LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಹೊಸ ವರ್ಷ ಆಚರಣೆ ಹಿನ್ನೆಲೆ ಗೃಹಸಚಿವರಿಂದ ಅಧಿಕಾರಿಗಳ ಸಭೆ

ಬೆಂಗಳೂರು: ಹೊಸ ವರ್ಷ ಆಚರಣೆ ಮತ್ತು ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಗೃಹ ಸಚಿವ ಡಾಕ್ಟರ್ ಜಿ ಪರಮೇಶ್ವರ್ ರವರು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಇಂದು ಮಧ್ಯಾಹ್ನ 2 ಗಂಟೆಗೆಬೆಂಗಳೂರು ನಗರದ ಎಸಿಪಿ ಮತ್ತು ಮೇಲ್ಪಟ್ಟ ಅಧಿಕಾರಿಗಳ ಸಭೆಯನ್ನು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆಸಲಿದ್ದಾರೆ.

ಇಂದುಸಂಜೆ ದಿನ ಪತ್ರಿಕೆಯ ಜೊತೆ ಮಾತನಾಡಿ ನಗರ ಪೊಲೀಸ್ ಆಯುಕ್ತ ದಯಾನಂದ್ ರವರು ಮಾಹಿತಿ ನೀಡಿದರು.ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಮತ್ತು ನಗರ ಪೊಲೀಸ್ ಆಯುಕ್ತ ದಯಾನಂದ್ ಸೇರಿದಂತೆ ಬೆಂಗಳೂರು ನಗರದ ಎಲ್ಲಾ ಎಸಿಪಿ, ಡಿಸಿಪಿ, ಅಡಿಷನಲ್ ಕಮಿಷನರ್ ಮತ್ತು ಜಾಯಿಂಟ್ ಕಮಿಷನರ್ ಸಂಚಾರ ರವರುಗಳನ್ನು ಉದ್ದೇಶಿಸಿ ಗೃಹಸಚಿವರು ಭಾಷಣ ಮಾಡಲಿದ್ದಾರೆ.

ಮೊದಲು ಅಧಿಕಾರಿಗಳಿಂದ ಮಾಹಿತಿ ಪಡೆದು ಹೊಸ ವರ್ಷ ಆಚರಣೆಯಲ್ಲಿ ಮಾದಕ ವಸ್ತುಗಳನ್ನು ಕೂಟಗಳಲ್ಲಿ ಸೇವಿಸುವುದರ ಬಗ್ಗೆ ನಿಗಾ ವಹಿಸುವುದು, ಮಾರಾಟ ಮಾಡುವುದು ಮತ್ತು ಪತ್ತೆ ಹಚ್ಚುವ ಬಗ್ಗೆ ಸಭೆ ನಡೆಸಲಿದ್ದಾರೆ.ಇದಲ್ಲದೆ ಮಹಿಳೆ ಮತ್ತು ಮಕ್ಕಳ ಮೇಲೆ ಯಾವುದೇ ರೀತಿಯ ದೌರ್ಜನ್ಯವೆಸಗದಂತೆ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಹೆಚ್ಚಿನ ನಿಗಾ ವಹಿಸುವುದು.

ಇತ್ತೀಚೆಗೆ ಕೇಂದ್ರ ಅಪರಾಧ ವಿಭಾಗದ ಪೊಲೀಸರು 24 ಕೋಟಿ ರೂ. ಬೆಲೆ ಬಾಳುವ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿರುವ ಬಗ್ಗೆ ಮಾಹಿತಿ ಪಡೆದುಕೊಂಡು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ನಗರ ಪೊಲೀಸ್ ಆಯುಕ್ತರ ಮಟ್ಟದಲ್ಲಿ ಪತ್ತೆ ಹಚ್ಚುವ ಬಗ್ಗೆಯೂ ಸಹ ವಿಚಾರ ವಿನಿಮಯ ಮಾಡಲಿದ್ದಾರೆ.
ಡಿಸೆಂಬರ್ 31ರ ರಾತ್ರಿ ಬೆಂಗಳೂರು ನಗರದ ಪ್ರಮುಖ ರಸ್ತೆಗಳಾದ ಎಂ ಜಿ ರಸ್ತೆ, ಬಾನಸ್ವಾಡಿ, ಇಂದಿರಾ ನಗರ, ಅಶೋಕನಗರ ಸೇರಿದಂತೆ ಸುಮಾರು 110 ಪೊಲೀಸ್ ಠಾಣ ವ್ಯಾಪ್ತಿಗಳಲ್ಲಿ ವಿಶೇಷ ಬಂದೋಬಸ್ತ್ ಹೇಗೆ ಮಾಡಬೇಕೆಂದು ಚರ್ಚಿಸಲಿದ್ದಾರೆ.

ಕೂಟಗಳನ್ನು ಆಯೋಜಿಸುವವರ ನಿಖರ ಮಾಹಿತಿಯನ್ನು ಪಡೆದು ಯಾವುದೇ ಕಾರಣಕ್ಕೂ ಡ್ರಗ್ಸ್ ಮಾರಾಟ ಮಾಡಬಾರದೆಂದು ಪೊಲೀಸರಿಗೆ ಗೃಹ ಸಚಿವ ಡಾಕ್ಟರ್ ಜಿ ಪರಮೇಶ್ವರ್ ರವರು ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ. ಇದಲ್ಲದೆ 31ರಂದು ರಾತ್ರಿ 10 ರಿಂದ ಬೆಳಿಗ್ಗೆ ನಾಲಕ್ಕು ಗಂಟೆಗೆ ತನಕ ಎಲ್ಲಾ ಮೇಲ್ ಸೇತುವೆ ರಸ್ತೆಗಳನ್ನು ಮುಚ್ಚಬೇಕೆಂದು ಸಹ ಆದೇಶ ನೀಡಲಿದ್ದಾರೆ.

ಅಂದು ವಿಶೇಷವಾಗಿ ದ್ವಿಚಕ್ರವಾಹನಗಳಲ್ಲಿ ವ್ಹೀಲಿಂಗ್ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಬೇಕು ಮತ್ತು ಯಾವುದೇ ಕಾರಣಕ್ಕೂ ಅಪಘಾತ ಸಂಭವಿಸಿ ಮೃತ ರಾಗಬಾರದೆಂದು ಸೂಚನೆ ನೀಡಲಿದ್ದಾರೆ. ಮತ್ತು ಇದೇ ಸಂದರ್ಭದಲ್ಲಿ ಸಿಸಿಟಿವಿ ಕ್ಯಾಮೆರಾಗಳ ಕಾರ್ಯಕ್ಷಮತೆ ಬಗ್ಗೆ ಸಹ ಚರ್ಚೆ ನಡೆಸಲಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು