LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಹೊಡೆಬಡಿ ಬ್ಯಾಟಿಂಗಿನಿಂದಲೂ ಮಿಂಚಿದ ವೇಗಿ ಶಮಿ !

ಮೊಣಕಾಲು ನೋವಿನಿಂದ ಗುಣಮುಖರಾಗಿರುವ ವೇಗಿ ಮೊಹಮ್ಮದ್ ಶಮಿ ರಣಜಿ ಬಳಿಕ ಇದೀಗ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಪಂದ್ಯಾವಳಿಯಲ್ಲೂ ತಮ್ಮ ಉತ್ತಮ ಪ್ರದರ್ಶನ ಮುಂದುವರಿಸಿದ್ದಾರೆ. ಆದರೆ ಅವರೀಗ ಸುದ್ದಿಯಾಗಿರುವುದು ತಮ್ಮ ಸ್ಫೋಟಕ ಬ್ಯಾಟಿಂಗ್ ನಿಂದ!ಹೌದು ಬಂಗಾಳ ಮತ್ತು ಚಂಡೀಗಢಗಳ ನಡುವೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಪ್ರಿಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಅವರು ತ್ವರಿತ ಗತಿಯಲ್ಲಿ ರನ್ ಬಾರಿಸಿರುವುದು ಇದೀಗ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದೆ.

10ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಬಂದ ಮೊಹಮ್ಮದ್ ಶಮಿ ಅವರು ಕೇವಲ 17 ಎಸೆತಗಳಲ್ಲಿ 32 ರನ್ ಬಾರಿಸಿರುವುದು ಇದೀಗ ಹೊಸ
ಇತಿಹಾಸ ಸೃಷ್ಟಿಗೆ ಕಾರಣವಾಗಿದೆ.ನಾಟೌಟ್ ಆಗಿರುವವರಲ್ಲಿ ಫಸ್ಟ್: ಈ ಹಿಂದೆ 2019ರಲ್ಲಿ ಒಡಿಶಾದ ರಾಜೇಶ್ ಮೊಹಾಂತಿ ಅವರು ಚತ್ತೀಸ್ ಗಢದ ವಿರುದ್ಧ 36 ರನ್ ಗಳಿಸಿ ಔಟಾಗಿದ್ದರು.

ಇದು ಹತ್ತನೇ ಕ್ರಮಾಂಕದಲ್ಲಿ ಬ್ಯಾಟರ್ ಒಬ್ಬ ಗಳಿಸಿರುವ ಅತ್ಯಧಿಕ ರನ್ ಗಳಾವೆ. ಆದರೆ ಅದರಲ್ಲಿ ಮೊಹಾಂತಿ ಅವರು ಔಟಾಗಿದ್ದರು. ಹೀಗೆ ಗಣನೆಗೆ ತೆಗೆದುಕೊಂಡರೆ ಶಮಿ ಅವರದ್ದು 10ನೇ ಕ್ರಮಾಂಕದ ಬ್ಯಾಟರ್ ಹೊಡೆದಿರುವ 2ನೇ ಅತ್ಯಧಿಕ ರನ್ ಆಗಿದೆ. ನಾಟೌಟ್ ಆಗಿ ಉಳಿದವರಲ್ಲಿ ಮಾತ್ರ ಶಮಿ ಅವರದ್ದೇ ಅತ್ಯಧಿಕ ರನ್. ಇನ್ನುಳಿದಂತೆ ಸೌರಾಷ್ಟ್ರದ ಶೌರ್ಯ ಸನಾದಿಯಾ (30), ಧರ್ಮೇಂದ್ರ ಸಿಂಗ್ ಅನಿರುದ್ಧ್ ಸಿಂಗ್ ಜಡೇಜಾ(29), ಕ್ಷೇಮಲ್ ಮಕರಂದ್(28) ಅವರು ನಂತರದ ಸ್ಥಾನಗಳಲ್ಲಿದ್ದಾರೆ.

ಟಿ20 ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಬಂಗಾಳ ತಂಡ 16ನೇ ಓವರ್ ನಲ್ಲಿ 114 ರನ್ ಗಳಿಗೆ 8 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿ ಸಿಲುಕಿತ್ತುಯ ಆಗ ಕ್ರೀಸಿಗೆ ಆಗಮಿಸಿದ ಶಮಿ ಅವರು ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದರು.ಕೇವಲ 17 ಎಸೆತಗಳನ್ನು ಎದುರಿಸಿದ ಅವರು 188.24 ಸ್ಚ್ರೈಕ್ ರೇಟ್ ನಲ್ಲಿ 32 ರನ್ ಗಳಿಸಿ ನಾಟೌಟ್ ಆಗಿ ಉಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು