ ಯೋಗೇಶ್ವರ್ ನನಗೆ ಆತ್ಮೀಯ ಸ್ನೇಹಿತರು.

ಬಹಳ ಒಳ್ಳೆಯ ಕೆಲಸ ಮಾಡಿದ್ದಾರೆ. ಬಿಜೆಪಿಗೆ ರಾಜೀನಾಮೆ ಕೊಟ್ಟು ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತಾರೆ ಎನ್ನುವ ವಿಚಾರವಿದೆ. ಒಂದು ವೇಳೆ ಕಾಂಗ್ರೆಸಿಗೆ ಬಂದು ಸ್ಪರ್ಧೆ ಮಾಡೋದಾದ್ರೆ ಆ ತೀರ್ಮಾನ ಏನಿದ್ರು ಹೈಕಮಾಂಡ್ ಮಾಡುತ್ತೆ ಎಂದರು.ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಡಿ. ಕೆ.ಸುರೇಶ್ ಸ್ಪರ್ಧೆ ವಿಚಾರಕ್ಕೆ ಸಂಬಂಧಪಟ್ಟಂತೆ, ನಾವು ನಿಲ್ಲಿ ಅಂತಾ ಹೇಳುತ್ತಿದ್ದೇವೆ ಆದರೆ, ಅದರ ಅಂತಿಮ ನಿರ್ಧಾರವನ್ನು ಕೂಡ ಹೈಕಮಾಂಡ್ ನೋಡಿಕೊಳ್ಳುತ್ತೆ ಎಂದಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು