LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

"ಹರಿದಾಸರ ದಿನಚರಿ" ಚಲನಚಿತ್ರಕ್ಕೆ ಸೆನ್ಸಾರ್

ಭಾರತೀಯ ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಶ್ರೀಮಂತಿಕೆಯನ್ನ ಬೆಳ್ಳಿತೆರೆಗೆ ತರುವ ಉದ್ದೇಶದಿಂದ, ಕರಿಗಿರಿ ಫಿಲ್ಮ್ಸ್ "ಹರಿದಾಸರ ದಿನಚರಿ" ಚಿತ್ರವನ್ನು ನಿರ್ಮಿಸಿದೆ.ಸುಮಾರು ಒಂದೂವರೆ ಗಂಟೆಗಳಲ್ಲಿ ಶ್ರೀ ಪುರಂದರ ದಾಸರ ಒಂದು ದಿನದ ಜೀವನ ಯಾನವನ್ನು ಸಾಂಕೇತಿಕವಾಗಿ ತೆರೆದಿಡುವ ಮೂಲಕ ಸಮಗ್ರ ಭಾರತೀಯ ಆಧ್ಯಾತ್ಮಿಕ ಪ್ರಪಂಚದ ಚಟುವಟಿಕೆಗೆ ಕನ್ನಡಿ ಹಿಡಿಯುವ ಹರಿದಾಸರ ದಿನಚರಿ ಚಿತ್ರಕ್ಕೆ ಸೆನ್ಸಾರ್ ಯು ಸರ್ಟಿಫಿಕೇಟ್ ನೀಡಿದೆ. ಈ ಚಿತ್ರ 15 ನೇ ಶತಮಾನದ ದಾಸ ಶ್ರೇಷ್ಠ ಶ್ರೀ ಪುರಂದರ ದಾಸರ ದೈನಂದಿನ ಜೀವನದ ಮನೋಹರ ದೃಶ್ಯಗಳನ್ನು ಒಳಗೊಂಡಿದೆ.

"ಹರಿದಾಸರ ದಿನಚರಿ" ಜೀವನಚರಿತ್ರೆಯ ಚಿತ್ರವಲ್ಲ; ಇದು ಪ್ರೇಕ್ಷಕರನ್ನು ಆಳವಾದ ಭಕ್ತಿ ಮತ್ತು ಕಲಾತ್ಮಕ ಅಭಿವ್ಯಕ್ತಿಯ ಯುಗಕ್ಕೆ ಕರೆದೊಯ್ಯುವ ಒಂದು ಅನುಭವ. ಪಾಂಡವಪುರ ಸಮೀಪದ ಕಾವೇರಿ ನದಿಯ ತೀರ ಕಲ್ಲು ಮಂಟಪಗಳು ಪ್ರಾಚೀನ ಶಿಲಾ ವೈಭವದ ದೇವಸ್ಥಾನಗಳಲ್ಲಿ ಚಿತ್ರದ ಚಿತ್ರೀಕರಣ ನಡೆದಿದ್ದು ಇಂತಹ ಚಿತ್ರ ಗಳು ಕೇವಲ ಚಿತ್ರಮಂದಿರಗಳಲ್ಲಿ ಮಾತ್ರವಲ್ಲ ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಕೂಡ ಪ್ರದರ್ಶಿತವಾಗಬೇಕು ಎಂದು ಸೆನ್ಸಾರ್ ಮಂಡಳಿ ಸದಸ್ಯರು ಅಭಿಪ್ರಾಯಿಸಿದ್ದಾರೆ.

ಹರಿದಾಸರ ದಿನಚರಿ ಚಿತ್ರದ ಕುರಿತು ವಿವಿಧ ಕ್ಷೇತ್ರದ ಗಣ್ಯರಿಗೆ ಪ್ರಾತ್ಯಕ್ಷಿಕೆ ನೀಡಲಾಯಿತು.ಚಿತ್ರದ ತುಣುಕುಗಳನ್ನು ವೀಕ್ಷಿಸಿದ ಬಳಿಕ ನಿರ್ದೇಶಕ ಗಿರೀಶ್ ಚಿತ್ರೀಕರಣದ ಹಲವು ಘಟ್ಟಗಳನ್ನು ವಿವರಿಸಿದರು.ಡಾ. ವಿದ್ಯಾಭೂಷಣ, ಡಾ ವೀಣಾ ಬನ್ನಂಜೆ, ನಿರುಪಮಾ ರಾಜೇಂದ್ರ, ಡಾ ಜಯಂತ ವ್ಯಾಸನಕೆರೆ ಮುಂತಾದವರು ಉಪಸ್ಥಿತರಿದ್ದರು.

ಅದ್ಭುತ ದೃಶ್ಯಗಳು ಮತ್ತು ಆತ್ಮಸ್ಪರ್ಶಿ ನಿರೂಪಣೆಯ ಮೂಲಕ, ಚಿತ್ರವು ಪುರಂದರ ದಾಸರು ತಮ್ಮ ದಿನಚರಿಯಲ್ಲಿ ಮುನ್ನಡೆಯುವುದನ್ನು, ಅವರ ಪ್ರಸಿದ್ಧ "ಜಗದೋದ್ಧಾರನ ಆಡಿಸಿದಳೆ ಯಶೋದೆ" ಹಾಡನ್ನು ರಚಿಸುವುದನ್ನು ಮತ್ತು ತಮ್ಮ ದೈನಂದಿನ ಆಚರಣೆಗಳಲ್ಲಿ ತೊಡಗುವುದನ್ನು ಅನುಸರಿಸುತ್ತದೆ ಎಂದು ಚಿತ್ರದ ನಿರ್ಮಾಪಕ ಹಾಗೂ ನಿರ್ದೇಶಕ ಗಿರೀಶ್ ತಿಳಿಸುತ್ತಾರೆ.

"ಹರಿದಾಸರ ದಿನಚರಿಚಿತ್ರದ ಟ್ರೈಲರ್ ಉಡುಪಿಯ ಶ್ರೀ ಕೃಷ್ಣ ಸನ್ನಿಧಿಯಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಉಭಯಶ್ರೀಪಾದರಾದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಮತ್ತು ಶ್ರೀ ಸುಶ್ರೀಂದ್ರ ತೀರ್ಥ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರಿಂದ ಬಿಡುಗಡೆ ಆಗಿತ್ತು.

ನಿರ್ದೇಶಕ ಗಿರೀಶ್ ನಾಗರಾಜ್ ಅವರು ಚಿತ್ರದ ಬಗ್ಗೆ ತಮ್ಮ ದೃಷ್ಟಿಕೋನವನ್ನು ಹಂಚಿಕೊಂಡಿದ್ದು' ಹರಿದಾಸರ ದಿನಚರಿ' ಮಹಾನ್ ಸಂತ-ಕವಿ ಶ್ರೀ ಪುರಂದರ ದಾಸರ ಜೀವನದ ಒಂದು ದಿನದ ಸಾರವನ್ನು ಸೆರೆಹಿಡಿಯುವ ಒಂದು ಪ್ರಯತ್ನ. ಕಲೆ ಮತ್ತು ಆಧ್ಯಾತ್ಮಿಕತೆಯನ್ನು ಮೆಚ್ಚುವ ಪ್ರೇಕ್ಷಕರೊಂದಿಗೆ ಇದು ಆಳವಾಗಿ ಪ್ರತಿಧ್ವನಿಸುತ್ತದೆ ಎಂದು ನಾವು ನಂಬುತ್ತೇವೆ."ಅನ್ನುತ್ತಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು