LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸುಲಿಗೆ ಪ್ರಕರಣ: AAP ಶಾಸಕ ನರೇಶ್ ಬಲ್ಯಾನ್ 2 ದಿನ ಪೊಲೀಸ್ ಕಸ್ಟಡಿಗೆ!

ಎಎಪಿ ಶಾಸಕ ನರೇಶ್ ಬಲ್ಯಾನ್ ಅವರನ್ನು ನ್ಯಾಯಾಲಯ 2 ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ. ಕಳೆದ ವರ್ಷ ದಾಖಲಾದ ಸುಲಿಗೆ ಪ್ರಕರಣದಲ್ಲಿ ಶನಿವಾರ ಅವರನ್ನು ಬಂಧಿಸಲಾಗಿತ್ತು. ಭಾನುವಾರ ದೆಹಲಿಯ ರೂಸ್ ಅವೆನ್ಯೂ ಕೋರ್ಟ್‌ಗೆ ನರೇಶ್ ಬಲ್ಯಾನ್‌ನನ್ನು ಹಾಜರುಪಡಿಸಿದ ಪೊಲೀಸರು, ನ್ಯಾಯಾಲಯ 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಆದೇಶಿಸಿದೆ.

ನ್ಯಾಯಾಲಯದಿಂದ ಕರೆತರುವ ವೇಳೆ ಬಲ್ಯಾನ್ ಸುದ್ದಿಗಾರರೊಂದಿಗೆ ಮಾತನಾಡಿ, ದೆಹಲಿಯಲ್ಲಿ ಚುನಾವಣೆ ಇದೆ. ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಈ ರೀತಿ ಮಾಡುತ್ತಿದೆ ಎಂದು ಆರೋಪಿಸಿದರು. ಇನ್ನು ಬಲ್ಯಾನ್ ಬಂಧನ ಕುರಿತಂತೆ ಪ್ರತಿಕ್ರಿಯಿಸಿರುವ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ನರೇಶ್ ಅವರನ್ನು ಬಂಧಿಸುವ ಮೂಲಕ ಕೇಂದ್ರ ಸರ್ಕಾರ ದರೋಡೆಕೋರರ ವಿರುದ್ಧ ಧ್ವನಿ ಎತ್ತಿದರೆ ಜೈಲಿಗೆ ಕಳುಹಿಸುತ್ತದೆ ಎಂಬ ಸಂದೇಶವನ್ನು ದೆಹಲಿಯ ಜನತೆಗೆ ನೀಡಿದೆ ಎಂದರು.

ಕಪಿಲ್ ಸಾಂಗ್ವಾನ್ ವಿರುದ್ಧ ಬಲ್ಯಾನ್ ದೆಹಲಿ ಪೊಲೀಸರಿಗೆ ಹತ್ತಾರು ದೂರುಗಳನ್ನು ನೀಡಿದ್ದು, ಹೀಗಾಗಿ ಅವರನ್ನು ಬಂಧಿಸಲಾಗಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಎಎಪಿ ಕೇಂದ್ರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೇಜ್ರಿವಾಲ್ ಅವರು, ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಈ ವಿಷಯವನ್ನು ಪ್ರಸ್ತಾಪಿಸುತ್ತಲೇ ಬಂದಿದ್ದೇವೆ ಎಂದರು.

ಬಲ್ಯಾನ್ ಸುಲಿಗೆ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ವಿದೇಶದಲ್ಲಿ ನೆಲೆಸಿರುವ ನರೇಶ್ ಬಲ್ಯಾನ್ ಮತ್ತು ದರೋಡೆಕೋರ ಕಪಿಲ್ ಸಾಂಗ್ವಾನ್ ನಡುವಿನ ಸಂಭಾಷಣೆಯ ಆಡಿಯೊ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅದರಲ್ಲಿ ಉದ್ಯಮಿಗಳಿಂದ ಸುಲಿಗೆ ಉಲ್ಲೇಖವಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದೆ. ದೆಹಲಿಯ ಉತ್ತಮ್ ನಗರ ವಿಧಾನಸಭಾ ಕ್ಷೇತ್ರದ ಶಾಸಕ ನರೇಶ್ ಬಲ್ಯಾನ್ ಅವರನ್ನು ಶನಿವಾರ ಆರ್‌ಕೆ ಪುರಂ ಕ್ರೈಂ ಬ್ರಾಂಚ್ ಕಚೇರಿಯಲ್ಲಿ ವಿಚಾರಣೆಗೆ ಕರೆಯಲಾಗಿತ್ತು. ತದ ನಂತರ ಪೊಲೀಸರು ಅವರನ್ನು ಬಂಧಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು