LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

20ರಂದು ದೀಕ್ಷಾ ರಜತ ಮಹೋತ್ಸವ ಭೋವಿ ಸಮಾಜ ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರವಹಿಸಿದೆ: ಜಗದ್ಗುರು ಶ್ರೀಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅಭಿಮತ

ಬೆಂಗಳೂರು: ಶ್ರೀ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನ, ಭೋವಿಗುರುಪೀಠದ ಪೀಠಾಧ್ಯಕ್ಷ ರಾದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಶ್ರೀಗಳು ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ತಂಗಡಗಿಯವರು ಮತ್ತು ಮಾಜಿ ಸಚಿವರಾದ ಅರವಿಂದ ಲಿಂಬಾವಳಿ ಯವರ ನೇತೃತ್ವದಲ್ಲಿ ವಿಶೇಷ ಪತ್ರಿಕಾಗೋಷ್ಠಿ ಜರುಗಿತು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು, ಭೋವಿ ಸಮಾಜ ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರವಹಿಸಿದ್ದು, ಇದೇ 20ರಂದು ದೀಕ್ಷಾ ರಜತ ಮಹೋತ್ಸವ ನಡೆಯಲಿದೆ ಎಂದು ತಿಳಿಸಿದ್ದಾರೆ.ಸಾಮಾಜಿಕ ಕ್ಷೇತ್ರದಲ್ಲಿ, ರಾಜಕೀಯ ಕ್ಷೇತ್ರದಲ್ಲಿ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ, ಅನಾದಿಕಾಲದಿಂದ ಭೋವಿ ಸಮಾಜ ನೀಡುತ್ತಾ ಬಂದಿರುವ ಕೊಡುಗೆಗಳನ್ನು ಸ್ಮರಿಸುವ ಸಲುವಾಗಿ ಮತ್ತು ಭೋವಿ ಸಮಾಜಕ್ಕೆ ರಾಷ್ಟ್ರಮಟ್ಟದ ಮನ್ನಣೆ ಹಾಗೂ ಕೇಂದ್ರ ಸರ್ಕಾರದ ಅನೇಕ ಸವಲತ್ತುಗಳನ್ನು ಸಮಾಜಕ್ಕೆ ನೀಡುವ ನಿಟ್ಟಿನಲ್ಲಿ ಒಗಟ್ಟಾಗಿ ನಡೆಯಬೇಕಾಗಿದೆ ಅದಕ್ಕಾಗಿ ಒಂದು ಸಂಘಟನೆಯ ಅವಶ್ಯಕತೆ ಇದೆ.

ಕರ್ನಾಟಕ ಮಾತ್ರವಲ್ಲದೆ ನೆರೆಯ ಆಂಧ್ರ ತೆಲಂಗಾಣ ತಮಿಳುನಾಡು ರಾಜ್ಯಗಳ ಭೋವಿ ಜನಾಂಗವನ್ನು ಒಟ್ಟಾಗಿ ಸೇರಿಸುವ ನಿಟ್ಟಿನಲ್ಲಿ ಒಂದು ಅಭೂತಪೂರ್ವ ಸಮ್ಮೇಳನವನ್ನು ಏರ್ಪಡಿಸಿ ಸಂಘಟನೆಯ ಶಕ್ತಿ ಮತ್ತು ಸಮಾಜದ ಬಲವರ್ಧನೆಗೆ ಶ್ರಮಿಸಲು ಸಮ್ಮೇಳನವನ್ನು ಏರ್ಪಡಿಸುತ್ತಿರುವುದಾಗಿ ತಿಳಿಸಿದರು. ಎಲ್ಲಾ ಮಾಧ್ಯಮ ಮತ್ತು ಪ್ರಿಂಟ್ ಮೀಡಿಯಾ ದವರ ಸಹಕಾರವನ್ನು ಕೋರಿದರು.ಕಾರ್ಯಕ್ರಮದಲ್ಲಿ ಎಸ್ ರವಿಕುಮಾರ್ ಅಧ್ಯಕ್ಷರು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮಕರ್ನಾಟಕ ಸರ್ಕಾರ, ಬೆಂಗಳೂರು ಮುಂತಾದ ಭೋವಿ ಸಮಾಜದ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು