LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ದೊಡ್ಡಬಳ್ಳಾಪುರ ನಗರದ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಕಡಿವಾಣ 1220 ನಾಯಿಗಳಿಗೆ ಸಂತಾನ ಹರಣ ಶಸ್ತ್ರ ಚಿಕಿತ್ಸೆ

ದೊಡ್ಡಬಳ್ಳಾಪುರ: ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಒಂದು ತಿಂಗಳ ಅವಧಿಯಲ್ಲಿ 500ಕ್ಕೂ ಹೆಚ್ಚು ಜನರಿಗೆ ನಾಯಿಗಳು ಕಚ್ಚಿದ ಪ್ರಕರಣಗಳು ವರದಿಯಾಗಿತ್ತು, ಸಾರ್ವಜನಿಕರಿಂದ ಅಕ್ರೋಶ ವ್ಯಕ್ತವಾದ ಹಿನ್ನಲೆ ಬೀದಿನಾಯಿಗಳ ನಿಯಂತ್ರಣಕ್ಕೆ ನಗರಸಭೆ ಮುಂದಾಗಿದೆ.

ದೊಡ್ಡಬಳ್ಳಾಪುರ ನಗರದ ಯಾವುದೇ ಬೀದಿಗಳಲ್ಲಿ ನೋಡಿದರೂ ಹಿಂಡು ಹಿಂಡಾಗಿ ನಾಯಿಗಳು ಕಾಣಿಸುತ್ತವೆ, ಬೀದಿನಾಯಿಗಳ ಸಂತಾನ ಹರಣ ಶಸ್ತ್ರಚಿಕಿತ್ಸೆ ವಿಳಂಬವಾದ ಹಿನ್ನಲೆ ಬೀದಿನಾಯಿಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ, ಕಳೆದೊಂದು ತಿಂಗಳ ಅವಧಿಯಲ್ಲಿ ನಗರದಲ್ಲಿ 500ಕ್ಕೂ ಹೆಚ್ಚು ಜನರಿಗೆ ನಾಯಿ ಕಚ್ಚಿದ ಪ್ರಕರಣಗಳು ವರದಿಯಾಗಿದೆ,ಅತಿ ಹೆಚ್ಚು ಮಕ್ಕಳು ಸೇರಿದಂತೆ ವಯೋವೃದ್ಧರ ಮೇಲೆ ನಾಯಿಗಳು ದಾಳಿಮಾಡಿವೆ, ಬೀದಿ ನಾಯಿಗಳಿಗೆ ಕಡಿವಾಣ ಹಾಕದ ನಗರಸಭೆಯ ವಿರುದ್ಧ ಸಾರ್ವಜನಿಕರ ದೂರುಗಳು ಬಂದಿದ್ದವು ಹಾಗೂ ಆಕ್ರೋಶ ವ್ಯಕ್ತವಾಯಿತು.

ಇದೇ ಕಾರಣದಿಂದ ಸೂಕ್ತ ಕ್ರಮಕ್ಕೆ ನಗರಸಭೆ ಮುಂದಾಗಿದೆ ಎಂದು ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್ ಅವರು ಪ್ರತಿಕ್ರಿಯಿಸಿ ರೂ. 16 ಲಕ್ಷ ವೆಚ್ಚದಲ್ಲಿ 1220 ಬೀದಿನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಲು ಚಾಲನೆ ನೀಡಲಾಗಿದೆ ಎಂದರು.
ಬೀದಿನಾಯಿಗಳ ಸಂತಾನ ಹರಣ ಶಸ್ತ್ರಚಿಕಿತ್ಸೆಯ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದ ಪರಿಸರ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಈರಣ್ಣ ಬೀದಿನಾಯಿಗಳ ನಿಯಂತ್ರಣಕ್ಕಾಗಿ ನಗರಸಭೆಯಲ್ಲಿ ಶಸ್ತ್ರಚಿಕಿತ್ಸೆಗೆ 20 ಲಕ್ಷ ರೂಗಳನ್ನು ಮೀಸಲಿಡಲಾಗಿದೆ, ಕಳೆದ ವರ್ಷ ನಡೆದ ಕಾರ್ಯಚರಣೆ ಯಲ್ಲಿ 720 ನಾಯಿಗಳಿಗೆ ಸಂತಾನ ಹರಣ ಶಸ್ತ್ರಚಕಿತ್ಸೆ ಮಾಡಲಾಗಿತ್ತು, ಈ ಬಾರಿ ಗುತ್ತಿಗೆದಾರರ ಅಲಭ್ಯದ ಕಾರಣದಿಂದ ಕಾರ್ಯಚರಣೆ ವಿಳಂಬವಾಗಿದೆ.

ಬೆಳಗಾವಿಯ ಲೂನಾ ಎಂಟರ್ ಪ್ರೈಸಸ್ ನವರು ಬೀದಿ ನಾಯಿಗಳ ಶಸ್ತ್ರಚಕಿತ್ಸೆ ಮಾಡುವ ಗುತ್ತಿಗೆಯನ್ನು ಪಡೆದಿದ್ದಾರೆ, ಪ್ರತಿಯೊಂದು ನಾಯಿಗೆ 1300 ರೂಪಾಯಿ ನಿಗದಿ ಮಾಡಲಾಗಿದ್ದು, ಒಟ್ಟು 1220 ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆ ಮತ್ತು ರೇಬೀಸ್ ನಿರೋಧಕ ಚುಚ್ಚುಮದ್ದನ್ನು ನೀಡಲಾಗುವುದು ಎಂದರು.

ಪ್ರತಿದಿನ 40 ನಾಯಿಗಳಿಗೆ ಶಸ್ತ್ರಚಿಕಿತ್ಸೆ ಮಾಡಲಾಗುವುದು, ಶಸ್ತ್ರಚಿಕಿತ್ಸೆಯ ನಂತರ ಮೂರು ದಿನಗಳ ಆರೈಕೆಯ ನಂತರ, ಶಸ್ತ್ರ ಚಿಕಿತ್ಸೆಗೆ ಒಳಗಾದ ನಾಯಿಗಳ ಕಿವಿಯನ್ನು ವಿ ಆಕಾರದಲ್ಲಿ ಕತ್ತರಿಸಿ ಎಲ್ಲಿ ನಾಯಿಗಳನ್ನ ಹಿಡಿದು ತರಲಾಗಿತ್ತೋ ಅದೇ ಜಾಗಕ್ಕೆ ನಾಲ್ಕನೇ ದಿನ ಬಿಡಲಾಗುವುದು,ಬೀದಿ ನಾಯಿಗಳ ಕಾರ್ಯಚಾರಣೆಗೆ ಹೋದಾಗ ಜನರು ತಮ್ಮ ನಾಯಿಗಳನ್ನ ಮನೆಯಲ್ಲಿ ಕಟ್ಟಿಹಾಕಿಕೊಳ್ಳುತ್ತಾರೆ, ಇದರಿಂದ ಕಾರ್ಯಚರಣೆ ಕಷ್ಟವಾಗುತ್ತಿದೆ, ಬೀದಿ ನಾಯಿಗಳ ನಿಯಂತ್ರಣಕ್ಕೆ ಸಾರ್ವಜನಿಕರು ಸಹ ಸಹಕರಿಸುವಂತೆ ಮನವಿ ಮಾಡಿಕೊಂಡರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು