LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಸೋರಿಕೆ ಪತ್ತೆ ಹಚ್ಚಿ, 2024-25 ಅಂತ್ಯದೊಳಗೆ ತೆರಿಗೆ ಸಂಗ್ರಹ ಗುರಿ ತಲುಪಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಜಿಎಸ್'ಟಿ ಸಂಗ್ರಹ ಸೇರಿ ಇನ್ನಿತರ ರಾಜಸ್ವ ಸಂಗ್ರಹದಲ್ಲಿ ಏರಿಕೆ ಕಂಡಿದ್ದು, ಆದರೂ ತೆರಿಗೆ ಸೋರಿಕೆ ಪತ್ತೆ ಹಚ್ಚಿ ಅದಕ್ಕೆ ಪರಿಹಾರ ಕಂಡುಕೊಂಡು 2024-25ರ ಅಂತ್ಯದೊಳಗೆ ತೆರಿಗೆ ಸಂಗ್ರಹ ಗುರಿ ತಲುಪುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಮಂಗಳವಾರ ಸೂಚನೆ ನೀಡಿದರು.

ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ವಾಣಿಜ್ಯ ತೆರಿಗೆ ಇಲಾಖೆ, ಅಬಕಾರಿ ಇಲಾಖೆ, ಮುದ್ರಾಂಕ ಮತ್ತು ನೋಂದಣಿ ಇಲಾಖೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಗಳ ತೆರಿಗೆ ಸಂಗ್ರಹದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆದಾಯ ಸಂಗ್ರಹಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಾಣಿಜ್ಯ ತೆರಿಗೆ ಇಲಾಖೆಯಿಂದ 2024 ನವೆಂಬರ್‌ ಅಂತ್ಯದವರೆಗಿನ ಒಟ್ಟು ವಾಣಿಜ್ಯ ತೆರಿಗೆ ಸಂಗ್ರಹಣೆ ಗುರಿ 56,317 ಕೋಟಿ ರೂ.ಇದ್ದು ಇದುವರೆಗೆ ರೂ.53,103 ಕೋಟಿ ತೆರಿಗೆ ಸಂಗ್ರಹ ಮಾಡಲಾಗಿದ್ದು, ಶೇ.94 ರಷ್ಟು ಸಾಧನೆ ಮಾಡಲಾಗಿದೆ. 2024-25 ಹಣಕಾಸು ಸಾಲಿನ ಒಟ್ಟು ವಾಣಿಜ್ಯ ತೆರಿಗೆ ಸಂಗ್ರಹ ಗುರಿ ರೂ. 84475 ಕೋಟಿ ಇದೆ. ಮಲೆನಾಡು ಮತ್ತು ಮೈಸೂರು ವಿಭಾಗದಲ್ಲಿ ತೆರಿಗೆ ಸಂಗ್ರಹ ನಿಗದಿತ ಗುರಿಗಿಂತ ಕಡಿಮೆಯಿದೆ. ಎಲ್ಲಾ ವಿಭಾಗಗಳು ಮುಂದಿನ ನಾಲ್ಕು ತಿಂಗಳಲ್ಲಿ ಗುರಿಯನ್ನು ಕಡ್ಡಾಯವಾಗಿ ಸಾಧಿಸಬೇಕು ಎಂದು ಸೂಚನೆ ನೀಡಿದರು.

2023-24 ರ ಒಟ್ಟು ತೆರಿಗೆ ಸಂಗ್ರಹಣೆ 70,575 ಕೋಟಿ ರೂ. ಇತ್ತು. ವಿಜಿಲೆನ್ಸ್‌ ಹೆಚ್ಚಿಸಿ, ತೆರಿಗೆ ಸೋರಿಕೆಯನ್ನು ಪತ್ತೆ ಹಚ್ಚಿ ತೆರಿಗೆ ಸಂಗ್ರಹವನ್ನು ಹೆಚ್ಚಿಸಬೇಕು. ಬೆಂಗಳೂರು ವಿಭಾಗದಲ್ಲಿ ಹೆಚ್ಚಿನ ನಿಗಾ ವಹಿಸಬೇಕು. ವಿಶೇಷ ಅಭಿಯಾನ ಕೈಗೊಂಡು ಮುಂದಿನ 4 ತಿಂಗಳ ಅವಧಿಯಲ್ಲಿ ತೆರಿಗೆ ಸಂಗ್ರಹವನ್ನು ಹೆಚ್ಚಿಸಿ ಶೇ.100ರಷ್ಟು ಬಜೆಟ್‌ ಗುರಿಯನ್ನು ಸಾಧಿಸಬೇಕು. ಜಿಎಸ್‌ಟಿ ಸಂಗ್ರಹವನ್ನು ಹೆಚ್ಚಿಸಬೇಕು. ಲೆಕ್ಕಪರಿಶೋಧನೆ ಮತ್ತು ನ್ಯಾಯನಿರ್ಣಯದಿಂದ ಪ್ರಸ್ತುತ ಹಣಕಾಸು ಸಾಲಿನಲ್ಲಿ ರೂ.4671 ಕೋಟಿ ತೆರಿಗೆ ಸಂಗ್ರಹ ಗುರಿಯಿದ್ದು, ನವೆಂಬರ್‌ ಅಂತ್ಯದವರೆಗೆ ರೂ.3,076.86 ಕೋಟಿ ತೆರಿಗೆ ಸಂಗ್ರಹಿಸಲಾಗಿದೆ.

ಸರಕು ಮತ್ತು ಸೇವಾ ತೆರಿಗೆ ಕಾಯ್ದೆಯಡಿಯಲ್ಲಿ ಸ್ವೀಕರಿಸಿದ ಮನವಿಗಳನ್ನು ವಿಲೇವಾರಿ ಮಾಡಿ ತೆರಿಗೆ ಸಂಗ್ರಹ ಕೈಗೊಳ್ಳಬೇಕು. ರಾಜ್ಯ ಜಿಎಸ್‌ಟಿ ಸಂಗ್ರಹದಲ್ಲಿ ಶೇಕಡಾ 15ರ ಬೆಳವಣಿಗೆ ದರ ಸಾಧಿಸಿದೆ. ರಾಜ್ಯದಲ್ಲಿ ನವೆಂಬರ್‌ ಅಂತ್ಯದವರೆಗೆ ರೂ.13,722 ಕೋಟಿ ಜಿಎಸ್‌ಟಿ ಸಂಗ್ರಹಿಸಲಾಗಿದ್ದು, ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ ಎಂದು ತಿಳಿಸಿದರು.

ನೋಂದಣಿ ಮತ್ತು ಮುದ್ರಾಂಕ ಇಲಾಖೆಯು 2024-25 ನೇ ಸಾಲಿನಲ್ಲಿ ರೂ.26 ಸಾವಿರ ಕೋಟಿ ಗುರಿ ನಿಗದಿಪಡಿಸಿದ್ದು, ನವೆಂಬರ್‌ ಕೊನೆಯವರೆಗೆ ರೂ.15,160.97 ಕೋಟಿ ರಾಜಸ್ವ ಸಂಗ್ರಹಿಸಲಾಗಿದ್ದು, ಶೇ.58ರಷ್ಟು ಪ್ರಗತಿ ಸಾಧಿಸಲಾಗಿದೆ. ರಾಜಸ್ವ ಸೋರಿಕೆಯನ್ನು ತಡೆಗಟ್ಟಿ, ರಾಜಸ್ವ ಸಂಗ್ರಹವನ್ನು ಹೆಚ್ಚಿಸಬೇಕು. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.21ರಷ್ಟು ಬೆಳವಣಿಗೆ ದರ ಸಾಧಿಸಲಾಗಿದೆ. ಕಾನೂನು ಬಾಹಿರ ನೋಂದಣಿಗಳಿಗೆ ಕಡಿವಾಣ ಹಾಕಿ, ರಾಜಸ್ವ ಸಂಗ್ರಹವನ್ನು ವ್ಯವಸ್ಥಿತಗೊಳಿಸಬೇಕು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು