LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

20 ವರ್ಷದ ಯುವತಿ ಮದುವೆಯಾಗಿದ್ದಕ್ಕೆ 40 ವರ್ಷದ ವ್ಯಕ್ತಿಯ ಹತ್ಯೆ; 6 ಜನರ ಬಂಧನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ 20 ವರ್ಷದ ಯುವತಿಯನ್ನು ಮದುವೆಯಾಗಿದ್ದ 40 ವರ್ಷದ ವ್ಯಕ್ತಿಯನ್ನು ಯುವತಿಯ ಪೋಷಕರು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಕೊಲೆ ಮಾಡಿದ ಆರೋಪದ ಮೇಲೆ ಯುವತಿ ಕುಟುಂಬದ ಆರು ಮಂದಿಯನ್ನು ಪೊಲೀಸರು ಗುರುವಾರ ಬಂಧಿಸಿದ್ದು, 20 ಜನರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಕೊಲೆಯಾದ ವ್ಯಕ್ತಿಯನ್ನು ಚಿತ್ರದುರ್ಗ ನಗರ ಸಮೀಪದ ಕೊಣನೂರು ಗ್ರಾಮದ ನಿವಾಸಿ ಮಂಜುನಾಥ್ ಎಂದು ಗುರುತಿಸಲಾಗಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ಭರಮಸಾಗರ ಪೊಲೀಸರು 20 ಜನರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಉಳಿದವರಿಗಾಗಿ ಹುಡುಕಾಟ ನಡೆಸಿದ್ದಾರೆ.

ಮಂಜುನಾಥ್‌ಗೆ ಇದು ಎರಡನೇ ಮದುವೆಯಾಗಿದ್ದು, ಈ ಶಿಲ್ಪಾ ಎಂಬಾಕೆಯನ್ನು ಮದುವೆಯಾಗಿ ಮೋಸ ಮಾಡಿದ್ದಾನೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಶಿಲ್ಪಾ ತನ್ನ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣದಲ್ಲಿ ಮಂಜುನಾಥ್ ಜೈಲು ಸೇರಿದ್ದ.

ಜೈಲಿನಿಂದ ಹೊರಬಂದ ನಂತರ, ಪಕ್ಕದ ಮನೆಯ ಯುವತಿಯೊಂದಿಗೆ ಪ್ರೀತಿಯ ಬಲೆಗೆ ಬಿದ್ದಿದ್ದ ಮಂಜುನಾಥ್​, ಓಡಿ ಹೋಗಿ ಆಕೆಯೊಂದಿಗೆ ಮದುವೆ ಮಾಡಿಕೊಂಡಿದ್ದರು.

ಆದರೆ ಯುವತಿ ಪೋಷಕರು ಕರೆ ಮಾಡಿ ಎಲ್ಲರ ಸಮ್ಮುಖದಲ್ಲೇ ಮದ್ವೆ ಮಾಡಿಕೊಡುವುದಾಗಿ ಯುವತಿಯನ್ನು ಪುಸಲಾಯಿಷಿ ಮನೆಗೆ ಕರೆಯಿಸಿದ್ದಾರೆ. ಬಳಿಕ ಯುವತಿಯ ಪೋಷಕರು, ಮಂಜುನಾಥನ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಜುನಾಥ್ 20 ದಿನಗಳ ಹಿಂದೆ ನಾಯಕನಹಟ್ಟಿಯ ಹೊಸಗುಡ್ಡ ದೇವಸ್ಥಾನದಲ್ಲಿ ಯುವತಿಯೊಂದಿಗೆ ಮದುವೆಯಾಗಿದ್ದ.

ಈ ಬೆಳವಣಿಗೆಯಿಂದ ಬೆಚ್ಚಿಬಿದ್ದ ಯುವತಿಯ ಮನೆಯವರು ಆತನನ್ನು ಕೊಲ್ಲಲು ಯೋಜನೆ ರೂಪಿಸಿದ್ದು, ಮಗಳು ಹಾಗೂ ಮಂಜುನಾಥ್ ಅವರಿಗೆ ಎಲ್ಲರ ಸಮ್ಮುಖದಲ್ಲೇ ಮದುವೆ ಮಾಡಿಕೊಡುವುದಾಗಿ ಮನವರಿಕೆ ಮಾಡಿಕೊಟ್ಟಿದ್ದಾರೆ.

ಮಹಿಳೆಯನ್ನು ವಾಪಸ್ ಮನೆಗೆ ಕರೆದೊಯ್ದಿದ್ದು, ಬುಧವಾರ ಮಂಜುನಾಥ್ ಅವರ ನಿವಾಸಕ್ಕೆ ಆಗಮಿಸಿದಾಗ ಪತ್ನಿಯ ಕುಟುಂಬಸ್ಥರು ದೊಣ್ಣೆ, ಕಬ್ಬಿಣದ ರಾಡ್‌ಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ.

ಮಂಜುನಾಥ್ ಸಾವಿನ ನಂತರ ಯುವತಿ ಪತಿಯ ಜತೆ ನಡೆಸಿದ ಸಂಭಾಷಣೆಯ ಆಡಿಯೋ ಕ್ಲಿಪ್‌ ಹೊರಬಿದ್ದಿದ್ದು, ತನ್ನ ನಿವಾಸಕ್ಕೆ ಬಂದು ತನ್ನನ್ನು ಕರೆದುಕೊಂಡು ಹೋಗುವಂತೆ ಒತ್ತಾಯಿಸಿದ್ದಾಳೆ. ಹೀಗಾಗಿ ಮಂಜುನಾಥ್ ಪತ್ನಿಯನ್ನು ಕರೆದುಕೊಂಡು ಹೋಗಲು ಒಪ್ಪುತ್ತಾನೆ. ಕೊನೆಗೂ ನಿನ್ನೆ ಸಂಜೆ ವೇಳೆ ಮಂಜುನಾಥ್ ಊರಿಗೆ ಬಂದಿದ್ದು, ಈ ವಿಚಾರ ತಿಳಿದ ಯುವತಿ ಪೋಷಕರು ಮನೆಗೆ ನುಗ್ಗಿ ಮಂಜುನಾಥನ ಮೇಲೆ ಆಯುಧಗಳಿಂದ ಮನಸೋ ಇಚ್ಛೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು