LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸೆಂಟ್ ಜೋಸೆಫ್ ವಿವಿಯಲ್ಲಿ ವಿದ್ಯಾರ್ಥಿಗಳ ಜೊತೆಗೆ ಸಂವಾದ ಸತ್ಯದ ಅನ್ವೇಷಣೆಯೇ ಮೂಲ ಮಂತ್ರವಾಗಬೇಕು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಶಿವಾನಂದ ತಗಡೂರು

ಬೆಂಗಳೂರು: ಸತ್ಯದ ಅನ್ವೇಷಣೆಯೇ ಪತ್ರಿಕೋದ್ಯಮದ ಮೂಲ ಮಂತ್ರ. ಸತ್ಯಕ್ಕೆ ಹತ್ತಿರವಾದ ಸುದ್ದಿಗಳನ್ನು ಮಾಡುವ ಮೂಲಕ ಪತ್ರಿಕೋದ್ಯಮದ ವಿಶ್ವಾಸರ್ಹತೆಯನ್ನು ಉಳಿಸಿಕೊಳ್ಳಬೇಕಾಗಿದೆ ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಕರೆ ನೀಡಿದರು.

ಬೆಂಗಳೂರಿನ ಸೆಂಟ್ ಜೋಸೆಫ್ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ವಿಭಾಗದಿಂದ ಏರ್ಪಡಿಸಿದ್ದ ವಿದ್ಯಾರ್ಥಿಗಳ ಜೊತೆಗಿನ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಹಾತ್ಮಗಾಂಧಿ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಕೂಡ ಪತ್ರಕರ್ತರಾಗಿದ್ದು ಈ ದೇಶದಲ್ಲಿ ಆದರ್ಶದ ಬೀಜಗಳನ್ನು ಬಿತ್ತಿದ್ದಾರೆ. ಆ ಬೆಳಕಲ್ಲಿ ನಡೆಯುವ ಬದ್ದತೆಯನ್ನು ನಾವು ತೋರಿಸಬೇಕಾಗಿದೆ ಎಂದರು. 1843ರಲ್ಲಿ ಹರ್ಮನ್ ಮೊಗ್ಲಿನ್ ಮಂಗಳೂರಿನಲ್ಲಿ ಪ್ರಾರಂಭಿಸಿದ ಮಂಗಳೂರು ಸಮಾಚಾರ ಪತ್ರಿಕೆಯೇ ಕನ್ನಡದ ಮೊಟ್ಟ ಮೊದಲ ಪತ್ರಿಕೆ.

ಅಂದಿನಿಂದ ಈ ತನಕ ಪತ್ರಿಕೋದ್ಯಮ ನಾನಾ ಮಗ್ಗುಲುಗಳನ್ನು ಬದಲಿಸಿದೆ. ಕಳೆದ ಎರಡು ದಶಕಗಳಲ್ಲಿ ಮಾಧ್ಯಮ ಕ್ಷೇತ್ರ ಕ್ರಾಂತಿಕಾರಿ ಬದಲಾವಣೆ ಹೊಂದಿದೆ. ಆದರೆ, ವಿಶ್ವಾಸರ್ಹತೆ ಎನ್ನುವುದು ಕಡಿಮೆ ಆಗುತ್ತಿರುವುದು ಆತಂಕದ ಸಂಗತಿ ಎಂದರು.ಕಲಿಕೆಯ ಉತ್ಸಾಹದ ಜೊತೆಗೆ ಸುದ್ದಿಯನ್ನು ಪರಾಮರ್ಶೆ ಮಾಡಿ ನೋಡುವ ವ್ಯವದಾನ ಕೂಡ ಇರಬೇಕು. ಈ ನಿಟ್ಟಿನಲ್ಲಿ ಪತ್ರಿಕೋದ್ಯಮ ವೃತ್ತಿಯನ್ನು ಒಂದು ದೀಕ್ಷೆ ಎಂದು ಪರಿಭಾವಿಸಿ ಕೆಲಸ ಮಾಡಿದರೆ ಮತ್ತಷ್ಟು ವಿಶ್ವಾಸರ್ಹತೆಯನ್ನು ತಂದುಕೊಳ್ಳಲು ಸಾಧ್ಯವಿದೆ ಎಂದರು.

ಟಿವಿ5 ಸಂಪಾದಕ ರಮಾಕಾಂತ್ ಮಾತನಾಡಿ, ಯುವ ಪತ್ರಕರ್ತರು ಧಾವಂತದಲ್ಲಿ ಸುದ್ದಿಮನೆಗೆ ಬರುತ್ತಿದ್ದಾರೆ. ಅವರು ಇನ್ನಷ್ಟು ಅಧ್ಯಯನಶೀಲರಾಗುವುದು ಅತ್ಯಗತ್ಯವಾಗಿದೆ. ಭಾಷೆ, ವ್ಯಾಕರಣ ಬಳಕೆ ಬಗ್ಗೆಯೂ ಹೆಚ್ಚಿನ ಆದ್ಯತೆ ನೀಡಬೇಕು ಎಂದರು. ಬೆಂಗಳೂರಿನ ಸೆಂಟ್ ಜೋಸ್ ವಿಶ್ವವಿದ್ಯಾನಿಲಯದ ಉಪ ಕುಲಪತಿ ಡಾ.ರಜಿನಾ ಮಥಾಯಿಸ್ ಅಧ್ಯಕ್ಷತೆ ವಹಿಸಿದ್ದರು. ರಿಜಿಸ್ಟಾರ್ ಮೆಲ್ವಿನ್ ಕೊಲಾಸ್ ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು