LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಜಾಲಿಗೆ ಗ್ರಾಮ ಪಂಚಾಯತಿಯ 2023-24ನೇ ಸಾಲಿನ ಮೊದಲನೇ ಹಂತದ ಗ್ರಾಮ ಸಭೆ

ದೇವನಹಳ್ಳಿ: ಗ್ರಾಮಗಳಲ್ಲಿ ನಡೆಯುವ ಅಹಿತಕರ ಘಟನೆಯನ್ನು ತಪ್ಪಿಸುವ ಸಲುವಾಗಿ ಕಣ್ಗಾವಲಿಗೆ ಸಿಸಿಟಿ ಕ್ಯಾಮರಾ ಅಳವಡಿಕೆ ಮಾಡಲಿದ್ದೇವೆ, ಸಿಎಸ್ ಆರ್ ಸೇವಾ ನಿಧಿಯ ಮೂಲಕ ಇನ್ನೂ ಒಳ್ಳೆಯ ಕಾರ್ಯಕ್ರಮಗಳನ್ನು ಜಾಲಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲಿದ್ದೇವೆ ಎಂದು ಜಾಲಿಗೆ ಗ್ರಾಮ ಪಂಚಾಯತಿ ಅಧ್ಯಕ್ಷ ಆನಂದ್ ಕುಮಾರ್.ಎಸ್.ಎಂ ಹೇಳಿದರು.

ದೇವನಹಳ್ಳಿ ತಾಲೂಕಿನ ಬೆಟ್ಟೇನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಂಘದ ಆವರಣದಲ್ಲಿ” ಜಾಲಿಗೆ ಗ್ರಾಮ ಪಂಚಾಯತಿಯ 2023-24ನೇ ಸಾಲಿನ ಮೊದಲನೇ ಹಂತದ ಗ್ರಾಮ ಸಭೆ”ಯು ಅಧ್ಯಕ್ಷ ಆನಂದ್ ಕುಮಾರ್.ಎಸ್.ಎಂ ರವರ ಅಧ್ಯಕ್ಷತೆಯಲ್ಲಿ ನಡೆಸಿ ಮಾತನಾಡಿದರು.

ಬೆಟ್ಟೇನಹಳ್ಳಿ ಗ್ರಾಮದಲ್ಲಿ 26.ಲಕ್ಷ ವೆಚ್ಚದಲ್ಲಿ ಸರ್ಕಾರಿ ಶಾಲೆಯ ಎರಡು ಕೊಠಡಿಗಳನ್ನು ನಿರ್ಮಾಣಕ್ಕೆ ಮತ್ತು 75ಸಾವಿರದ ಶಾಲೆಯ ಪಿಠೋಪಕರಣಗಳಿಗೆ ಜಾಲಿಗೆ ಗ್ರಾಮ ಪಂಚಾಯತಿಯ ಸದಸ್ಯ ಮಹೇಶಬಾಬು ಕೊಡುಗೆಯಾಗಿ ನೀಡಿರುವುದು ಶ್ಲಾಘನೀಯ ಹಾಗಾಗಿ ಗ್ರಾಮದ ಪರವಾಗಿ ಕಿರು ಸನ್ಮಾನದ ಮೂಲಕ ಅಭಿನಂದನೆಗಳನ್ನು ತಿಳಿಸಿದರು.

ಗ್ರಾ.ಪಂ.ಸದಸ್ಯರಾದ ಮಹೇಶಬಾಬು ಮಾತನಾಡಿ ಗ್ರಾಮ ಠಾಣಾ ವ್ಯಾಪ್ತಿಯಲ್ಲಿ ಇ -ಖಾತಾ ಸರಿಯಾಗಿ ತಲುಪಿಲ್ಲ, ಅಂಗನವಾಡಿಗೆ ನಿವೇಶನ ಇನ್ನೂ ಕಲ್ಪಿಸಿಲ್ಲ, ಸರ್ಕಾರಿ ಜಾಗ ಒತ್ತುವರಿ ತೆರುವು ಮಾಡಿಲ್ಲ ಇಂತಹ ಸಮಸ್ಯೆಗಳನ್ನು ನಮ್ಮ ಮೇಲಿನ ಹಂತದ ಜನಪ್ರತಿನಿಧಿಗಳನ್ನು ಪ್ರಶ್ನಿಸುವುದು ಜನರಲ್ಲಿ ಹೆಚ್ಚಾಗಬೇಕು, ಏಕಬಳಕೆಯ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಬೇಕು, ಸ್ವಾಇಚ್ಛೆಯಿಂದ ನಮ್ಮ ಸಾರ್ವಜನಿಕ ಆಸ್ತಿಗಳಾದ ರಸ್ತೆ,ಕೆರೆ ಮತ್ತು ಚರಂಡಿ ಸ್ವಚ್ಛತೆ ಕುರಿತು ಗ್ರಾಮದ ಜನರು ಗಮನಹರಿಸಬೇಕು ಎಂದರು.
ಸಭೆಯಲ್ಲಿ ಶೇ.75% ಅಂಕ ಗಳಿಸಿದ ಎಸ್‍ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ- 3000, ಪಿಯುಸಿ ವಿದ್ಯಾರ್ಥಿಗಳಿಗೆ 5000, ಪದವಿ ವಿದ್ಯಾರ್ಥಿಗಳಿಗೆ-7000 ನಗದು ಬಹುಮಾನ ವಿತರಿಸಲಾಯಿತು.

ಇದೇ ಸಂದರ್ಭದಲ್ಲಿ ಉಪ ತಹಸೀಲ್ದಾರ್ ಚೈತ್ರಾ, ಗ್ರಾಪಂ ನೂತನ ಉಪಾಧ್ಯಕ್ಷೆ ಭವ್ಯಾ ಕೆ.ಪ್ರಶಾಂತ್, ಸದಸ್ಯರಾದ ಮಹೇಶ್ಬಾಬು, ಶಿವಲಿಂಗಮ್ಮ, ರಾಧಮ್ಮ, ಅಶ್ವಿನಿ, ಪದ್ಮಾವತಿ, ಆನಂದ್ ಸಿ.ಎಂ., ಜಯಮ್ಮ, ಕೆಂಪರಾಜು, ಶೋಭಾ, ಆನಂದ್ ಸಿ.ಎಂ, ಅಪ್ಪಯ್ಯ ಬಿ.ಎಂ, ಮುನಿಯಪ್ಪ, ಮಂಜುಳ, ಜೆ.ಎ.ಸುಬ್ರಮಣ್ಯ, ರಾಧಮ್ಮ, ಸೌಮ್ಯ, ಲಕ್ಷ್ಮಮ್ಮ, ವಿಜಯ ರಾಘವೇಂದ್ರ, ಮುಖಂಡರಾದ ಪಟ್ಟಾಭಿರಾಮ್, ಮಹೇಶ್ ಕುಮಾರ್ ಬಿ.ಆರ್, ಪದ್ಮಾವತಿ ಮತ್ತು ಜಾಲಿಗೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ್.ಹೆಚ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಗ್ರಾಮಸ್ಥರು ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು