LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಜಪಾನ್ ತತ್ತರ 155 ಬಾರಿ ಭೂಕಂಪನ, 20 ಮಂದಿ ಸಾವು

ಖಟ್ಮಂಡು: ಜಪಾನ್‍ನಲ್ಲಿ ಒಂದೇ ದಿನ 155 ಭೂಕಂಪಗಳು ಸಂಭವಿಸಿದ್ದು, ಘಟನೆಯಲ್ಲಿ 20 ಮಂದಿ ಸಾವನ್ನಪ್ಪಿದ್ದು, ಹಲವು ಜನ ಕಟ್ಟಡದ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಹೊನ್ಶುವಿನ ಮುಖ್ಯ ದ್ವೀಪದಲ್ಲಿರುವ ಇಶಿಕಾವಾ ಪ್ರಾಂತ್ಯದಲ್ಲಿ 7.5 ತೀವ್ರತೆಯ ಭೂಕಂಪ ಸಂಭವಿಸಿತ್ತು. ಕಟ್ಟಡಗಳು ಉರುಳಿದ್ದವು, ರಸ್ತೆಗಳು ಬಿರುಕುಬಿಟ್ಟವು. ಮೀನುಗಾರಿಕಾ ದೋಣಿಗಳು ಕೂಡ ಮುಳುಗಿಹೋಗಿವೆ.ವಾಜಿಮಾ ಬಂದರಿನಲ್ಲಿ ಏಳು ಮಂದಿ ಸೇರಿದಂತೆ 10 ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಹೆಚ್ಚಿನ ಭೂಕಂಪಗಳು ರಿಕ್ಟರ್ ಮಾಪಕದಲ್ಲಿ 3 ಕ್ಕಿಂತ ಹೆಚ್ಚು ತೀವ್ರತೆಯನ್ನು ಹೊಂದಿವೆ. ಭೂಕಂಪದ ತೀವ್ರತೆ ಕ್ರಮೇಣ ಕಡಿಮೆಯಾಗಿದೆ.

ಕನಿಷ್ಠ 1.2 ಮೀಟರ್ ಎತ್ತರದ ಅಲೆಗಳು ಜಪಾನ್ ನ ವಾಜಿಮಾ ಬಂದರಿಗೆ ಅಪ್ಪಳಿಸಿತ್ತು.ದೊಡ್ಡ ಸುನಾಮಿ ಅಲೆಗಳು ಅಪ್ಪಳಿಸಿದ ಕುರಿತು ವರದಿಯಾಗಿಲ್ಲ.2011 ರಲ್ಲಿ ಭೂಕಂಪದ ನಂತರ ಸುನಾಮಿಯಿಂದಾಗಿ 16 ಸಾವಿರ ಮಂದಿ ಸಾವನ್ನಪ್ಪಿದ್ದರು. ಮಾರ್ಚ್ 2011 ರಲ್ಲಿ, 9 ತೀವ್ರತೆಯ ವಿನಾಶಕಾರಿ ಸುನಾಮಿ ಸಂಭವಿಸಿತ್ತು.

ಪರಿಹಾರ ಮತ್ತು ರಕ್ಷಣಾ ಕಾರ್ಯಗಳು ನಡೆಯುತ್ತಿದ್ದು, ಅವಶೇಷಗಳ ಅಡಿಯಲ್ಲಿ ಹುದುಗಿರುವ ಜನರನ್ನು ಪತ್ತೆಮಾಡಲಾಗುತ್ತಿದೆ. ಭೂಕಂಪನದಿಂದಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು, ವರ್ಷದ ಮೊದಲ ದಿನವೇ ಸೆಂಟ್ರಲ್ ಜಪಾನ್ ನ ನಾಗರೀಕರು ಇಡೀ ರಾತ್ರಿ ಕತ್ತಲೆಯಲ್ಲಿ ಮುಳುಗುವಂತಾಗಿದೆ. ಜಪಾನ್ ಮಿಲಿಟರಿ ಬೇಸ್ ನಲ್ಲಿ ಕನಿಷ್ಠ ಸಾವಿರಕ್ಕೂ ಅಧಿಕ ಮಂದಿ ಆಶ್ರಯ ಪಡೆದಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು