LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಹಿಂದುತ್ವಕ್ಕೆ ಮರಳಿದ 45 ಮುಸ್ಲಿಂ ಕುಟುಂಬ

ಹಾಪುರ: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ 150 ಜನರ 45 ಮುಸ್ಲಿಂ ಕುಟುಂಬಗಳು ಹಿಂದುತ್ವಕ್ಕೆ ಮರಳಿದ್ದು, ಗಂಗಾ ಆಚರಣೆಯ ಮೂಲಕ ಹಿಂದೂ ಧರ್ಮವನ್ನು ಸ್ವೀಕರಿಸಿವೆ.

ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 150 ವ್ಯಕ್ತಿಗಳನ್ನು ಒಳಗೊಂಡ 45 ಕುಟುಂಬಗಳು ಹಿಂದುತ್ವಕ್ಕೆ ಮರಳಿದ್ದು, ಗಂಗಾ ಆಚರಣೆಯ ಮೂಲಕ ಹಿಂದೂ ಧರ್ಮವನ್ನು ಸ್ವೀಕರಿಸಿದವು. ಕುಟುಂಬಗಳು ಹಿಂದೂ ವಿಧಿಗಳ ಪ್ರಕಾರ ಮೃತ ವೃದ್ಧ ಸದಸ್ಯರ ಅಂತ್ಯಕ್ರಿಯೆಯನ್ನು ನಡೆಸಿ, ಚಿತಾಭಸ್ಮವನ್ನು ಗಂಗಾ ನದಿಯಲ್ಲಿ ವಿಸರ್ಜಿಸಿದರು.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸದಸ್ಯರೊಬ್ಬರು, 'ನಮ್ಮ ಪೂರ್ವಜರು ಮೂಲತಃ ಮೊಘಲ್ ದಬ್ಬಾಳಿಕೆಯಲ್ಲಿ ಇಸ್ಲಾಂಗೆ ಮತಾಂತರಗೊಂಡ ಹಿಂದೂಗಳಾಗಿದ್ದರು ಎಂದು ಅವರು ಬಹಿರಂಗಪಡಿಸಿದರು. ಮಾತ್ರವಲ್ಲದೇ ಹಿಂದೂ ಧರ್ಮಕ್ಕೆ ಮರಳುವುದನ್ನು ತಮ್ಮ ಪೂರ್ವಜರ ಪರಂಪರೆಯ ನೆರವೇರಿಕೆ ಎಂದು ಕರೆದಿದ್ದಾರೆ.

ಪ್ರತಿರೋಧ ಮತ್ತು ಪರಿಶ್ರಮ

ಕುಟುಂಬಗಳು ಮೂಲತಃ ಪಾಕಿಸ್ತಾನದ ಇಸ್ಲಾಮಾಬಾದ್‌ನಿಂದ ಬಂದವರಾಗಿದ್ದು, ಭಾರತ ಪಾಕಿಸ್ತಾನ ವಿಭಜನೆಯ ನಂತರ ಅವರು 1947 ರಲ್ಲಿ ದೆಹಲಿಗೆ ಬಂದು ನೆಲೆಸಿದ್ದರು. ನಾಲ್ಕು ವರ್ಷಗಳ ಹಿಂದೆಯೇ, ಅವರು ಹಿಂದೂ ಧರ್ಮವನ್ನು ಸ್ವೀಕರಿಸಲು ನಿರ್ಧರಿಸಿದ್ದರು.

ಆದಾಗ್ಯೂ, ಅವರು ತಮ್ಮ ಸಮುದಾಯದಿಂದ ಗಮನಾರ್ಹ ವಿರೋಧ ಎದುರಾದ ಹಿನ್ನಲೆಯಲ್ಲಿ 'ಘರ್ ವಾಪ್ಸಿ' ವಿಳಂಬವಾಯಿತು. ಇತ್ತೀಚೆಗೆ ಹಿರಿಯ ಕುಟುಂಬ ಸದಸ್ಯರೊಬ್ಬರು ನಿಧನರಾದ ಕಾರಣ ಹಿಂದೂ ಧರ್ಮವನ್ನು ಸ್ವೀಕರಿಸುವ ನಿರ್ಧಾರವನ್ನು ಮುಂದುವರಿಸಲು ಸ್ಫೂರ್ತಿ ಸಿಕ್ಕಿತು. ಇದೀಗ ಹಿಂದೂ ಧರ್ಮ ಸ್ವೀಕರಿಸಿ ಬ್ರಿಜ್‌ಘಾಟ್‌ನಲ್ಲಿ ಅಗತ್ಯವಾದ ವಿಧಿವಿಧಾನಗಳನ್ನು ನೆರವೇರಿಸಿದ್ದೇವೆ ಎಂದು ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು