LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

100ನೇ ವರ್ಷದ ಹುಟ್ಟುಹಬ್ಬ ಆಚರಣೆ..! ಮಾನವ ಸೇವೆಯೇ ಮಾಧವ ಸೇವೆ: ನರಸಯ್ಯ

ನೆಲಮಂಗಲ: ಇತ್ತೀಚೆಗೆ ಕೂಡು ಕುಟುಂಬಗಳನ್ನ ಕಾಣುವುದು ತುಂಬಾ ಕಡಿಮೆಯಾಗಿದೆ. ಅದರಲ್ಲೂ ವಯಸ್ಸಾದವರನ್ನ ತಿರಸ್ಕಾರ ಮನೋಭಾವನೆಯಿಂದಲೇ ಕಾಣುತ್ತಾರೆ. ಆದರೆ ಇಲ್ಲೊಂದು ಕೂಡು ಕುಟುಂಬ ಇವತ್ತು ಒಟ್ಟಿಗೆ ಸೇರಿ ಶತಾಯುಷಿ ನರಸಯ್ಯ ರವರ ಹುಟ್ಟುಹಬ್ಬವನ್ನ ಸಂಭ್ರಮದಿಂದ ಆಚರಣೆ ಮಾಡಿದ್ದಾರೆ.

ನೆಲಮಂಗಲದ ಆರ್ ಆರ್ ರೆಸಾರ್ಟ್ ನಲ್ಲಿ ಶ್ರೀಯುತ ನರಸಯ್ಯ ರವರ 101ನೇ ವರ್ಷ ಹುಟ್ಟುಹಬ್ಬ ಆಚರಣೆ ಯನ್ನು ಮಕ್ಕಳು, ಮೊಮ್ಮಕ್ಕಳು, ಮರಿಮಕ್ಕಳು ಸೇರಿ ಸಂಭ್ರಮದಿಂದ ಆಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ನರಸಯ್ಯ ರವರ ಮಗಳು ಎನ್ ಜಲಜಾಕ್ಷಿ ಮಾತನಾಡಿ ನಮ್ಮ ತಂದೆಯವರು ತುಮಕೂರು ಜಿಲ್ಲೆಯ ಸಿರಾ ತಾಲೂಕಿನ ಮಾಯಸಂದ್ರ ಗ್ರಾಮದಲ್ಲಿ 1923ರಲ್ಲಿ ಜನಿಸಿದರು.

ಇವರು ಸರಕಾರಿ ಹುದ್ದೆಯಲ್ಲಿ ಹಲವು ಸೇವೆಗಳನ್ನು ಸಲ್ಲಿಸಿದ್ದು ರಾಷ್ಟ್ರಪಿತ ಮಹಾತ್ಮಗಾಂಧೀಜಿ ರವರನ್ನು ಭೇಟಿಯಾಗಿ ಅವರ ಆಶೀರ್ವಾದ ಪಡೆದಿದರು. ಹಾಗೂ ಭಗವಾನ್ ಸತ್ಯಸಾಯಿ ಬಾಬಾರವರ ಪರಮಭಕ್ತರಾಗಿದ್ದು ಅವರ ಅನುಗ್ರಹದಿಂದ ಮಾನವ ಸೇವೆಯೇ ಮಾಧವ ಸೇವೆ ಎಂದು ನೊಂದವರಿಗೆ ಬಡವರಿಗೆ ಸೇವೆ ಮಾಡುತ ಬಂದಿರುತ್ತಾರೆ. ಇವರಿಗೆ ಆರು ಜನ ಮಕ್ಕಳಿದ್ದು ಕೆಲವರು ಸರ್ಕಾರಿ ಸೇವೆಯಲ್ಲಿ ಉನ್ನತ ಹುದ್ದೆಯಲ್ಲಿದ್ದು ಸೇವೆ ಸಲ್ಲಿಸಿರುತ್ತಾರೆ.

ಒಬ್ಬ ವ್ಯಕ್ತಿ ಶತಾಯುಷ್ಯ ಕಾಣುವುದು ಎಂದರೆ ಸಾಮಾನ್ಯ ವಿಷಯವಲ್ಲ ಅವರ ವೈಯಕ್ತಿಕ ಶಿಸ್ತು ಸಮಯ ತಾಳ್ಮೆ ಸಹನೆ ಹಾಗೂ ಅವರ ಆಹಾರ ಅಭ್ಯಾಸಗಳೇ ಅವರ ಆರೋಗ್ಯವನ್ನು ಕಾಪಾಡುತ್ತಿದ್ದು ಇಂದು ನೂರು ವರ್ಷ ಪೂರೈಸಿ 101ನೇ ಹುಟ್ಟು ಹಬ್ಬವನ್ನ ಮಕ್ಕಳು, ಮೊಮ್ಮಕ್ಕಳು, ಮರಿಮಕ್ಕಳು ಸೇರಿ ಸಂಭ್ರಮದಿಂದ ಆಚರಣೆ ಮಾಡುತ್ತಿದ್ದೇವೆ ಎಂದರು.
ಇದೇ ಸಂದರ್ಭದಲ್ಲಿ ಹುಟ್ಟುಹಬ್ಬ ಆಚರಣೆಪ್ರಯುಕ್ತ ಸೀರೆ ಪಂಚೆ ಹಾಗೂ ಕಂಬಳಿಗಳು ಸೇರಿದಂತೆ ಹಲವು ಉಡುಗೊರೆಗಳನ್ನು ನೀಡಲಾಯಿತು. ಹಾಗೂ ಹಿರಿಯರಿಗೆ ಸನ್ಮಾನಿಸಿ ಊಟದ ವ್ಯವಸ್ಥೆ ಮಾಡಲಾಯಿತು. ಸ್ನೇಹಿತರು ಬಂಧು ಬಳಗದವರು ಸೇರಿ ಶ್ರೀಯುತರ ಆಶೀರ್ವಾದ ಪಡೆದು ಶುಭ ಹಾರೈಸಿದರು. ಈ ಕುಟುಂಬ ನೂರು ವರ್ಷ ಪೂರೈಸಿರುವ ನರಸಯ್ಯ ಅವರ ಹುಟ್ಟುಹಬ್ಬ ಸಂಭ್ರಮ ಆಚರಿಸಿ ಇತರರಿಗೂ ಮಾದರಿಯಾಗಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು