LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಸಿ.ಟಿ ರವಿ ಬಂಧನ ಪ್ರಕರಣದಲ್ಲಿ ಪೊಲೀಸರ ವರ್ತನೆ ಖಂಡಿಸಿ ಕಾನೂನು ಹೋರಾಟ

ಹುಬ್ಬಳ್ಳಿ: ಬಿಜೆಪಿ ಎಂಎಲ್​​ಸಿ ಸಿ.ಟಿ. ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಪೊಲೀಸ್​​​ ಅಧಿಕಾರಿಗಳ ವರ್ತನೆಯನ್ನು ನಾವು ಖಂಡಿಸುತ್ತೇವೆ. ಈ ಬಗ್ಗೆ ನಾವು ಕಾನೂನು ಹೋರಾಟ ಮಾಡುತ್ತೇವೆ. ಸರ್ಕಾರ ಒಂದೇ ಇರುವುದಿಲ್ಲ, ಬದಲಾಗುತ್ತಿರುತ್ತದೆ ಎಂಬುದು ನೆನಪಿರಲಿ. ಹೀಗಾಗಿ, ಬೆಳಗಾವಿ ಪೊಲೀಸ್ ಕಮಿಷನರ್​​​​ ಎಚ್ಚರಿಕೆಯಿಂದ ಇರಬೇಕು ಎಂದು ಟೀಕಿಸಿದ್ದಾರೆ.

ಖಾನಾಪುರ, ಕಬ್ಬಿನ ಗದ್ದೆ ಕಡೆ ಕರೆದುಕೊಂಡು ಹೋಗುತ್ತೀರಿ. ಬೆಳಗಾವಿ ಪೊಲೀಸ್ ಕಮಿಷನರ್​ ಬಾಲಿಶ ಹೇಳಿಕೆ ನೀಡುತ್ತಿದ್ದಾರೆ. ಸುವರ್ಣಸೌಧಕ್ಕೆ ನುಗ್ಗಿದವರ ಬಂಧನ ಆಗಿಲ್ಲ. ಬೆಳಗಾವಿ ಪೊಲೀಸ್ ಕಮಿಷನರ್​ಗೆ ಕಾನೂನಿನ ಪಾಠ ಆಗಬೇಕು. ಸುವರ್ಣಸೌಧದಲ್ಲಿ ನಡೆದ ಘಟನೆ ಬಗ್ಗೆ ತರಾತುರಿಯಲ್ಲಿ ಎಫ್​ಐಆರ್​ ದಾಖಲಿಸಲಾಗಿದೆ. ದೂರು ಕೊಟ್ಟವರು ಆಪ್ತ ಸಹಾಯಕ, ಅವರು ಒಳಗಡೆ ಇದ್ದರಾ? ಬೆಳಗಾವಿ ಪೊಲೀಸ್​ ಕಮಿಷನರ್​ಗೆ ಸಾಮಾನ್ಯ ಜ್ಞಾನ ಇರಬೇಕು. ಬೆಳಗಾವಿ ಕಮಿಷನರ್​​ ಐಪಿಎಸ್​ ಆಗಲು ಅಸಮರ್ಥರು​​​​ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ ನೀಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST