LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಹೋಟೆಲ್, ಬೇಕರಿ ಉದ್ಯಮಿಗಳ ಮೇಲೆ ಹೆಚ್ಚಿದ ಅಪರಾಧ ಕೃತ್ಯ ಕರ್ನಾಟಕ ರಾಜ್ಯ ಹೋಟೆಲ್ ಗಳ ಸಂಘದಿಂದ ಕಳವಳ ವ್ಯಕ್ತ

ಬೆಂಗಳೂರು: ರಾಜ್ಯದೆಲ್ಲೆಡೆ ಹೋಟೆಲ್ ಹಾಗೂ ಬೇಕರಿ ಉದ್ಯಮಿಗಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಕೊಲೆ, ಹಲ್ಲೆ ಮತ್ತಿತರ ಅಪರಾಧಿ ಕೃತ್ಯಗಳ ಬಗ್ಗೆ ಕರ್ನಾಟಕ ರಾಜ್ಯ ಹೋಟೆಲ್ ಗಳ ಸಂಘ ಕಳವಳ ವ್ಯಕ್ತಪಡಿಸಿದೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಸಂಘದ ಅಧ್ಯಕ್ಷ ಜಿ ಕೆ ಶೆಟ್ಟಿ ಅವರು, ಇಂತಹ ಅಪರಾಧಿ ಕೃತ್ಯಗಳನ್ನು ತಡೆಗಟ್ಟಲು ರಾಜ್ಯ ಸರಕಾರ ಹಾಗೂ ಪೊಲೀಸ್ ಇಲಾಖೆ ತಕ್ಷಣ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಮಂಡ್ಯ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಕೆಆರ್‌ಎಸ್ ಪೊಲೀಸ್ ಠಾಣೆಯ ಕೂಗಳತೆಯ ದೂರದಲ್ಲಿ ಬೇಕರಿ ಮಾಲೀಕ ಚೇತನ್ ಅವರನ್ನು ಇತ್ತೀಚಿಗೆ ಹಾಡುಹಗಲೇ ರೌಡಿಗಳ ಗುಂಪೊಂದು ಮಾರಕಾಸ್ತ್ರಗಳಿಂದ ಇರಿದು ಕೊಲೆ ಮಾಡಿರುವ ಘಟನೆ ಹೋಟೆಲ್ ಮಾಲೀಕರಲ್ಲಿ ಭೀತಿಯ ವಾತಾವರಣ ಸೃಷ್ಟಿಸಿದೆ.

ಮಾಧ್ಯಮಗಳಲ್ಲಿ ವರದಿಯಾಗುತ್ತಿರುವಂತೆ ಹೋಟೆಲ್ ಮತ್ತು ಬೇಕರಿ ಮಾಲೀಕರು ಹಫ್ತಾ ವಸೂಲಿಗೆ ಸುಲಭ ಬಲಿಪಶುಗಳಾಗುತ್ತಿದ್ದಾರೆ. ಒಂದೊಮ್ಮೆ ಹಫ್ತಾ ನೀಡದಿದ್ದರೆ ಅವರ ಮೇಲೆ ದೈಹಿಕ ಹಲ್ಲೆ, ಕೊಲೆ ಬೆದರಿಕೆ ಒಡ್ಡಲಾಗುತ್ತಿದೆ. ಕೊಲೆಯಂತಹ ಹೀನ ಕೃತ್ಯಗಳ ಮೂಲಕ ಹೋಟೆಲ್ ಮತ್ತು ಬೇಕರಿ ಮಾಲೀಕರಲ್ಲಿ ಭಯದ ವಾತಾವರಣ ಸೃಷ್ಟಿಸಲಾಗುತ್ತಿದೆ.

ಹೋಟೆಲ್ ಮತ್ತು ಬೇಕರಿ ಮಾಲೀಕರು ಸ್ಥಳೀಯ ಸಂಸ್ಥೆಗಳಿಗೆ, ರಾಜ್ಯ ಸರಕಾರಕ್ಕೆ, ಕೇಂದ್ರ ಸರಕಾರಕ್ಕೆ ಟ್ರೇಡ್ ಲೈಸೆನ್ಸ್, ಜಿಎಸ್‌ಟಿ ಹೀಗೆ ನಾನಾ ರೂಪದಲ್ಲಿ ಪ್ರತಿವರ್ಷ ಕೋಟ್ಯಂತರ ರೂಪಾಯಿ ತೆರಿಗೆ ಕಟ್ಟುತ್ತಿದ್ದಾರೆ. ಆ ಮೂಲಕ ದೇಶ ಕಟ್ಟುವ ಕಾಯಕದಲ್ಲಿ ತೊಡಗಿದ್ದಾರೆ. ಸ್ಥಳೀಯವಾಗಿ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ ಮೂಲಕ ದೇಶದ ಆರ್ಥಿಕತೆಗೆ ಮಹತ್ವದ ಕೊಡುಗೆ ನೀಡುತ್ತಿದ್ದಾರೆ. ಆದರೂ ಅವರ ಜೀವಕ್ಕೆ ರಕ್ಷಣೆ ಇಲ್ಲದಿರುವುದು ನೋವಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ಈ ಸಂಬಂಧ ಗೃಹ ಸಚಿವ ಡಾ. ಜಿ ಪರಮೇಶ್ವರ ಆವರಿಗೆ ಮನವಿ ಪತ್ರವನ್ನು ಸಲ್ಲಿಸಲಿದ್ದಾರೆ. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಖಚಿತಪಡಿಸಬೇಕೆಂದು ಆಗ್ರಹಿಸಿದ್ದಾರೆ.

ಇನ್ನು ಮುಂದೆ ಇಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಸಂಘದ ಎಲ್ಲಾ ಸದಸ್ಯರು ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಲಿದ್ದಾರೆ ಎಂದು ಎಚ್ಚರಿಸಿದ್ದಾರೆ. ಇದೇ ವೇಳೆ ಸಂತ್ರಸ್ತ ವ್ಯಕ್ತಿಗೆ ನೆರವಿಗೆ ಧಾವಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು